Home namma chikmagalur chikamagalur ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪ
chikamagalurHomeLatest Newsnamma chikmagalur

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪ

Share
Share
ಚಿಕ್ಕಮಗಳೂರು: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನ‌ರ್ ಕಚೇರಿಗೆ ಚಿಕ್ಕಮಗಳೂರು ಮೂಲದ ವ್ಯಕ್ತಿ ದೂರು ನೀಡಿದ್ದಾರೆ.
ಚಿಕ್ಕಮಗಳೂರಿನ ದೀಪಕ್ ಮಯೂರ್ ಪಟೇಲ್ ಎಂಬುವವರು ದೂರು ನೀಡಿದ್ದು, ಚಿತ್ರೀಕರಣದ ನೆಪದಲ್ಲಿ ತಮಗೆ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸುದೀಪ್ ಅವರ ಸಹ ನಿರ್ಮಾಪಕರಾದ ಮಹೇಶ್ ಮತ್ತು ಗಡ್ಡ ವಿಜಿ ಅವರು ಈ ಹಿಂದೆ ಚಿತ್ರೀಕರಣಕ್ಕಾಗಿ ಬಂದಿದ್ದರು ಎಂದು ದೀಪಕ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು 2026 ರಿಂದಲೂ ಅವರು ಹಲವು ಬಾರಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಬೆಂಗಳೂರು ಕಮಿಷನರ್ ಅವರಿಗೆ ದೂರು ನೀಡುತ್ತಾ ಬಂದಿದ್ದು, ಈ ಪ್ರಕರಣವು ಈ ಹಿಂದೆ ನ್ಯಾಯಾಲಯದ ಮೆಟ್ಟಿಲು ಸಹ ಏರಿತ್ತು.
‘ವಾರಸ್ಥಾರ’ ಧಾರಾವಾಹಿ ಚಿತ್ರೀಕರಣಕ್ಕಾಗಿ ಎರಡು ವರ್ಷಗಳ ಕಾಲ ಅನುಮತಿ ಕೋರಿ ಬಂದಿದ್ದ ತಂಡವು, ಸುಮಾರು ನಾಲ್ಕು ತಿಂಗಳುಗಳ ಕಾಲ ಮಾತ್ರ ಚಿತ್ರೀಕರಣ ನಡೆಸಿತ್ತು. ಈ ಸಂದರ್ಭದಲ್ಲಿ ಕಲಾವಿದರ ವಾಸ್ತವ್ಯಕ್ಕಾಗಿ ತೋಟದಲ್ಲಿದ್ದ ಕಾಫಿ ಗಿಡಗಳು, ಸಿಲ್ವರ್ ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದು ಶೆಡ್ ನಿರ್ಮಾಣ ಮಾಡಲಾಗಿತ್ತು. ಇದರಿಂದ ತಮ್ಮ ತೋಟಕ್ಕೆ ವ್ಯಾಪಕ ಹಾನಿಯಾಗಿದೆ ಎಂದು ದೀಪಕ್ ಆರೋಪಿಸಿದ್ದಾರೆ.
ಆದರೆ, ನೋಟ್ ಬ್ಯಾನ್ ಆದ ಸಂದರ್ಭದಲ್ಲಿ ಚಿತ್ರೀಕರಣ ತಂಡವು ಇದ್ದಕ್ಕಿದ್ದಂತೆ ಬೆಂಗಳೂರಿಗೆ ವಾಪಸ್ ತೆರಳಿದ್ದು, ಸುಮಾರು 80 ಸಾವಿರ ರೂ. ಹಣವನ್ನು ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ, ಹಾನಿಗೊಳಗಾದ ತೋಟದ ಜಾಗವನ್ನು ಸರಿಪಡಿಸದೆ ಹಾಗೆಯೇ ಬಿಟ್ಟು ಹೋಗಲಾಗಿದೆ. ತಮಗಾದ ನಷ್ಟಕ್ಕೆ ಸೂಕ್ತ ಪರಿಹಾರ ಸಿಕ್ಕಿಲ್ಲ ಎಂಬ ಕಾರಣಕ್ಕೆ ದೀಪಕ್ ಅವರು ಇದೇ ಜ.16 ರಂದು ಬೆಂಗಳೂರು ಕಮಿಷನ‌ರ್ ಕಚೇರಿಗೆ ಮತ್ತೊಮ್ಮೆ ದೂರು ಸಲ್ಲಿಸಿದ್ದಾರೆ.
Sandalwood actor Kiccha Sudeep accused of fraud
Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...