ಚಿಕ್ಕಮಗಳೂರು: ಮೇ ೨ ರಂದು ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೧೧ ಗಂಟೆಯವರೆಗೆ ನಗರದ ಐಡಿಎಸ್ಜಿ ಕಾಲೇಜಿನ ಆವರಣದ ಸುತ್ತಮುತ್ತಲಿನ ಒಂದು ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿರುವ ಎಲ್ಲಾ ರೀತಿಯ ಮದ್ಯ ತಯಾರಿಕೆ, ಸಾಗಣೆ, ದಾಸ್ತಾನು ಮತ್ತು ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅವರು ಆದೇಶ ಹೊರಡಿಸಿದ್ದಾರೆ.
ಶೃಂಗೇರಿ ವಿಧಾನ ಸಭಾ ಕ್ಷೇತ್ರದ ೨೦೨೩ರ ಚುನಾವಣೆಗೆ ಸಂಬಂಧಿಸಿದಂತೆ ಮರು ಮತ ಎಣಿಕೆ ಕಾರ್ಯ ಮೇ ೨ ರಂದು ನಡೆಯಲಿದ್ದು, ಮರು ಮತ ಎಣಿಕೆ ಕಾರ್ಯವು ಸೂಕ್ಷ್ಮತೆಯಿಂದ ಕೂಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಸ್ತಾವನೆಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಡೂರು ತಾಲ್ಲೂಕು ಸಿಂಗಟಗೆರೆ ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಮೇ ೧ ರಂದು ಬ್ರಹ್ಮ ರಥೋತ್ಸವ, ರಾತ್ರಿ ಆರ್ಕೆಸ್ಟ್ರಾ ಮೇ ೨ ರಂದು ಶ್ರೀಸ್ವಾಮಿಯವರ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿವೆ. ಜಾತ್ರೆಯ ಸಂದರ್ಭದಲ್ಲಿ ಶಾಂತಿ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮೇ ೧ ರಂದು ಬೆಳಿಗ್ಗೆ ೬ ಗಂಟೆಯಿಂದ ೨ ರಂದು ಮಧ್ಯರಾತ್ರಿ ೧೨ ಗಂಟೆಯವರೆಗೆ ಯಾವುದೇ ರೀತಿಯ ಮದ್ಯ ಮಾರಾಟ ಮಾಡದಂತೆ ಸಿಂಗಟಗೆರೆ ಗ್ರಾಮದ ಶ್ರೀ ರಂಗನಾಥ ವೈನ್ ಶಾಪ್ ಹಾಗೂ ಎಲ್ಲಾ ನಮೂನೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆಯೂ, ಮದ್ಯ, ಬೀಯರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾಥsಗಳ ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅವರು ಆದೇಶ ಹೊರಡಿಸಿದ್ದಾರೆ.
Sale of liquor banned around IDSG College
Leave a comment