Home namma chikmagalur chikamagalur ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2
chikamagalurHomeLatest Newsnamma chikmagalur

ಏ.30 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2

Share
Share

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ 2 ಇದೇ ಏ.30 ರಿಂದ ಆರಂಭಗೊಳ್ಳುತ್ತಿರುವುದರಿಂದ ಪರೀಕ್ಷಾ ತಯಾರಿ ಕುರಿತು ಅಪರ ಜಿಲ್ಲಾಧಿಕಾರಿ ನಂಜುಡೇಗೌಡ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಏ.30 ರಿಂದ ಮೇ 13 ರ ವರೆಗೆ ಪರೀಕ್ಷೆ 2 ನಡೆಸುವುದಕ್ಕೆ ಪಿಯುಸಿ ಪರೀಕ್ಷಾ ಮಂಡಳಿ ವೇಳಾ ಪಟ್ಟಿ ಸಿದ್ದಪಡಿಸಿದೆ. ಅದರಂತೆ ಪರೀಕ್ಷೆಗೆ ಬೇಕಾದ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಸಿಸಿ ಟಿವಿ ಕ್ಯಾಮರಾ ಅಳವಡಿಕೆ, ವೆಬ್‌ ಕಾಸ್ಟಿಂಗ್‌ ಹಾಗೂ ಪರೀಕ್ಷಾ ಪ್ರಶ್ನ ಪತ್ರಿಕೆಗೆ ಪೂರೈಕೆ ಸೇರಿದಂತೆ ಎಲ್ಲವನ್ನೂ ನಿಯಮಾನುಸಾರ ತಯಾರಿ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ 7 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ 2 ನಡೆಯಲಿದ್ದು, ಈ ಪೈಕಿ ಎನ್‌ಆರ್‌ಪುರ, ಶೃಂಗೇರಿ, ಕೊಪ್ಪ, ಚಿಕ್ಕಮಗಳೂರು, ಮೂಡಿಗರೆ, ತರೀಕೆರೆ ಹಾಗೂ ಕಡೂರು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 1744 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.

ಈ ಪೈಕಿ 844 ವಿದ್ಯಾರ್ಥಿಗಳು ಕಳೆದ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು. ಏ.9 ರಂದು ಪ್ರಕಟವಾದ ಫಲಿತಾಂಶದಲ್ಲಿ ಅಂಕ ಕಡಿಮೆ ಬಂದಿದೆ ಎಂಬ ಕಾರಣಕ್ಕೆ ಮರು ಪರೀಕ್ಷೆ ತೆಗೆದುಕೊಂಡ 658 ವಿದ್ಯಾರ್ಥಿಗಳು, ಕಳೆದ ವರ್ಷ ಅನುತ್ತೀರ್ಣರಾದ 227 ಹಾಘೂ ಖಾಸಗಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದುಕೊಂಡ 8 ವಿದ್ಯಾರ್ಥಿಗಳಿದ್ದಾರೆ

Second PUC exam 2 from 30th

Share

Leave a comment

Leave a Reply

Your email address will not be published. Required fields are marked *

Don't Miss

ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ಸಾವು

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಐತಿಹಾಸಿಕ ಅಯ್ಯನಕೆರೆಯಲ್ಲಿ ಈಜಲು ಹೋಗಿದ್ದ 13 ವರ್ಷದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಚಿಕ್ಕಮಗಳೂರು ನಗರದ ದಂಟರಮಕ್ಕಿ ನಿವಾಸಿಯಾದ ಪೃಥ್ವಿರಾಜ್ ಮೃತಪಟ್ಟ...

ರಬ್ಬರ್ ತೋಟದಲ್ಲಿ ಮನುಷ್ಯನ ತಲೆಬುರುಡೆ -ಮೂಳೆಗಳು ಪತ್ತೆ

ಎನ್.ಆರ್.ಪುರ: ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಅರಳಿಕೊಪ್ಪ ಗ್ರಾಮದ ರಬ್ಬರ್ ತೋಟವೊಂದರಲ್ಲಿ ಮನುಷ್ಯನನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಎಲ್ಲೋ ಬಿನ್ ಅವರಚ್ಚನ್ ಎಂಬುವವರಿಗೆ ಸೇರಿದ ರಬ್ಬರ್ ತೋಟದಲ್ಲಿ...

Related Articles

ಸಂವಿಧಾನದ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಸಾವಿರ ಸಿದ್ದಾಂತಗಳನ್ನು ನೀಡಿದ್ದಾರೆ

ಚಿಕ್ಕಮಗಳೂರು: ಇತ್ತೀಚಿನ ವರ್ಷಗಳಲ್ಲಿ ಡಾ|ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಬದಲಾಯಿಸುತ್ತೇವೆಂಬ ಮಾತುಗಳು ಕೇಳಿ ಬರುತ್ತಿದೆ. ಇಂತಹ...

ಇಂದು ಕೈವಾರ ತಾತಯ್ಯನವರ ದೇವಾಲಯ ಉದ್ಘಾಟನೆ

ಚಿಕ್ಕಮಗಳೂರು: ತಾಲೂಕಿನ ಸಗನಿಪುರ ರಸ್ತೆಯ ಕೈವಾರ ಗಿರಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಶ್ರೀಯೋಗಿನರೇಯಣ ಯತೀಂದ್ರ ಕೈವಾರ...

ಕಾಂಗ್ರೆಸ್ – ಮಿತ್ರ ಪಕ್ಷದಿಂದ ದೇಶದ ಮಹಿಳೆಯರಿಗೆ ಮಾಡಿದ ಅಪಮಾನ

ಚಿಕ್ಕಮಗಳೂರು:ಸಂಸತ್ತಿನಲ್ಲಿ ನಾರಿಶಕ್ತಿ ಮಹಿಳಾ ಮೀಸಲಾತಿ ವಿರುದ್ಧ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಮತಚಲಾಯಿಸುವ ಮೂಲಕ...

ಎಸ್‌ಎಸ್‌ಎಲ್‌ಸಿ ಫಲಿತಾಂಶದ ಸ್ಕ್ಯಾನ್ ಕಾಪಿ ಬಂದಾಗ 72 ಅಂಕ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಕೆಲವೊಮ್ಮೆ ತಾಂತ್ರಿಕ ದೋಷಗಳು ವಿದ್ಯಾರ್ಥಿಗಳ ಜೀವನದ ಜೊತೆ ಹೇಗೆ ಆಟವಾಡುತ್ತವೆ...