Home Latest News ಮೇ.13ಕ್ಕೆ ಸರ್ವ ಶರಣರ ಜಾಥಾ ಕಾರ್ಯಕ್ರಮ
Latest NewschikamagalurHomenamma chikmagalur

ಮೇ.13ಕ್ಕೆ ಸರ್ವ ಶರಣರ ಜಾಥಾ ಕಾರ್ಯಕ್ರಮ

Share
Share

ಚಿಕ್ಕಮಗಳೂರು:  ಲಿಂಗಾಯಿತ ಎಲ್ಲ ಒಳ ಪಂಗಡಗಳು ಒಟ್ಟಾಗಿ ಸರ್ವ ಶರಣರ ಜಾಥಾ ಕಾರ್ಯಕ್ರಮವನ್ನು ಮೇ.೧೩ ರಂದು ಮಂಗಳವಾರ ಸಂಜೆ ೪ ಗಂಟೆಗೆ ಆಯೋಜಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಅಧ್ಯಕ್ಷ ಕೆ.ಸಿ. ನಿಶಾಂತ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಅಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಕಲ್ಯಾಣ ಮಂಟಪದಿಂದ ವೀರಗಾಸೆ, ಡೊಳ್ಳುಕುಣಿತ, ಮಲೆನಾಡು ಹಳ್ಳಿ ವಾದ್ಯ, ನಾಸಿಕ್ ಡೋಲು, ಡಿಜೆಯೊಂದಿಗೆ ಶರಣರ ಸ್ತಬ್ಧ ಚಿತ್ರಗಳೊಂದಿಗೆ ಮೆರವಣಿಗೆ ಹೊರಟು ಅರಳೀಮರ, ಶಂಕರ ಮಠ, ಹನುಮಂತಪ್ಪ ವೃತ್ತ ಮಾರ್ಗವಾಗಿ ಎಂ.ಜಿ ರಸ್ತೆಯಲ್ಲಿ ಸಾಗಿ ಅಜಾದ್ ವೃತ್ತದಲ್ಲಿ ಸಮಾವೇಶಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಸಂಜೆ ೭ ಗಂಟೆಗೆ ನಡೆಯಲಿರುವ ಬೃಹತ್ ಧಾರ್ಮಿಕ ಸಭೆಯ ದಿವ್ಯಸಾನಿಧ್ಯವನ್ನು ಕಲ್ಯಾಣ ನಗರ ಬಸವತತ್ವ ಪೀಠದ ಡಾ. ಬಸವ ಮರುಳಸಿದ್ದ ಸ್ವಾಮೀಜಿ ಹಾಗೂ ಶಂಕರದೇವರ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದಾರೆ ಎಂದರು.

ಹುಲಿಕೆರೆ ದೊಡ್ಡಮಠದ ವಿರೂಪಾಕ್ಷ ಶಿವಾಚಾರ್ಯ ಸ್ವಾಮಿಗಳು, ಪುಷ್ಪಗಿರಿ ಮಹಾ ಸಂಸ್ಥಾನ ಮಠದ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಬೇರುಗಂಡಿ ಮಠದ ರೇಣುಕ ಮಹಾಂತ ಶಿವಾಚಾರ್ಯ ಸ್ವಾಮಿಗಳು ಹಾಗೂ ಸಿಂದಿಗೆರೆ ಕರಡಿಗವಿ ಮಠದ ಶಿವಶಂಕರ ಶಿವಯೋಗಿ ಮಹಾಸ್ವಾಮಿಗಳು ಭಾಗವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದರು.

ಈ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ, ಬಸವರಾಜ್ ಯು.ಎಂ, ಸುದರ್ಶನ್ ಬಸವೇಗೌಡ, ಬಿ.ಹೆಚ್. ಹರೀಶ್, ಪಿ.ಜಿ. ಸೋಮಶೇಖರಪ್ಪ. ಎಂ.ಸಿ ಶಿವಾನಂದಸ್ವಾಮಿ, ಹೆಚ್.ಸಿ. ಕಲ್ಮರುಡಪ್ಪ, ಮಹಡಿಮನೆ ಸತೀಶ್, ಬಿ.ಸಿ. ಬಸವರಾಜು ಸೇರಿದಂತೆ ಸಮಾಜದ ಮುಖಂಡರುಗಳು ಭಾಗವಹಿಸಲಿದ್ದಾರೆಂದು ಹೇಳಿದರು.

