Home Latest News ಚಿಕ್ಕಮಗಳೂರಿನ ಬಿಜೆಪಿ ಭೀಷ್ಮನಿಗೆ ಇದೆಂತಾ ದುಸ್ಥಿತಿ ಬಂತು
Latest News

ಚಿಕ್ಕಮಗಳೂರಿನ ಬಿಜೆಪಿ ಭೀಷ್ಮನಿಗೆ ಇದೆಂತಾ ದುಸ್ಥಿತಿ ಬಂತು

Share
Share

ಚಿಕ್ಕಮಗಳೂರು : ಕೇಸರಿ ಪಂಜೆ. ವೈಟ್ ಶರ್ಟ್. ಗಡ್ಡ-ಕೂದಲೆಲ್ಲಾ ಬಿಳಿ. ರಸ್ತೆ ಬದಿ ಕುಳಿತಿರುವ ಇವ್ರ ಹೆಸರು ವಿಠಲ್ ಆಚಾರ್ಯ. ವಯಸ್ಸು 92. ಮೂಲತಃ ಉಡುಪಿ ಜಿಲ್ಲೆಯವರು. ಆದ್ರೆ, ಕರ್ಮಭೂಮಿ ಕಾಫಿನಾಡು ಚಿಕ್ಕಮಗಳೂರು. ದಶಕಗಳಿಂದ ಇಲ್ಲೇ ನೆಲೆಯೂರಿರೋ ಇವರು ಆರ್.ಎಸ್.ಎಸ್. ಕಟ್ಟಾಳು. 7ನೇ ವಯಸ್ಸಿನಿಂದ 84ನೇ ವಯಸ್ಸಿನವರೆಗೆ ಸಂಘಕ್ಕಾಗಿ ಜೀವ ತೇಯ್ದಿದ್ದಾರೆ. 1975ರಲ್ಲಿ ಅಂದಿನ ಪ್ರಧಾನಿ ದೇಶದ ಮೇಲೆ ಎಮರ್ಜೆನ್ಸಿ ಹೇರಿದಾಗ ಅದರ ವಿರುದ್ಧ ಹೋರಾಡಿ ಯಡಿಯೂರಪ್ಪ, ಪಿ.ಜಿ.ಆರ್.ಸಿಂಧ್ಯಾ, ಶಂಕರಮೂರ್ತಿ, ಕಲ್ಲಡ್ಕ ಪ್ರಭಾಕರ್ ಭಟ್ ಜೊತೆ ಬೆಳಗಾವಿ-ಬಳ್ಳಾರಿ ಜೈಲಿನಲ್ಲಿ ದಿನ ಕಳೆದಿದ್ದಾರೆ. ಚಿಕ್ಕಮಗಳೂರು ನಗರಸಭೆ ಸದಸ್ಯರಾಗಿದ್ದ ಇವರು, ಜನಸಂಘದಿಂದ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸಿದ್ದರು. ಕರ್ನಾಟಕದ ಅಯೋಧ್ಯೆ ಎಂದೇ ಕರೆಸಿಕೊಳ್ಳೋ ದತ್ತಪೀಠದ ಹೋರಾಟದಲ್ಲೂ ಸಿ.ಟಿ.ರವಿ, ಕಾರ್ಕಳ ಸುನೀಲ್ ಕುಮಾರ್ ಬೆನ್ನೆಲುಬಾಗಿ ನಿಂತವರು. ಆದರೆ, ಇಂದು ಬೀದಿಯಲ್ಲಿ ಜೀವನ ಕಳೆಯುತ್ತಿದ್ದಾರೆ. ನಾಲ್ಕು ಗಂಡು, ಒಂದು ಹೆಣ್ಣು ಮಗುವಿದ್ದು ಎಲ್ಲರೂ ಡಾಕ್ಟ್ರು-ಇಂಜಿನಿಯರ್. ಕೊಟ್ಯಾಂತರ ಆಸ್ತಿ ಇದ್ರು ಇಂದು ಅನಾಥರಾಗಿ ಸಂಧ್ಯಾಕಾಲವನ್ನ ಬೀದಿ ಬದಿ ಕಳೆಯುತ್ತಿದ್ದಾರೆ

