Home namma chikmagalur chikamagalur ಬೆಳ್ಳಿ ಮಾರಾಟ ಪ್ರಕರಣದ ಆರೋಪಿಯಿಂದ 41.90 ಲಕ್ಷ ರೂ ನಗದು ಜಪ್ತಿ
chikamagalurCrime NewsHomeLatest Newsnamma chikmagalur

ಬೆಳ್ಳಿ ಮಾರಾಟ ಪ್ರಕರಣದ ಆರೋಪಿಯಿಂದ 41.90 ಲಕ್ಷ ರೂ ನಗದು ಜಪ್ತಿ

Share
Share

ಚಿಕ್ಕಮಗಳೂರು: ಬೆಳ್ಳಿ ಮಾರಾಟದ ಹೆಸರಿನಲ್ಲಿ ನಡೆದಿದ್ದ ಬರೋಬ್ಬರಿ 45 ಲಕ್ಷ ರೂಪಾಯಿ ವಂಚನೆ ಪ್ರಕರಣವನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ನಂಬಿಸಿ ಹಣ ದೋಚಿ ತಲೆಮರೆಸಿಕೊಂಡಿದ್ದ ಮುಖ್ಯ ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಅರೆಸ್ಟ್ ಮಾಡಿರುವ ಖಾಕಿ ಪಡೆ, ಆತನಿಂದ 41.90 ಲಕ್ಷ ರೂಪಾಯಿ ನಗದನ್ನು ಜಪ್ತಿ ಮಾಡಿದೆ.

ಕಲ್ಯಾಣ ನಗರದ ನಿವಾಸಿ ರಮೇಶ್ ಎಂಬುವವರು ತಮಗೆ ಪರಿಚಯವಿದ್ದ ನಾಗರಾಜ್ ಮತ್ತು ಪ್ರಸಾದ್ ಎಂಬುವವರನ್ನು ನಂಬಿ ಮಾರಾಟಕ್ಕಾಗಿ ಬೆಳ್ಳಿ ನೀಡಿದ್ದರು. ಆದರೆ ಆ ಬೆಳ್ಳಿಯನ್ನು ಮಾರಿ ಬಂದ 45.20 ಲಕ್ಷ ರೂಪಾಯಿ ಹಣದೊಂದಿಗೆ ಆರೋಪಿಗಳು ಎಸ್ಕೆಪ್ ಆಗಿದ್ದರು. ಮೋಸ ಹೋದದ್ದನ್ನು ಅರಿತ ರಮೇಶ್ ತಕ್ಷಣವೇ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ಗಂಭೀರತೆ ಅರಿತ ಜಿಲ್ಲಾ ಪೊಲೀಸ್ ಅಧೀಕ್ಷಕ ಜೀತೇಂದ್ರ ಕುಮಾ‌ರ್ ದಯಾಮ ಅವರು ಆರೋಪಿಗಳ ಬೇಟೆಗೆ ತಕ್ಷಣವೇ ವಿಶೇಷ ತಂಡವನ್ನು ರಚಿಸಿದ್ದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ ಹಾಗೂ ಉಪಾಧೀಕ್ಷಕ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಅಖಾಡಕ್ಕಿಳಿದ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್‌ ನೇತೃತ್ವದ ಟೀಮ್, ವೈಜ್ಞಾನಿಕ ಹಾಗೂ ತಾಂತ್ರಿಕ ಆಯಾಮಗಳಲ್ಲಿ ತನಿಖೆ ತೀವ್ರಗೊಳಿಸಿತ್ತು. ಪೊಲೀಸರ ಹದ್ದಿನ ಕಣ್ಣಿನ ಕಾರ್ಯಾಚರಣೆಗೆ ಕೊನೆಗೂ ಯಶಸ್ಸು ಸಿಕ್ಕಿದ್ದು, ಮೂಡಿಗೆರೆ ತಾಲೂಕಿನ ಬಣಕಲ್ ಕೋಡಳ್ಳಿಯ ನಿವಾಸಿ ನಾಗರಾಜ ಎಂಬಾತನನ್ನು ಕದ್ದುಕುಳಿತಿದ್ದ ಜಾಗದಲ್ಲೇ ದಸ್ತಗಿರಿ ಮಾಡಲಾಗಿದೆ.

