Home Political News ತಮ್ಮದೇ ಸರ್ಕಾರದ ವಿರುದ್ಧ ಎಂಎಲ್ ಮೂರ್ತಿ ಕೆಂಡಾಮಂಡಲ
Political News

ತಮ್ಮದೇ ಸರ್ಕಾರದ ವಿರುದ್ಧ ಎಂಎಲ್ ಮೂರ್ತಿ ಕೆಂಡಾಮಂಡಲ

Share
Share

ಚಿಕ್ಕಮಗಳೂರು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್ ಮೂರ್ತಿ ತಮ್ಮದೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಂಎಲ್ ಮೂರ್ತಿ ಇದೊಂದು ಕಮರ್ಷಿಯಲ್ ಇಲಾಖೆ ಆಗಿದ್ದು ಪಶ್ಚಿಮ ಘಟ್ಟದ ಹೆಸರಿನಲ್ಲಿ ಭಾರೀ ಅನುದಾನ ಬರುತ್ತಿದೆ ಜತೆಗೆ ರಾಜ್ಯ ಸರ್ಕಾರವೇ ಟಿಂಬರ್ ಮರ್ಚೆಂಟ್ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಡಿ ಕಾರಿದ್ದಾರೆ. ಆನೆ ಹಾವಳಿ ತಡೆಯುವಲ್ಲಿ ವಿಫಲವಾಗಿರುವ ಅರಣ್ಯ ಇಲಾಖೆಯವರಿಗೆ ಯಾವ ಆಹಾರಗಳನ್ನು ನೀವು ಕಾಡಿನಲ್ಲಿ ಪ್ರಾಣಿಗಳಿಗಾಗಿ ಬೆಳೆಸಿದ್ದೀರಿ ಎಂದು ಗುಡುಗಿದ್ದಾರೆ

ರೈತ ಸಂಘಟನೆಗಳು ಕಾಫಿತೋಟದ ಮಾಲೀಕರು ಸಾರ್ವಜನಿಕರು ಕಷ್ಟ ಹೇಳಿಕೊಂಡು ಬೊಬ್ಬೆ ಹೊಡೆದರೂ ಕನಿಷ್ಟ ಪ್ರತಿಕ್ರಿಯೆ ಕೂಡ ಕೊಡದ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ವಿರುದ್ಧ ಕೆಂಡಾಮಂಡಲ ರಾಗಿರುವ ಎಂಎಲ್ಎಂ ಬಿಪಿಎಲ್ ಕಾರ್ಡ್ ವಿತರಣೆಯಲ್ಲಿ ಮುಖ್ಯವಾಗಿ ಅಲ್ಲಿನ ಅಧಿಕಾರಿಗಳೇ ಭ್ರಷ್ಟಾಚಾರ ಮಾಡಿದ್ದು ಈ ಲೂಟಿಯನ್ನ ಒಪ್ಪಲು ಸಾಧ್ಯವಿಲ್ಲ ಕಳ್ಳರು ಯಾರು ಎಂದು ತಿಳಿಯಬೇಕಾದರೆ ಪ್ರತಿ ನ್ಯಾಯಬೆಲೆ ಅಂಗಡಿಗಳ ಮುಂದೆ ನಾಮಫಲಕ ಗಳಲ್ಲಿ ಅಲ್ಲಿನ ಫಲಾನುಭವಿಗಳ ಪಟ್ಟಿ ಭಾವಚಿತ್ರ ಸಹಿತ ಪ್ರಕಟಿಸಬೇಕು ಎಂದು ಎಂಎಲ್ಎಂ ಒತ್ತಾಯಿಸಿದ್ದಾರೆ.

ಈ ಮೂಲಕ ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಆಡಳಿತ ಇರುವ ಮುಖಂಡರಿಗೆ ತೀವ್ರ ಮುಜುಗರ ಉಂಟಾಗುವುದು ಮಾತ್ರ ಸತ್ಯ

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...