Home namma chikmagalur ಬಿಜೆಪಿ ಪಕ್ಷ ಹತ್ತಿಕ್ಕುವ ಉದ್ದೇಶದಿಂದ ಸಂತೋಷ್‌ ಕೋಟ್ಯಾನ್‌ ಬಂಧನ
namma chikmagalurchikamagalurHomeLatest News

ಬಿಜೆಪಿ ಪಕ್ಷ ಹತ್ತಿಕ್ಕುವ ಉದ್ದೇಶದಿಂದ ಸಂತೋಷ್‌ ಕೋಟ್ಯಾನ್‌ ಬಂಧನ

Share
Share

ಚಿಕ್ಕಮಗಳೂರು: ರಾಜ್ಯ ಸರ್ಕಾರದ ದುರಾಡಳಿತವನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ಬಿಜೆಪಿ ಪಕ್ಷವನ್ನು ಹತ್ತಿಕ್ಕುವ ಉದ್ದೇಶದಿಂದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್‌ ಕೋಟ್ಯಾನ್‌ ಅವರನ್ನು ಬಂಧಿಸಲಾಗಿದೆ ಎಂದು ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಜಿಲ್ಲಾಧ್ಯಕ್ಷ ಕೆ.ಪಿ.ವೆಂಕಟೇಶ್‌ ಹೇಳಿದರು.

ಗುರುವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ,ಕಾರಾಗೃಹದಲ್ಲಿ ಖೈದಿಗಳಿಗೆ ರಾಜ್ಯಾಥಿತ್ಯ ಹಾಗೂ ರಾಜ್ಯ ಸರ್ಕಾರದ ವೈಪಲ್ಯದ ಬಗ್ಗೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಜಾತಿನಿಂಧನೆ ಪದವನ್ನು ಸಂತೋಷ್‌ ಕೋಟ್ಯಾನ್‌ ಬಳಕೆ ಮಾಡಿಲ್ಲ. ಆದರೂ. ಆತನ ಮೇಲೆ ಜಾತಿ ನಿಂಧನೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪೊಲೀಸ್‌ ಇಲಾಖೆ ಕ್ರಮವನ್ನು ಬಿಜೆಪಿ ಪಕ್ಷ ಖಂಡಿಸುತ್ತದೆ ಎಂದರು.

ಪೊಲೀಸ್‌ ಇಲಾಖೆ ಕಾನೂನುಬದ್ಧವಾಗಿ ಕೆಲಸ ಮಾಡಬೇಕಿತ್ತು. ಆದರೆ, ಕಾಂಗ್ರೆಸ್‌ ಪಕ್ಷದ ಅಣತಿಯಂತೆ ಸಂವಿಧಾನಬಾಹೀರವಾಗಿ ನಡೆದುಕೊಳ್ಳುತ್ತಿದೆ. ಸರ್ಕಾರದ ವೈಪಲ್ಯವನ್ನು ಯಾರು ಖಂಡಿಸುತ್ತಾರೋ ಅವರ ಆತ್ಮಸೈರ್ಯ ವನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದರು.

ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಹೊರಿಸಿ ಜೈಲಿಗೆ ಕಳಿಸುವುದು ಇದೆ ಮೊದಲಲ್ಲಾ ಎಂದ ಅವರು, ನೈಜ್ಯ ಜಾತಿ ನಿಂಧನೆಗೆ ಒಳಗಾದವರಿಗೆ ನ್ಯಾಯ ಸಿಗುತ್ತಿಲ್ಲ, ಜಾತಿ ನಿಂಧನೆ ಮಾಡಿದವರ ಮೇಲೆ ಯಾವುದೇ ಕ್ರಮವಾ ಗುತ್ತಿಲ್ಲ, ಇಂತಹ ಸುಳ್ಳು ಜಾತಿ ನಿಂಧನೆ ಪ್ರಕರಣವನ್ನು ದಾಖಲಿಸಿ, ನೈಜ್ಯ ಪ್ರಕರಣಗಳನ್ನು ಮರೆಮಾಚಲಾಗುತ್ತಿದೆ. ಪೊಲೀಸ್‌ ಇಲಾಖೆ ಸಂವಿಧಾನಾತ್ಮಕವಾಗಿ ಕೆಲಸ ಮಾಡಬೇಕು. ಯಾರೋ ಒತ್ತಡಕ್ಕೆ ಮಣಿಯಬಾರದು ಎಂದು ಒತ್ತಾಯಿಸಿದರು.

ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ, ಗೃಹಸಚಿವರ ವಿರುದ್ಧ ಪದ ಬಳಕೆಯನ್ನು ಪಕ್ಷ ಸಮರ್ಥಿಸಿಕೊಳ್ಳುವುದಿಲ್ಲ, ಆ ಕ್ಷಣದಲ್ಲಿಯೇ ತಿದ್ದಿಕೊಳ್ಳುವಂತೆ ಹೇಳಿದ್ದೇವೆ. ಅಟ್ರಾಸಿಟಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಸಂತೋಷ್‌ ಕೋಟ್ಯಾನ್‌ ತಮ್ಮ ಭಾಷಣದಲ್ಲಿ ಎಲ್ಲಿಯೂ ಜಾತಿನಿಂಧನೆ ಪದ ಬಳಕೆ ಮಾಡಿಲ್ಲ, ಮುಂದಿನ ದಿನಗಳಲ್ಲಿ ದತ್ತಜಯಂತಿ ಬರುತ್ತಿದ್ದು ಬಿಜೆಪಿ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ಪೊಲೀಸ್‌ ಇಲಾಖೆ ಅಟ್ರಾಸಿಟಿ ಪ್ರಕರಣ ದಾಖಲಿಸಿದೆ ಎಂದು ದೂರಿದರು.

ಗೃಹಸಚಿವರನ್ನು ಮೆಚ್ಚಿಸುವ ಉದ್ದೇಶದಿಂದ ಪೊಲೀಸ್‌ ಇಲಾಖೆ ಅಟ್ರಾಸಿಟಿ ಪ್ರಕರಣ ದಾಖಲಿಸಿದೆ. ಈ ವಿಚಾರದಲ್ಲಿ ಪೊಲೀಸ್‌ ಇಲಾಖೆ ಏಕಪಕ್ಷೀಯ ನಿರ್ಧಾರ ತಗೆದುಕೊಂಡಿರುವುದು ಖಂಡನೀಯ ಎಂದರು. ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಡಾ.ನರೇಂದ್ರ, ದೀಪಕ್‌ ದೊಡ್ಡಯ್ಯ, ಯತೀಶ್‌, ಹಂಪಯ್ಯ ಇದ್ದರು.

Santosh Kotian arrested with the intention of suppressing the BJP party

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...