Home namma chikmagalur chikamagalur ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸ್ವಲಾತ್ ವಾರ್ಷಿಕೋತ್ಸವ
chikamagalurHomeLatest Newsnamma chikmagalur

ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸ್ವಲಾತ್ ವಾರ್ಷಿಕೋತ್ಸವ

Share
Share

ಮೂಡಿಗೆರೆ: ಸಮಾಜದಲ್ಲಿ ಎಲ್ಲಾ ಧರ್ಮಗಳಲ್ಲೂ ಧಾರ್ಮಿಕ ಪದ್ದತಿ ದಾರಿ ತಪ್ಪಿದರೆ ಆ ಧರ್ಮದ ಅನುಯಾಯಿಗಳ ಜೀವನ ಕೂಡ ಹಳಿ ತಪ್ಪುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಗುರು ಅತ್ಪಾಕ್ ಫೈಝಿ ನಂದಾವರ ಹೇಳಿದರು.

ತಾಲ್ಲೂಕಿನ ಗಬ್ಬಲ್ ಗ್ರಾಮದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಎಸ್ ಕೆಎಸ್ಎಸ್ಎಫ್ ವತಿಯಿಂದ 15ನೇ ಸ್ವಲಾತ್ ವಾರ್ಷಿಕೋತ್ಸವ ಹಾಗೂ ಸಮಸ್ತ ಸಂಸ್ಥೆಯ ಶತಮಾನೋತ್ಸವ ಸಮ್ಮೇಳನದ ಪ್ರಚಾರಾರ್ಥಕವಾಗಿ  ನಡೆದ ಮತ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಧಾರ್ಮಿಕತೆಯ ಪದ್ಧತಿ ಹಾಗೂ ಪರಂಪರೆಗಳು ದಾರಿ ತಪ್ಪಿದಾಗ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಲಿದೆ. ಧಾರ್ಮಿಕ ವ್ಯವಸ್ಥೆಯನ್ನು ಸರಿದಾರಿಗೆ ಕೊಂಡೊಯ್ಯಲು ಆಯಾ ಧರ್ಮದ ಗುರುಗಳು ಪ್ರಯತ್ನಿಸಬೇಕು. ಎಲ್ಲಾ ಧರ್ಮಗಳ ಧರ್ಮಗ್ರಂಥಗಳು ಸಮಾಜಕ್ಕೆ ಒಳಿತಿನ ಸಂದೇಶವನ್ನು ಸಾರುತ್ತದೆ. ಧರ್ಮಗ್ರಂಥಗಳ ಮೇಲೆ ನಂಬಿಕೆ ಇರುವವರು ಸಮಾಜದಲ್ಲಿ ಸುಸಂಸ್ಕೃತರಾಗಿ ಎಲ್ಲಾ ಧರ್ಮಗಳನ್ನು ಒಂದೇ ರೀತಿಯಲ್ಲಿ ಪ್ರೀತಿಸುತ್ತಾರೆಎಂದರು.

ಬಂಟ್ವಾಳ ತಾಲ್ಲೂಕಿನ ಮಿತ್ತಬೈಲ್ ಇರ್ಷಾದ್ ದಾರಿಮಿ ಅಲ್ ಜು ಮಾತನಾಡಿ, ‘ಜಗತ್ತಿನಲ್ಲಿ ಸರ್ವ ಶ್ರೇಷ್ಠವಾದ ಗುಣವನ್ನು ಹೊಂದಲು ಶಿಕ್ಷಣದ ಅಗತ್ಯವಿದೆ. ಅನಕ್ಷರಸ್ಥರು ಸಮಾಜದಲ್ಲಿ ತಿರಸ್ಕೃತರಾಗುತ್ತಾರೆ. ಶಿಕ್ಷಣದಿಂದ ವ್ಯಕ್ತಿಯು ಸುಸಂಸ್ಕೃತನಾಗಬೇಕು. ಸಮಸ್ತ ಕೇರಳ ಎಂಬ ಧಾರ್ಮಿಕ ಸಂಸ್ಥೆಯ ವ್ಯಾಪ್ತಿಯಲ್ಲಿ ದೇಶದ ಉದ್ದಗಲಕ್ಕೂ ಶಿಕ್ಷಣ ಸಂಸ್ಥೆಗಳಿವೆ.

ಪ್ರತಿ ವರ್ಷ ಲಕ್ಷಾಂತರ ಮಂದಿ ವಿದ್ಯಾರ್ಥಿಗಳಿಗೆ ಅತ್ಯುತ್ತಮವಾದ ಶಿಕ್ಷಣ ನೀಡಿ, ಸಮಾಜದಲ್ಲಿ ಸುಸಂಸ್ಕೃತ ವ್ಯಕ್ತಿಗಳನ್ನಾಗಿ ಮಾಡಿ ಹೊರ ತರುವ ಕೆಲಸವನ್ನು ಸಮಸ್ತ ಕೇರಳ ಸಂಸ್ಥೆ ನಿರಂತರವಾಗಿ ಮಾಡುತ್ತಿದೆ. ಆ ಸಂಸ್ಥೆಯ 100ನೇ ವರ್ಷದ ಶತಮಾನೋತ್ಸವ ಕಾರ್ಯಕ್ರಮ ಮುಂದಿನ ವರ್ಷ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅದ್ದೂರಿಯಾಗಿ ನಡೆಯಲಿದೆ’ ಎಂದರು.

ಇದೇ ವೇಳೆ ಅನ್ವ‌ರ್ ಅಲಿ ಹುದವಿ ಮುಗ್ರಾಲ್ ಅವರ ಇಷ್ ಮಜ್ಜಿಸ್ ಕಾರ್ಯಕ್ರಮ ನಡೆಯಿತು. ಕೇರಳದ ಧಾರ್ಮಿಕ ವಿದ್ವಾಂಸ ಸಯ್ಯದ್ ಅಲಿ ತಂಗಳ್, ಗಬ್ಬಲ್ ಮಸೀದಿ ಖತೀಬ್ ಮಹಮ್ಮದ್ ಅನ್ನೀಫ್ ಫೈಝಿ, ಅನ್ಸಾರಿ ಯಮಾನಿ, ನಜೀರ್, ಎಸ್.ಕೆ.ಮಹಮ್ಮದ್, ಮೂಡಿಗೆರೆ ಬದ್ರಿಯಾ ಮಸೀದಿ ಖತೀಬ್ ಮುಸ್ತಫಾ ಯಮಾನಿ, ಸಿನಾನ್ ಫೈಝಿ, ಸುಲೈಮಾನ್ ಮುಸ್ಲಿಯಾರ್, ಸಿ.ಕೆ.ಇಬ್ರಾಹಿಂ, ಅಕ್ರಂ, ಬಿ.ಎಚ್.ಮಹಮ್ಮದ್, ಅಬ್ದುಲ್ಲಾ, ಕಿರುಗುಂದ ಅಬ್ಬಾಸ್, ಮೊಯ್ದಿನ್ ಸೇಟ್, ಮಹಮ್ಮದ್ ಫೈಜ್, ಮಹಮ್ಮದ್ ರಜೀನ್, ಮಹಮ್ಮದ್ ಅಲಿ, ಅಬೂಬಕ್ಕರ್ ಸಿದ್ದೀಕ್, ಮಹಮ್ಮದ್ ಮುಸ್ತಫಾ, ರಮೀಜ್, ಜಿ.ಎಂ.ರಮ್ಹಾನ್ ಮತ್ತಿತರರು ಇದ್ದರು.

Salat anniversary at Badria Jumma Masjid

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...