Home Latest News ಎಐ ತಂತ್ರಜ್ಞಾನದಿಂದ ಸಮಯ ಉಳಿತಾಯ
Latest NewschikamagalurHomenamma chikmagalur

ಎಐ ತಂತ್ರಜ್ಞಾನದಿಂದ ಸಮಯ ಉಳಿತಾಯ

Share
Share

ಚಿಕ್ಕಮಗಳೂರು:  ಶಿಕ್ಷಕರಿಗಾಗಿ ಜನರೇಟಿವ್ ಎಐಯೊಂದಿಗೆ ದೈನಂದಿನ ಕೆಲಸಗಳಲ್ಲಿ ಸ ಮಯವನ್ನು ಉಳಿಸಲು, ಸೂಚನೆಗಳನ್ನು ವೈಯಕ್ತೀಕರಿಸಲು, ಪಾಠಗಳು ಮತ್ತು ಚಟುವಟಿಕೆಗಳನ್ನು ಸೃಜ ನಾತ್ಮಕ ರೀತಿಯಲ್ಲಿ ವರ್ಧಿಸಲು ಸಹಕಾರಿ ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ|| ಸಿ.ಟಿ.ಜಯದೇವ್ ಹೇಳಿದರು.

ನಗರದ ಎಐಟಿ ಕಾಲೇಜು ಸಭಾಂಗಣದಲ್ಲಿ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಸಹಯೋಗದಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ‘ಜನರೇಟಿವ್ ಎ.ಐ.ಫಾರ್ ದ ಮಾರ್ಡನ್ ಎಜುಕೇಟರ್ ಎಂಬ ವಿಷಯ ಕುರಿತು ಅಧ್ಯಾಪಕರುಗಳ ಅಭಿವೃದ್ದಿಗೆ ಏರ್ಪಡಿಸಿದ್ದ ಆರು ದಿನಗಳ ಕಾ ರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಯಂ-ಗತಿಯ ಕೋರ್ಸ್ ಶಿಕ್ಷಕರ ಕಾರ್ಯನಿರತ ವೇಳಾಪಟ್ಟಿಗೆ ಹೊಂದಿಕೊಳ್ಳುತ್ತದೆ ಮತ್ತು ನಮ್ಯತೆ ಯನ್ನು ಮನಸ್ಸಿನಲ್ಲಿಟ್ಟುಕೊಳ್ಳುತ್ತದೆ. ಇದು ಎಲ್ಲಾ ವಿಭಾಗಗಳ ಶಿಕ್ಷಕರಿಗೆ ಪ್ರಾಯೋಗಿಕ ಅನುಭವವನ್ನು ನೀಡು ತ್ತದೆ ಹಾಗೂ ಕೋರ್ಸ್ ಅನ್ನು ಪೂರ್ಣಗೊಳಿಸಲಿದೆ ಎಂದು ತಿಳಿಸಿದರು.

ಎಐ ತಜ್ಞರು ಅಭಿವೃದ್ಧಿಪಡಿಸಿರುವ ಈ ಕೋರ್ಸ್ ಎಐ ಅನ್ನು ನಿಮ್ಮ ಅಭ್ಯಾಸಕ್ಕೆ ತರಲು ನಿಮಗೆ ಸಹಾ ಯ ಮಾಡುತ್ತದೆ. ನೀವು ಎಐ ಬಗ್ಗೆ ಮೂಲಭೂತ ತಿಳುವಳಿಕೆಯನ್ನು ಸಹ ಪಡೆಯಬಹುದು. ಈ ತಂತ್ರಜ್ಞಾ ನದ ಅವಕಾಶಗಳು ಮತ್ತು ಮಿತಿಗಳು ಮತ್ತು ಅದನ್ನು ಜವಾಬ್ದಾರಿಯುತವಾಗಿ ಹೇಗೆ ಬಳಸುವುದು ಎಂಬು ದನ್ನು ನೀವು ಕಲಿಯಬಹುದು ಎಂದರು.

ಕೌಶಲ್ಯ ಟೆಕ್ನಿಕಲ್ ಟ್ರೈನಿಂಗ್ ಮತ್ತು ಕನ್ಸಲ್ಟೆನ್ಸಿ ಸರ್ವಿಸ್‌ನ ಸಂಸ್ಥಾಪಕ ರಘುಪ್ರಸಾದ್ ಮಾತನಾಡಿ ಜನರೇಟಿವ್ ಎಐ ಎಂಬ ವಿಷಯವು ನಿಜಕ್ಕೂ ಇಂದಿನ ಯುಗಕ್ಕೆ ಅಗತ್ಯವಾಗಿದ್ದು, ಅಧ್ಯಾಪನದಲ್ಲಿ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ದಾರಿ ಮಾಡುತ್ತದೆ. ಜೊತೆಗೆ ತಂತ್ರಜ್ಞಾನವನ್ನು ನುರಿತು ತಜ್ಞರಿಂದ ಕಲಿಯುವ ಅದ್ಬುತ ವೇದಿಕೆ ಇದಾಗಿದ್ದು ಭಾಗವಹಿಸುವ ನವೀನ ಕಲಿಕರಿಗೆ ಉಪಯೋಗ ಎಂದರು.

ಇದೇ ವೇಳೆ ವಿವಿಧ ಕಾಲೇಜಿನಿಂದ ೫೦ಕ್ಕೂ ಹೆಚ್ಚು ಪ್ರಾಧ್ಯಾಪಕರುಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಹಾಗೂ ಪಾ ಧ್ಯಾಪಕಿ ಡಾ|| ಪುಷ್ಪ ರವಿಕುಮಾರ್ ವಿಭಾಗದ ಸಂಯೋಜಕರಾದ ಪ್ರೊ.ಎಸ್.ಹರೀಶ್, ಪ್ರೊ.ಸಿ.ಎ.ಅನ್ಸರ್ ಪಾಷಾ, ಪ್ರೊ.ಜೆ.ಮಣಿಕಂಠಪ್ರಸಾದ್, ಪ್ರೊ.ಅರ್ಪಿತ ಆಯೋಜನಾ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Saving time with AI technology

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...