Home namma chikmagalur chikamagalur ಐಡಿಎಸ್‌ಜಿ ಕಾಲೇಜು ಸುತ್ತಮುತ್ತ ಮದ್ಯ ಮಾರಾಟ ನಿಷೇಧ
chikamagalurHomeLatest Newsnamma chikmagalur

ಐಡಿಎಸ್‌ಜಿ ಕಾಲೇಜು ಸುತ್ತಮುತ್ತ ಮದ್ಯ ಮಾರಾಟ ನಿಷೇಧ

Share
Share

ಚಿಕ್ಕಮಗಳೂರು: ಮೇ ೨ ರಂದು ಬೆಳಿಗ್ಗೆ ೬ ಗಂಟೆಯಿಂದ ರಾತ್ರಿ ೧೧ ಗಂಟೆಯವರೆಗೆ ನಗರದ ಐಡಿಎಸ್‌ಜಿ ಕಾಲೇಜಿನ ಆವರಣದ ಸುತ್ತಮುತ್ತಲಿನ ಒಂದು ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿರುವ ಎಲ್ಲಾ ರೀತಿಯ ಮದ್ಯ ತಯಾರಿಕೆ, ಸಾಗಣೆ, ದಾಸ್ತಾನು ಮತ್ತು ಮಾರಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅವರು ಆದೇಶ ಹೊರಡಿಸಿದ್ದಾರೆ.

ಶೃಂಗೇರಿ ವಿಧಾನ ಸಭಾ ಕ್ಷೇತ್ರದ ೨೦೨೩ರ ಚುನಾವಣೆಗೆ ಸಂಬಂಧಿಸಿದಂತೆ ಮರು ಮತ ಎಣಿಕೆ ಕಾರ್ಯ ಮೇ ೨ ರಂದು ನಡೆಯಲಿದ್ದು, ಮರು ಮತ ಎಣಿಕೆ ಕಾರ್ಯವು ಸೂಕ್ಷ್ಮತೆಯಿಂದ ಕೂಡಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಸ್ತಾವನೆಯನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಡೂರು ತಾಲ್ಲೂಕು ಸಿಂಗಟಗೆರೆ ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಮೇ ೧ ರಂದು ಬ್ರಹ್ಮ ರಥೋತ್ಸವ, ರಾತ್ರಿ ಆರ್ಕೆಸ್ಟ್ರಾ ಮೇ ೨ ರಂದು ಶ್ರೀಸ್ವಾಮಿಯವರ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿವೆ. ಜಾತ್ರೆಯ ಸಂದರ್ಭದಲ್ಲಿ ಶಾಂತಿ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮೇ ೧ ರಂದು ಬೆಳಿಗ್ಗೆ ೬ ಗಂಟೆಯಿಂದ ೨ ರಂದು ಮಧ್ಯರಾತ್ರಿ ೧೨ ಗಂಟೆಯವರೆಗೆ ಯಾವುದೇ ರೀತಿಯ ಮದ್ಯ ಮಾರಾಟ ಮಾಡದಂತೆ ಸಿಂಗಟಗೆರೆ ಗ್ರಾಮದ ಶ್ರೀ ರಂಗನಾಥ ವೈನ್ ಶಾಪ್ ಹಾಗೂ ಎಲ್ಲಾ ನಮೂನೆಯ ಮದ್ಯದ ಅಂಗಡಿಗಳನ್ನು ಮುಚ್ಚುವಂತೆಯೂ, ಮದ್ಯ, ಬೀಯರ್, ಮದ್ಯಸಾರ ಇತ್ಯಾದಿ ಅಬಕಾರಿ ಪದಾಥsಗಳ  ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ ಅವರು ಆದೇಶ ಹೊರಡಿಸಿದ್ದಾರೆ.

Sale of liquor banned around IDSG College

Share

Leave a comment

Leave a Reply

Your email address will not be published. Required fields are marked *

Don't Miss

ಲವ್ ಜಿಹಾದ್ ಖಂಡಿಸಿ ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಹಾಗೂ ದೇಶದ ಹಲವೆಡೆ ನಡೆಯುತ್ತಿರುವ ಲವ್ ಜಿಹಾದ್ ಹಾಗೂ ಕಾರ್ಪೊರೇಟ್ ಜಿಹಾದ್‌ನಂತಹ ಕೃತ್ಯಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್-ಬಜರಂಗದಳ ಹಾಗೂ ಮಾತೃಶಕ್ತಿ ದುರ್ಗಾ ವಾಹಿನಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು....

ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

ಚಿಕ್ಕಮಗಳೂರು : ಸರ್ವ ಜನರ ಉತ್ಸವವಾಗಿ ಜನೋತ್ಸವದ ರೀತಿ ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿಯನ್ನು ವೈಚಾರಿಕಾ ಕಾರ್ಯಕ್ರಮವಾಗಿ ಏ.೨೭ ರಂದು ಸೋಮವಾರ ಬೆಳಿಗ್ಗೆ ೧೦.೩೦ ಕ್ಕೆ...

Related Articles

ಇಳೆಹೊಳೆ ಗ್ರಾಮದಲ್ಲಿ ನಮ್ಮೂರ ಶಾಲೆ ಪ್ರತಿರೋಧ ಚಳವಳಿಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲೆಯ ಇಳೆಹೊಳೆ ಗ್ರಾಮದಲ್ಲಿ “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ಎಂದು ಹೆಸರಿರುವಬ್ಯಾನರ್ ಅನ್ನು ಶಾಲಾಭಿವೃದ್ಧಿ...

ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅವಶ್ಯಕ

ಚಿಕ್ಕಮಗಳೂರು: ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅತ್ಯವಶ್ಯಕ. ಈ ಹಾ ದಿಯಲ್ಲಿ ಪ್ರತಿಯೊಬ್ಬರು ಹೆಚ್ಚು ತೊಡಗಿಸಿಕೊಂಡು...

ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ

ಚಿಕ್ಕಮಗಳೂರು: ಅತ್ಯಂತ ಕುತೂಹಲ ಮೂಡಿಸಿದ್ದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ...

ಮತ ಎಣಿಕೆ ವಿಳಂಬ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಚಿಕ್ಕಮಗಳುರು: ರಾಜ್ಯ ಸರ್ಕಾರ ತಮ್ಮ ಶಾಸಕನ ಸೋಲಿನ ಭಯದಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸ್ಥಗಿತ...