92 ವರ್ಷದ ವಿಠಲ್ ಆಚಾರ್ಯ ಜೀವನದಲ್ಲಿ 107 ಪ್ರಕೃತಿ ಯಜ್ಞ ಮಾಡಿದ್ದಾರೆ. ಅದು ನಿಲ್ಲಬಾರದು ಅನ್ನೋದು ಇವ್ರ ಬಯಕೆ. ನಿಸ್ವಾರ್ಥವಾಗಿ ಪ್ರಕೃತಿಗೆ ಮಾಡುವ ಯಜ್ಞವದು. ಈ ಯಜ್ಞಕ್ಕೆ ಹಾಕುವ ವಸ್ತುಗಳು ಕಾರ್ಬನ್ ಡೈಆಕ್ಸೈಡ್ ಆದರೂ ಕೂಡ ಪ್ರಕೃತಿ ಅದನ್ನ ಪಡೆದು ನಮಗೆ ಆಕ್ಸಿಜನ್ ನೀಡುತ್ತೆ. ಅದು ನಿಲ್ಲಬಾರದು ಅಂತ ಈ ಇಳಿವಯಸ್ಸಲ್ಲಿ ಹೋರಾಡ್ತಿದ್ದಾರೆ. ಇಂದಿನ ಪೀಳಿಗೆ ಜನರಿಗೆ ಆಸಕ್ತಿ ಇಲ್ಲ. ಯಜ್ಞ ನಿಲ್ಲಬಾರದು ಅಂತ ಬ್ಯಾಂಕಿನಲ್ಲಿ 25 ಲಕ್ಷ ಹಣವಿಟ್ಟು ಪ್ರತಿವರ್ಷ ಯಜ್ಞ ಮಾಡ್ತಿದ್ರಂತೆ. ಆದ್ರೆ, ತಾನು ಸತ್ತ ನಂತರವೂ ಯಜ್ಞ ನಿಲ್ಲಬಾರದು ಅಂತ ಮಕ್ಕಳಿಗೆ ಆಸ್ತಿ ಮಾಡಿ, ಅವರಿಗೊಂದು ದಡ ಮುಟ್ಸಿ ಯಜ್ಞಕ್ಕೆ ಅಂತ ಒಂದು ಸೈಟ್ ಇಟ್ಕೊಂಡಿದ್ದರು. ಆ ಸೈಟ್ ಮಾರಿ ಅಥವ ಅದರಲ್ಲಿ ಕಾಂಪ್ಲೆಕ್ಸ್ ಕಟ್ಟಿ ಟ್ರಸ್ಟ್ ನಿರ್ಮಿಸಿ ಬಂದ ಹಣದಲ್ಲಿ ಯಜ್ಞ ನಡೆಸಬೇಕು ಅನ್ನೋದು ಇವ್ರ ಬಯಕೆ. ಹೋರಾಟ. ಕೊನೆ ಆಸೆ. ಆದರೆ, ಇವರಿಗೆ ಹೆತ್ತಮಕ್ಕಳೇ ಮೋಸ ಮಾಡಿದ್ದಾರಂತೆ. ಮಕ್ಕಳೇ ಮೋಸ ಮಾಡಿದ್ದಾರೆಂದು ಅವರ ಅನ್ನ ನನಗೆ ಬೇಡ ಅಂತ ಮನೆ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ಮಾಡ್ತಿದ್ದಾರೆ.

ಒಟ್ಟಾರೆ ಇವ್ರಿಗೆ ಇರೋ ಮಕ್ಕಳೆಲ್ಲರೂ ಸಿರಿವಂತರೆ, ಆದರೂ, ಈ ಇಳಿವಯಸ್ಸಿನಲ್ಲಿ ಮಕ್ಕಳ ಮನೆಗೆ ಹೋಗದೇ ಬೇರೆಡೆ ಇದ್ದು 84 ವರ್ಷ ಆಗೋವರೆಗೂ ಹೇಗೋ ಪ್ರಕೃತಿ ಯಜ್ಞ ಮಾಡಿದ್ದಾರೆ. ಆದರೀಗ ತಾನೇ ಕಷ್ಟ ಪಟ್ಟು ಮಾಡಿದ್ದ ಜಾಗ ಇಲ್ಲ. ಆ ಜಾಗ ಟ್ರಸ್ಟ್‍ಗೆ ಕೊಡಲೇಬೇಕು. ಪ್ರತಿವರ್ಷ ಪ್ರಕೃತಿಯಜ್ಞ ನಡೆಯಲೇಬೇಕು. ನಿಲ್ಲಬಾರದು ಅಂತ ಬೀದಿಯಲ್ಲಿ ಕುಳಿತು ಹೋರಾಟ ಮಾಡುವಂತಾಗಿರೋದು ನಿಜಕ್ಕೂ ದುರಂತ.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...