Home namma chikmagalur chikamagalur ವಾಟ್ಸಾಪ್ ಮೂಲಕ 5,35 ಲಕ್ಷ ರೂ ವಂಚನೆ
chikamagalurCrime NewsHomeLatest Newsnamma chikmagalur

ವಾಟ್ಸಾಪ್ ಮೂಲಕ 5,35 ಲಕ್ಷ ರೂ ವಂಚನೆ

Share
Share

ಚಿಕ್ಕಮಗಳೂರು: ನಗರದ ವ್ಯಕ್ತಿಯೊಬ್ಬರು ವಾಟ್ಸಾಪ್ ಮೂಲಕ ಕಳುಹಿಸಿದ APK ಫೈಲ್ ಅನ್ನು ಡೌನ್‌ಲೋಡ್ ಮಾಡಿದಾಗ ತಮ್ಮ ಕೆನರಾ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 5,35,000 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ.

ಈ ಸಂಬಂಧ ಜನವರಿ 8, 2026 ರಂದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕರು ಇಂತಹ ವಂಚನೆಗಳ ಬಗ್ಗೆ ಎಚ್ಚರದಿಂದಿರಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

ಸಾಮಾನ್ಯವಾಗಿ ಆಂಡ್ರಾಯ್ಡ್ ಫೋನ್‌ಗಳಲ್ಲಿ ಬಳಸಲಾಗುವ APK ಫೈಲ್‌ಗಳು ಮಾಲ್‌ವೇರ್ ಅಥವಾ ಹ್ಯಾಕಿಂಗ್ ತಂತ್ರಾಂಶಗಳನ್ನು ಒಳಗೊಂಡಿರಬಹುದು.

ಇವುಗಳನ್ನು ಒಮ್ಮೆ ಇನ್‌ಸ್ಟಾಲ್ ಮಾಡಿದರೆ ಹ್ಯಾಕರ್‌ಗಳು ನಿಮ್ಮ ಫೋನ್‌ನ ಮೇಲೆ ಹಿಡಿತ ಸಾಧಿಸಿ, ಬ್ಯಾಂಕ್ ಒಟಿಪಿಗಳು, ಪಾಸ್‌ವರ್ಡ್‌ಗಳು ಮತ್ತು ನಿಮ್ಮ ಖಾಸಗಿ ಮಾಹಿತಿಯನ್ನು ಸುಲಭವಾಗಿ ಕದಿಯಬಲ್ಲರು.

ಆದ್ದರಿಂದ ಅಪರಿಚಿತ ಮೂಲಗಳಿಂದ ಬರುವ ಯಾವುದೇ ಲಿಂಕ್ ಅಥವಾ ಫೈಲ್‌ಗಳನ್ನು ಕ್ಲಿಕ್ ಮಾಡಬಾರದು. ಬ್ಯಾಂಕ್‌ಗಳು ಅಥವಾ ಸರ್ಕಾರಿ ಸಂಸ್ಥೆಗಳು ಎಂದಿಗೂ ವಾಟ್ಸಾಪ್ ಮೂಲಕ ಆಪ್‌ಗಳನ್ನು ಕಳುಹಿಸುವುದಿಲ್ಲ ಎನ್ನುವುದನ್ನು ಪ್ರತಿಯೊಬ್ಬರೂ ನೆನಪಿಡಬೇಕು.

ಒಂದು ವೇಳೆ ನೀವು ಇಂತಹ ಸೈಬರ್ ವಂಚನೆಗೆ ತುತ್ತಾದಲ್ಲಿ ತಕ್ಷಣವೇ 1930 ಸಂಖ್ಯೆಗೆ ಕರೆ ಮಾಡಿ ಅಥವಾ www.cybercrime.gov.in ವೆಬ್‌ಸೈಟ್ ಮೂಲಕ ದೂರನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

Rs 5.35 lakh fraud through WhatsApp

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...