ಸದ್ಯ ಬಂಧಿತನಿಂದ ಸಿಂಹಪಾಲು ಹಣವನ್ನು ರಿಕವರಿ ಮಾಡಲಾಗಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ತನಿಖೆ ಚುರುಕುಗೊಂಡಿದೆ. ಕೇವಲ ಕೆಲವೇ ದಿನಗಳಲ್ಲಿ ಪ್ರಕರಣದ ಬೆನ್ನುಹತ್ತಿ ಆರೋಪಿಯನ್ನು ಹಳೇ ಸ್ಯಾಂಪಲ್ ಸಮೇತ ಲಾಕ್ ಮಾಡಿದ ಇಡೀ ಕ್ರೈಂ ಟೀಮ್ ಕಾರ್ಯಕ್ಷಮತೆಗೆ ಎಸ್ಪಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸೂಕ್ತ ಬಹುಮಾನವನ್ನೂ ಘೋಷಿಸಿದ್ದಾರೆ.

Rs 41.90 lakh cash seized from accused in silver sale case

Share

Leave a comment

Leave a Reply

Your email address will not be published. Required fields are marked *

Don't Miss

ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ

ಚಿಕ್ಕಮಗಳೂರು: ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆ.ಬಿ. ಹಾಳ್‌ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕಮಲಮ್ಮ ಎಂಬುವರು ಮೇ 19ರಂದು ತಮ್ಮ ಸೊಸೆಯೊಂದಿಗೆ...

ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣ ಪತ್ತೆ

ಕೊಪ್ಪ: ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ದಂಧೆಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಿಗಡಿ ಕಡೆಯಿಂದ ಹರಿಹರಪುರದ ಕಡೆಗೆ ಮರಳು ಸಾಗಿಸುತ್ತಿದ್ದಾಗ ಖಚಿತ...

Related Articles

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪುಂಡಾಟ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವಲಯ ವ್ಯಾಪ್ತಿಯ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ...

ರೈತ ಸಂಘದ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆ ಕ್ರಮಬದ್ಧ

ಚಿಕ್ಕಮಗಳೂರು: ತಾಲ್ಲೂಕು ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ತಾಲ್ಲೂಕು ಸಮಿತಿಯ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳ ನಿರ್ಣಯದಂತೆ...

ಮುಂಗಾರು ಹಾನಿ ತಡೆಗೆ ಕಟ್ಟೆಚ್ಚರ ವಹಿಸಲು ಸೂಚನೆ

ಚಿಕ್ಕಮಗಳೂರು: ಮುಂಗಾರು ಬಿರುಗಾಳಿ ಮಳೆಗೆ ಸಂಭವನೀಯ ಅಪಾಯ, ಹಾನಿ ತಡೆಗಟ್ಟುವುದು ಹಾಗೂ ತುರ್ತು ಕ್ರಮ ವಹಿಸುವ...

ನೇತ್ರಾವತಿ ಪೀಕ್‌ನ ಆನ್‌ಲೈನ್ ಟಿಕೆಟ್ ಬುಕ್ಕಿಂಗ್‌ ನಲ್ಲಿ ಭಾರೀ ಅಕ್ರಮ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಾರಣ ತಾಣವಾದ ನೇತ್ರಾವತಿ ಪೀಕ್‌ನ ಆನ್‌ಲೈನ್ ಟಿಕೆಟ್ ಬುಕ್ಕಿಂಗ್‌ನಲ್ಲಿ ಭಾರೀ ಅಕ್ರಮ...