Home ಹಿಂದುಳಿದ ವರ್ಗಗಳ ರಾಜ ಶಾಹು ಮಹಾರಾಜ್
HomechikamagalurLatest Newsnamma chikmagalur

ಹಿಂದುಳಿದ ವರ್ಗಗಳ ರಾಜ ಶಾಹು ಮಹಾರಾಜ್

Share
Share

ಚಿಕ್ಕಮಗಳೂರು: ಶಾಹು ಮಹಾರಾಜ ಅವರು ದೀನ ದಲಿತರಿಗಾಗಿ ವಿವಿಧ ಯೋಜನೆ ಗಳನ್ನು ಜಾರಿಗೊಳಿಸಿ ಹಿಂದುಳಿದ ವರ್ಗದ ರಾಜನೆಂದೇ ಗುರುತಿಸಿಕೊಂಡವರು ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಹೇಳಿದರು.

ನಗರದ ಜಿಲ್ಲಾ ಬಿಎಸ್‌ಪಿ ಕಚೇರಿಯಲ್ಲಿ ಗುರುವಾರ ನಡೆದ ಶಾಹು ಮಹಾರಾಜ್‌ರವರ ಜನ್ಮದಿನಾಚರ ಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಭಾರತೀಯ ನೆಲದಲ್ಲಿ ಸಮ ಸಂಸ್ಕೃತಿಯ ಪ್ರತಿಪಾದನೆ ಮಾಡಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಅಧಿ ಕಾರ ನಡೆಸಿದವರು ಶಾಹುಮಹಾರಾಜರು. ತಳಸಮುದಾಯವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಜಾರಿಗೆ ತಂದವರು ಎಂದು ಹೇಳಿದರು.
ಶಾಹುರವರ ಕ್ರಾಂತಿಕಾರಕ ಹೆಜ್ಜೆಗಳಿಂದ ಅನೇಕ ಹಿಂದುಳಿದ ವರ್ಗದವರ ಮೇಲೆ ಬರಲು ಸಾಧ್ಯವಾ ಯಿತು. ಹೀಗಾಗಿ ತಳಸಮುದಾಯದವರು ಸದಾ ಶಾಹು ಮಹಾರಾಜರನ್ನು ಸ್ಮರಿಸಬೇಕು. ಶಾಹುರವರ ಬ ದುಕಿನಲ್ಲಿ ಅಳವಡಿಸಿಕೊಂಡ ಸಾಮಾಜಿಕ ಪ್ರಜ್ಞೆ, ಹಿಂದುಳಿದವರಿಗೆ ಸ್ಪಂದಿಸಿದ ಗುಣಗಳನ್ನು ಮೈಗೂಡಿಸಿಕೊ ಳ್ಳಬೇಕು ಎಂದು ತಿಳಿಸಿದರು.

ಸಮಾಜದಲ್ಲಿ ಸೌಹಾರ್ದ ಮೂಡಿಸುವುದಕ್ಕಾಗಿ ಶಾಹು ಮಹಾರಾಜರು ಶ್ರಮಿಸಿದ್ದಲ್ಲದೇ ಬೇರೊಬ್ಬ ರಿಗೂ ಅದಕ್ಕಾಗಿ ಚೈತನ್ಯ ತುಂಬಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ಹೋರಾಟ ಮತ್ತು ಉದ್ದೇಶವನ್ನು ನಾ ವುಗಳು ಪೂರೈಸಬೇಕಾದ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಮಾತನಾಡಿ ವೈಚಾರಿಕತೆಯ ಭದ್ರ ಬುನಾದಿಯನ್ನು ಸಾಮಾಜಿಕ ಪರಿವರ್ತನ ಚಳವಳಿಯ ಸಂದರ್ಭದಲ್ಲಿ ಶಾಹೂ ಮಹಾರಾಜರು ಹಾಕಿದ್ದಾರೆ. ಅದರ ಫಲ ವನ್ನು ನಾವೀಗ ಪ್ರಜಾಪ್ರಭುತ್ವದಲ್ಲಿ ಅನುಭವಿಸುತಿದ್ದೇವೆ. ಸಾಧನೆ ಮಾಡಿದ ಮಹನೀಯರ ಜಯಂತಿ ಕಾ ರ್ಯಕ್ರಮ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಎಸ್ಪಿ ತಾಲ್ಲೂಕು ಅಧ್ಯಕ್ಷ ಹೆಚ್.ಕುಮಾರ್ ಶಾಹು ಮಹಾರಾಜರು ಶೋಷಿತರನ್ನು ಆರ್ಥಿಕವಾಗಿ ಸಬಲರಾಗಿಸುವುದಕ್ಕಾಗಿ ಹಲವಾರು ಯೋಜನೆಗಳನ್ನು ಪರಿಚಯಿಸುವ ಜೊತೆಗೆ ವಿವಿಧ ಸಾಮಾಜಿಕ ಹೋರಾಟಗಾರರೊಡನೆ ಸೇರಿ ಶ್ರಮಿಸಿದ್ದರು ಎಂದರು.

ಈ ಸಂದರ್ಭದಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಪಿ.ಪರಮೇಶ್ವರ್, ಲೋಕಸಭಾ ಕ್ಷೇತ್ರದ ಸಂಯೋಜಕ ಕೆ.ಆರ್. ಗಂಗಾಧರ್, ಜಿಲ್ಲಾ ಉಪಾಧ್ಯಕ್ಷರಾದ ಬಾಬು, ಕೆ.ಎಸ್.ಮಂಜುಳಾ, ಕಾರ್ಯದರ್ಶಿ ಪುಟ್ಟಸ್ವಾಮಿ, ಅಸೆಂಬ್ಲಿ ಉಪಾಧ್ಯಕ್ಷ ಸಿದ್ದಯ್ಯ, ಪ್ರಧಾನ ಕಾರ್ಯದರ್ಶಿ ಆರ್.ವಸಂತ್, ಖಜಾಂಚಿ ಟಿ.ಹೆಚ್.ರತ್ನ, ಕಛೇರಿ ಕಾರ್ಯ ದರ್ಶಿ ಕಲಾವತಿ, ಮುಖಂಡರುಗಳಾದ ಲತಾ, ಆನಂದ್ ಉಪಸ್ಥಿತರಿದ್ದರು.

Shahu Maharaj the king of the backward classes

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...