Home Latest News ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಷಡಕ್ಷರಿ ಪುನರಾಯ್ಕೆ
Latest News

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಷಡಕ್ಷರಿ ಪುನರಾಯ್ಕೆ

Share
Share

ರಾಜ್ಯ ಸರ್ಕಾರಿ ನೌಕರರ ಸಂಘ ದ ರಾಜ್ಯ ಅಧ್ಯಕ್ಷ ಸ್ಥಾನ ಮತ್ತು ಖಜಾಂಚಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
964 ಮತದಾರರು ಇದ್ದು ಬಿರುಸಿನಿಂದ ಚುನಾವಣೆಯಲ್ಲಿ ಮತ ಚಲಾಯಿಸಲಾಯಿತು.
ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಷಡಕ್ಷರಿ ಸ್ಪರ್ಧೆ ಮಾಡಿದ್ದು ಇವರ ವಿರುದ್ಧ ಕೃಷ್ಣೇಗೌಡರು ಪ್ರಬಲವಾದ ಪೈಪೋಟಿ ನೀಡಿದರೂ ಷಡಕ್ಷರಿ 59 ಮತಗಳ ಅಂತರದಿಂದ ವಿಜಯ ಮಾಲೆ ತನ್ನದಾಗಿಸಿ ಕೊಂಡಿದ್ದಾರೆ.
ಖಜಾಂಚಿ ಸ್ಥಾನಕ್ಕೆ ಕೃಷ್ಣೇಗೌಡರ ಬಣದ ಶಿವರುದ್ರಯ್ಯ ಚುನಾಯಿತರಾದರೆ ಷಡಕ್ಷರಿ ಬಣದ ನಾಗರಾಜ್ ಆರ್ ಜುಮನ್ನನವರ್ ಪರಾಭವಗೊಂಡರು.
ಬೆಳಗ್ಗೆಯಿಂದ ನಡೆದ ಬಿರುಸಿನ ಮತದಾನ ನೋಡಿದರೆ ಯಾವ ಕಾರ್ಪೊರೇಟ್ ಎಲೆಕ್ಷನ್ ಮೀರಿಸುವಂತೆ ಇತ್ತು ಒಂದೊಂದು ಮತಕ್ಕೂ ರೇಟ್ ಫಿಕ್ಸ್ ಮಾಡಲಾಗಿತ್ತು ಎಂಬ ಮಾತುಗಳನ್ನು ನೌಕರರೇ ಮಾತನಾಡುತ್ತಿದ್ದರು.
ಕೃಷ್ಣೇಗೌಡರ ಪರ ಸರ್ಕಾರವೇ ಟೊಂಕಕಟ್ಟಿ ನಿಂತಿದ್ದು ಷಡಕ್ಷರಿಗೆ ಆತಂಕ ತದ್ದಿತ್ತು ಆದರೂ ಮಾಡಿದ ಕೆಲಸ ಕೈ ಹಿಡಿದಿದೆ ಎನ್ನನುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...