Home namma chikmagalur chikamagalur ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸ್ವಲಾತ್ ವಾರ್ಷಿಕೋತ್ಸವ
chikamagalurHomeLatest Newsnamma chikmagalur

ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸ್ವಲಾತ್ ವಾರ್ಷಿಕೋತ್ಸವ

Share
Share

ಮೂಡಿಗೆರೆ: ಸಮಾಜದಲ್ಲಿ ಎಲ್ಲಾ ಧರ್ಮಗಳಲ್ಲೂ ಧಾರ್ಮಿಕ ಪದ್ದತಿ ದಾರಿ ತಪ್ಪಿದರೆ ಆ ಧರ್ಮದ ಅನುಯಾಯಿಗಳ ಜೀವನ ಕೂಡ ಹಳಿ ತಪ್ಪುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಗುರು ಅತ್ಪಾಕ್ ಫೈಝಿ ನಂದಾವರ ಹೇಳಿದರು.

ತಾಲ್ಲೂಕಿನ ಗಬ್ಬಲ್ ಗ್ರಾಮದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಎಸ್ ಕೆಎಸ್ಎಸ್ಎಫ್ ವತಿಯಿಂದ 15ನೇ ಸ್ವಲಾತ್ ವಾರ್ಷಿಕೋತ್ಸವ ಹಾಗೂ ಸಮಸ್ತ ಸಂಸ್ಥೆಯ ಶತಮಾನೋತ್ಸವ ಸಮ್ಮೇಳನದ ಪ್ರಚಾರಾರ್ಥಕವಾಗಿ  ನಡೆದ ಮತ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಧಾರ್ಮಿಕತೆಯ ಪದ್ಧತಿ ಹಾಗೂ ಪರಂಪರೆಗಳು ದಾರಿ ತಪ್ಪಿದಾಗ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಲಿದೆ. ಧಾರ್ಮಿಕ ವ್ಯವಸ್ಥೆಯನ್ನು ಸರಿದಾರಿಗೆ ಕೊಂಡೊಯ್ಯಲು ಆಯಾ ಧರ್ಮದ ಗುರುಗಳು ಪ್ರಯತ್ನಿಸಬೇಕು. ಎಲ್ಲಾ ಧರ್ಮಗಳ ಧರ್ಮಗ್ರಂಥಗಳು ಸಮಾಜಕ್ಕೆ ಒಳಿತಿನ ಸಂದೇಶವನ್ನು ಸಾರುತ್ತದೆ. ಧರ್ಮಗ್ರಂಥಗಳ ಮೇಲೆ ನಂಬಿಕೆ ಇರುವವರು ಸಮಾಜದಲ್ಲಿ ಸುಸಂಸ್ಕೃತರಾಗಿ ಎಲ್ಲಾ ಧರ್ಮಗಳನ್ನು ಒಂದೇ ರೀತಿಯಲ್ಲಿ ಪ್ರೀತಿಸುತ್ತಾರೆಎಂದರು.

ಬಂಟ್ವಾಳ ತಾಲ್ಲೂಕಿನ ಮಿತ್ತಬೈಲ್ ಇರ್ಷಾದ್ ದಾರಿಮಿ ಅಲ್ ಜು ಮಾತನಾಡಿ, ‘ಜಗತ್ತಿನಲ್ಲಿ ಸರ್ವ ಶ್ರೇಷ್ಠವಾದ ಗುಣವನ್ನು ಹೊಂದಲು ಶಿಕ್ಷಣದ ಅಗತ್ಯವಿದೆ. ಅನಕ್ಷರಸ್ಥರು ಸಮಾಜದಲ್ಲಿ ತಿರಸ್ಕೃತರಾಗುತ್ತಾರೆ. ಶಿಕ್ಷಣದಿಂದ ವ್ಯಕ್ತಿಯು ಸುಸಂಸ್ಕೃತನಾಗಬೇಕು. ಸಮಸ್ತ ಕೇರಳ ಎಂಬ ಧಾರ್ಮಿಕ ಸಂಸ್ಥೆಯ ವ್ಯಾಪ್ತಿಯಲ್ಲಿ ದೇಶದ ಉದ್ದಗಲಕ್ಕೂ ಶಿಕ್ಷಣ ಸಂಸ್ಥೆಗಳಿವೆ.

ಪ್ರತಿ ವರ್ಷ ಲಕ್ಷಾಂತರ ಮಂದಿ ವಿದ್ಯಾರ್ಥಿಗಳಿಗೆ ಅತ್ಯುತ್ತಮವಾದ ಶಿಕ್ಷಣ ನೀಡಿ, ಸಮಾಜದಲ್ಲಿ ಸುಸಂಸ್ಕೃತ ವ್ಯಕ್ತಿಗಳನ್ನಾಗಿ ಮಾಡಿ ಹೊರ ತರುವ ಕೆಲಸವನ್ನು ಸಮಸ್ತ ಕೇರಳ ಸಂಸ್ಥೆ ನಿರಂತರವಾಗಿ ಮಾಡುತ್ತಿದೆ. ಆ ಸಂಸ್ಥೆಯ 100ನೇ ವರ್ಷದ ಶತಮಾನೋತ್ಸವ ಕಾರ್ಯಕ್ರಮ ಮುಂದಿನ ವರ್ಷ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅದ್ದೂರಿಯಾಗಿ ನಡೆಯಲಿದೆ’ ಎಂದರು.

ಇದೇ ವೇಳೆ ಅನ್ವ‌ರ್ ಅಲಿ ಹುದವಿ ಮುಗ್ರಾಲ್ ಅವರ ಇಷ್ ಮಜ್ಜಿಸ್ ಕಾರ್ಯಕ್ರಮ ನಡೆಯಿತು. ಕೇರಳದ ಧಾರ್ಮಿಕ ವಿದ್ವಾಂಸ ಸಯ್ಯದ್ ಅಲಿ ತಂಗಳ್, ಗಬ್ಬಲ್ ಮಸೀದಿ ಖತೀಬ್ ಮಹಮ್ಮದ್ ಅನ್ನೀಫ್ ಫೈಝಿ, ಅನ್ಸಾರಿ ಯಮಾನಿ, ನಜೀರ್, ಎಸ್.ಕೆ.ಮಹಮ್ಮದ್, ಮೂಡಿಗೆರೆ ಬದ್ರಿಯಾ ಮಸೀದಿ ಖತೀಬ್ ಮುಸ್ತಫಾ ಯಮಾನಿ, ಸಿನಾನ್ ಫೈಝಿ, ಸುಲೈಮಾನ್ ಮುಸ್ಲಿಯಾರ್, ಸಿ.ಕೆ.ಇಬ್ರಾಹಿಂ, ಅಕ್ರಂ, ಬಿ.ಎಚ್.ಮಹಮ್ಮದ್, ಅಬ್ದುಲ್ಲಾ, ಕಿರುಗುಂದ ಅಬ್ಬಾಸ್, ಮೊಯ್ದಿನ್ ಸೇಟ್, ಮಹಮ್ಮದ್ ಫೈಜ್, ಮಹಮ್ಮದ್ ರಜೀನ್, ಮಹಮ್ಮದ್ ಅಲಿ, ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಮುಸ್ತಫಾ, ರಮೀಜ್, ಜಿ.ಎಂ.ರಮ್ಹಾನ್ ಮತ್ತಿತರರು ಇದ್ದರು.

Salat anniversary at Badria Jumma Masjid

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...