Home namma chikmagalur chikamagalur ಶಾಹುರವರು ಜಾತೀಯತೆ ತೊಲಗಿಸಲು ಶ್ರಮಿಸಿದ ಮಾನವತಾವಧಿ
chikamagalurHomeLatest Newsnamma chikmagalur

ಶಾಹುರವರು ಜಾತೀಯತೆ ತೊಲಗಿಸಲು ಶ್ರಮಿಸಿದ ಮಾನವತಾವಧಿ

Share
Share

ಚಿಕ್ಕಮಗಳೂರು: ವೈಚಾರಿಕತೆಯ ಭದ್ರ ಬುನಾದಿಯನ್ನು ಸಾಮಾಜಿಕ ಪರಿವರ್ತನ ಚಳ ವಳಿಯ ಸಂದರ್ಭದಲ್ಲಿ ರಾಜಪ್ರಭುತ್ವದಲ್ಲಿ ಶಾಹೂ ಮಹಾರಾಜರು ಹಾಕಿದ್ದಾರೆ. ಅದರ ಫಲವನ್ನು ನಾವೀಗ ಪ್ರಜಾಪ್ರಭುತ್ವದಲ್ಲಿ ಅನುಭವಿಸುತ್ತಿದ್ದೇವೆ ಎಂದು ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಜಾಕೀರ್ ಹುಸೇನ್ ತಿಳಿಸಿದರು.

ನಗರದ ಬಿಎಸ್ಪಿ ಕಚೇರಿಯಲ್ಲಿ ಭಾನುವಾರ ಛತ್ರಪತಿ ಶಾಹೂ ಮಹಾರಾಜರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ಈ ರೀತಿಯ ಸಾಧನೆ ಮಾಡಿದ ಮಹನೀ ಯರ ಜಯಂತಿ ಆಚರಿಸುವ ಮೂಲಕ ಯುವಕರಿಗೆ ಸ್ಫೂರ್ತಿ ತುಂಬಬೇಕು ಎಂದರು.

ಶಾಹು ಮಹಾರಾಜರು ಜಾತೀಯತೆ ತೊಲಗಿಸಲು ಶ್ರಮಿಸಿದ ಮಹಾ ಮಾನವತಾವಧಿ. ಶೋಷಿತರು, ದಲಿತರ ಏಳಿಗಗೆ ದುಡಿದ ಮಹಾನೀಯರ ಜನ್ಮದಿನಾಚರಣೆ ಜೊತೆಗೆ ಅವರ ಆದರ್ಶ, ತತ್ವಸಿದ್ದಾಂತವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಈ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದರು.

ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಮಾತನಾಡಿ ಶಾಹು ಮಹಾರಾಜ್ ಅವರ ಕ್ರಾ ಂತಿಕಾರ ಹೆಜ್ಜೆಗಳಿಂದ ಅನೇಕ ಶೋಷಿತ ಹಾಗೂ ಹಿಂದುಳಿದ ಸಮುದಾಯದವರು ಮೇಲೆ ಬರಲು ಸಾಧ್ಯ ವಾಯಿತು. ಹೀಗಾಗಿ ತಳಸಮುದಾಯದವರು ಸದಾ ಶಾಹು ಮಹಾರಾಜರನ್ನು ಸ್ಮರಿಸಬೇಕು ಹಾಗೂ ಅವರ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷ ಪರಮೇಶ್ ಮಾತನಾಡಿದರು. ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿಗಳಾದ ಪಿ ವೇಲಾಯುಧನ್, ಕೆ ಬಿ ಸುಧಾ, ಲೋಕಸಭಾ ಕ್ಷೇತ್ರದ ಸಂಯೋಜಕರಾದ ಬಿ.ಎಂ.ಶಂಕರ್, ಕೆ ಆರ್ ಗಂಗಾಧರ್, ಜಿಲ್ಲಾ ಸಂಯೋಜಕ ಯು ಬಿ.ಮಂಜಯ್ಯ, ಉಪಾಧ್ಯಕ್ಷರಾದ ಎಂ.ಬಾಬು, ಕೆ,ಎಸ್,ಮಂಜುಳ, ಕಾರ್ಯದರ್ಶಿ ಡಿ.ಪುಟ್ಟಸ್ವಾಮಿ ಭಾಗವ ಹಿಸಿದ್ದರು.

Shahu’s humane efforts to eradicate casteism

 

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲೆಯ ಯಾರಿಗೂ ಸಚಿವ ಸ್ಥಾನವಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ನ ಐದು ಶಾಸಕರಿದ್ದು ಇಬ್ಬರು ವಿಧಾನ ಪರಿಷತ್ ಸದಸ್ಯರಿದ್ದಾರೆ ಹೀಗಾಗಿ ಮಂತ್ರಿ...

ಪಂಚಾಯತ್‌ರಾಜ್‌ನಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ

ಚಿಕ್ಕಮಗಳೂರು:  ಭಾರತ ಸ್ವಾತಂತ್ರ್ಯ ನಂತರ ಜಾರಿಗೆ ಬಂದ ಪಂಚಾಯತ್ ರಾಜ್ ವ್ಯವಸ್ಥೆಯಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ ಆಗಿದೆ. ಆದರೆ, ಇತ್ತೀಚೆಗೆ ಪಂಚಾಯತ್‌ರಾಜ್ ವ್ಯವಸ್ಥೆಯ ಅಧಿಕಾರ ಮೊಟುಕುಗೊಳಿಸುತ್ತಿರುವುದು ವಿಷಾದನೀಯ ಎಂದು ಎಂದು ಕೇಂದ್ರ...

Related Articles

ಲಕ್ಯ ಕ್ರಾಸ್ ಬಳಿ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಚಾಲಕ ಸಾವು

ಚಿಕ್ಕಮಗಳೂರು:  ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಯ ಕ್ರಾಸ್ ಬಳಿ ಸೋಮವಾರ ಸಂಭವಿಸಿದ ಭೀಕರ...

ಮಾಜಿ ಸೈನಿಕರಿಂದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

ಚಿಕ್ಕಮಗಳೂರು: ೨೭ನೇ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಭಾನುವಾರ ಜಿಲ್ಲಾ...

ಮಹಿಳೆಯರು ಧರಿಸುವ ‘ನೈಟಿ’ ಧರಸಿ ದೇವಸ್ಥಾನದಲ್ಲಿ ಕಳ್ಳತನ

ಚಿಕ್ಕಮಗಳೂರು:  ದೇವಸ್ಥಾನಗಳಲ್ಲಿ ಕಳ್ಳತನ ನಡೆಯುವುದು ಹೊಸದೇನಲ್ಲ. ಆದರೆ, ಪತ್ತೆಯಾಗಬಾರದು ಎಂದು ಕಳ್ಳರು ಹೂಡುವ ತಂತ್ರಗಳು ಮಾತ್ರ...

ಸಿ.ಟಿ.ರವಿ ಮನೆಗೆ ನೋಟೀಸ್ ನೀಡಲು ಹೋದ ಪೊಲೀಸರು ವಾಪಸ್

ಚಿಕ್ಕಮಗಳೂರು: ದ್ವೇಷ ಭಾಷಣ ಪ್ರಕರಣದಲ್ಲಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ, ನಗರ...