ಈ ಕಾರ್ಯಕ್ರಮವನ್ನು ವೀರಶೈವ ಲಿಂಗಾಯಿತ ಸಮುದಾಯದ ಎಲ್ಲಾ ಒಳಪಂಗಡಗಳು ಒಟ್ಟಾಗಿ ಸೇರಿ ಆಚರಣೆ ಮಾಡುತ್ತಿದ್ದು, ಸರ್ವರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ನಂಜೇಶ್ ಬೆಣ್ಣೂರು, ಮುಖಂಡರಾದ ಕೆ.ಆರ್. ಚರಣ್ ಕುಮಾರ್, ಶರತ್ ಎಲ್.ಎಂ, ಸಿ.ಎಂ. ಧನಂಜಯ್‌ಗೌಡ, ಕಾರ್ತಿಕ್ ಸೋಮಶೇಖರ್, ದರ್ಶನ್ ನಲ್ಲೂರು, ಹೃತಿಕ್ ಕೆ.ಎಸ್, ಕೀರ್ತನ್ ಮಲ್ಲಿನಾಥ್ ಮತ್ತಿತರರು ಉಪಸ್ಥಿತರಿದ್ದರು

Sarva Sharanara Jatha program on May 13th

Share

Leave a comment

Leave a Reply

Your email address will not be published. Required fields are marked *

Don't Miss

ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಜಿ.ಎಸ್‌. ಬಾಲಕೃಷ್ಣ ಕರ್ತವ್ಯದಿಂದ ವಜಾ

ಚಿಕ್ಕಮಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಬಾಲಕೃಷ್ಣ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತ ನಿರ್ಧಾರವನ್ನು...

ರೈತನಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಸಾವು – ಹೊತ್ತಿ ಉರಿದ ಬೈಕ್!

ಚಿಕ್ಕಮಗಳೂರು: ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿ ರೈತರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು-ಕಡೂರು ರಸ್ತೆಯ ಎಐಟಿ ಸರ್ಕಲ್ ಬಳಿ ನಡೆದಿದೆ....

Related Articles

ಒಂದು ವರ್ಷದ ಅಭಿನಯ – ರಂಗ ತರಬೇತಿ ಡಿಪ್ಲೋಮಾಗೆ ಆಹ್ವಾನ

ಚಿಕ್ಕಮಗಳೂರು: ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ ೨೦೨೫-೨೬ (ಒಂದು ವರ್ಷದ ಅಭಿನಯ ಮತ್ತು...

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಒದಗಿಸಿ ನ್ಯಾಯ ದೊರಕಿಸಲು ಸಮೀಕ್ಷೆ

ತರೀಕೆರೆ: ‘ಪರಿಶಿಷ್ಟ ಜಾತಿಯಲ್ಲಿ ರುವ 101 ಜಾತಿಗಳಿಗೂ ಅವರ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಒದಗಿಸಿ...

ಮೂಡಿಗೆರೆಯಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ

ಮೂಡಿಗೆರೆ: ‘ಸತ್ಯದ ಹಾದಿ ಯಲ್ಲಿ ಸಾಗುವ ಮೂಲಕ ದಂಪತಿ ಸಂಬಂಧವನ್ನು ಗಟ್ಟಿ ಮಾಡಿಕೊ ಳ್ಳಬೇಕು’ ಎಂದು...

ಕಮ್ಮರಗೋಡು ಗ್ರಾಮದ ಕೃಷಿಹೊಂಡದಲ್ಲಿ ಕಾಡಾನೆ ನೀರಾಟ

ಮೂಡಿಗೆರೆ: ಗೋಣಿಬೀಡು ಹೋಬಳಿಯ ಕಮ್ಮರಗೋಡು ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಬಂದಿದ್ದ ಕಾಡಾನೆಯೊಂದು ಕೃಷಿಹೊಂಡಕ್ಕೆ ಇಳಿದು ಅರ್ಧ...