Home namma chikmagalur chikamagalur ರಾಜ್ಯಾದ್ಯಂತ ಆಗಸ್ಟ್ 26 ರಿಂದ ಸೀರತ್ ಅಭಿಯಾನ
chikamagalurHomeLatest Newsnamma chikmagalur

ರಾಜ್ಯಾದ್ಯಂತ ಆಗಸ್ಟ್ 26 ರಿಂದ ಸೀರತ್ ಅಭಿಯಾನ

Share
Share

ಚಿಕ್ಕಮಗಳೂರು: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮದಿನದ ಅಂಗವಾಗಿ ಆಗಸ್ಟ್ ೨೬ರಿಂದ ಸೆಪ್ಟೆಂಬರ್ ೬ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ) ಎಂಬುದು ಅಭಿಯಾನದ ಶೀರ್ಷಿಕೆಯಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್‌ನ ಜಿಲ್ಲಾ ಸಂಚಾಲಕ ರಿಜ್ವಾನ್ ಖಾಲಿದ್ ತಿಳಿಸಿದರು.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮುಹಮ್ಮದ್(ಸ) ಅವರು ಜಗತ್ತಿನಲ್ಲಿ ತಂದ ಪರಿವರ್ತನೆಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿತ್ತು ಎಂದರು.

ಪ್ರವಾದಿ ಮುಹಮ್ಮದ್(ಸ) ಅವರ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ಅವರ ಕುರಿತು ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು ಹಾಗೂ ಪರಸ್ಪರ ಬಾಂಧವ್ಯವನ್ನು ಬಲಪಡಿಸುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ರಿಜ್ವಾನ್ ಖಾಲಿದ್ ತಿಳಿಸಿದರು.

ಅಭಿಯಾನದ ಅಂಗವಾಗಿ ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಯೋಗೇಶ್ ಮಾಸ್ಟರ್ ಅವರು ಬರೆದ ‘ಮಾನವ ಮನಸ್ಸಿನ ಕೃಷಿಕ’ ಮನದೊಡೆಯ ಪ್ರವಾದಿ ಮುಹಮ್ಮದ್(ಸ)’ ಹಾಗೂ ಪತ್ರಕರ್ತ ಅಬ್ದುಸ್ಸಲಾಮ್ ಪುತ್ತಿಗೆ ಅವರು ಬರೆದ ‘ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)’ ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಡಾ. ಮಹಮದ್ ಸಾಲಿ, ಸೈಯದ್ ತನ್ವೀರ್ ಹಾಗೂ ಉಮರ್ ಅಹಮದ್ ಉಪಸ್ಥಿತರಿದ್ದರು.

Seerat campaign from August 26 across the state

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ ಆರ್‌ಸಿಸಿ ಬಾಕ್ಸ್ ಕಾಮಗಾರಿಗೆ ಸಂಬಂಧಿಸಿದಂತೆ ಲೈನ್ ಬ್ಲಾಕ್ ಹಾಗೂ ಪವರ್ ಬ್ಲಾಕ್ ಕೈಗೊಳ್ಳುತ್ತಿರುವುದರಿಂದ ಚಿಕ್ಕಮಗಳೂರು...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಪೊಲೀಸ್ ಠಾಣಾ...

Related Articles

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ...

ಎನ್.ಐ.ಏ ತನಿಖೆಗೆ ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್-ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಬ್ಯಾನರ್‌ಗೆ ಪಾಕಿಸ್ತಾನಕ್ಕೆ...

3 ಟನ್ ಕಬ್ಬಿಣದ ಸರಳು ಕಳವು

ಚಿಕ್ಕಮಗಳೂರು: ನಿರ್ಮಾಣ ಹಂತದಲ್ಲಿದ್ದ ಅಂಬೇಡ್ಕರ್ ವಸತಿ ನಿಲಯ ಕಟ್ಟಡ ಕಾಮಗಾರಿಗೆ ಸಂಗ್ರಹಿಸಿಟ್ಟಿದ್ದ ಸುಮಾರು 3 ಟನ್...

ಎಪಿಕೆ ಫೈಲ್ ಡೌನ್‌ಲೋಡ್ – ಖಾತೆಯಿಂದ ₹1.27 ಲಕ್ಷ ವಂಚನೆ

ಚಿಕ್ಕಮಗಳೂರು: ಮೊಬೈಲ್‌ಗೆ ಅಪರಿಚಿತ ಎಪಿಕೆ (APK) ಫೈಲ್ ಡೌನ್‌ಲೋಡ್ ಆಗುವ ಮೂಲಕ ವೈಯಕ್ತಿಕ ಬ್ಯಾಂಕಿಂಗ್ ವಿವರಗಳನ್ನು...