Home namma chikmagalur ಶರಾವತಿ ಯೋಜನೆಯಿಂದ 3000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ
namma chikmagalurchikamagalurHomeLatest News

ಶರಾವತಿ ಯೋಜನೆಯಿಂದ 3000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ

Share
Share

ಚಿಕ್ಕಮಗಳೂರು: ಶರಾವತಿ ಯೋಜನೆಯಲ್ಲಿ ಪ್ರಸ್ತುತ ಉತ್ಪಾದನೆಯಾಗುತ್ತಿರುವ ೧೦೦೦ ಮೆಗಾವ್ಯಾಟ್ ವಿದ್ಯುತ್ ಅಲ್ಲದೆ, ಹೆಚ್ಚುವರಿಯಾಗಿ ೨೦೦೦ ಮೆಗಾವ್ಯಾಟ್ ಸೇರಿ ಒಟ್ಟು ೩೦೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಅವಕಾಶ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಗ್ರಾಮದಲ್ಲಿ ಇಂದು ೩೦ ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿದ್ಯುತ್ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಲಹೆಯ ಮೇರೆಗೆ ವಿದ್ಯುತ್ ಅನ್ನು ಪಂಪ್ ಸ್ಟೋರೇಜ್ ಮಾಡಲು ಅವಕಾಶ ಕಲ್ಪಿಸಿಕೊಳ್ಳಬಹುದಾಗಿದೆ. ಈ ವ್ಯವಸ್ಥೆಯಲ್ಲಿ ಶರಾವತಿ ಮತ್ತು ವಾರಾಹಿ ಯೋಜನೆಗಳಲ್ಲಿ ವಿದ್ಯುತ್ ಉತ್ಪಾದನೆಗೆ ಬಳಕೆಯಾದ ನೀರನ್ನು ಮರು ಬಳಕೆ ಮಾಡುವ ತಂತ್ರಜ್ಞಾನವನ್ನು ಉಪಯೋಗಿಸಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ರೂಪಿಸಲಾಗಿರುವ ಯೋಜನೆಯಲ್ಲಿ ನದಿಯಲ್ಲಿ ನೀರಿರುವುದಿಲ್ಲ. ಅರಣ್ಯ ಪ್ರದೇಶವೆಲ್ಲ ಮುಳುಗಡೆಯಾಗುತ್ತದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಯಾವುದೇ ಅರಣ್ಯ ಪ್ರದೇಶ ಈ ಯೋಜನೆಯಲ್ಲಿ ಮುಳುಗಡೆಯಾಗುವುದಿಲ್ಲ. ಪಂಪ್ ಸ್ಟೇಷನ್‌ಗಾಗಿ ೧೨೦ ಎಕರೆ ಪ್ರದೇಶದಲ್ಲಿ ಪೈಪ್‌ಲೈನ್ ಅಳವಡಿಸುವ ಕಾರ್ಯವನ್ನು ಮಾತ್ರ ನಿರ್ವಹಿಸಲಾಗುತ್ತದೆ. ಅನಂತರ ಅದನ್ನು ಮುಚ್ಚಲಾಗುತ್ತದೆ. ಪರಿಸರ ಸ್ನೇಹಿಯಾಗಿ ರೂಪಿಸುವ ಈ ಯೋಜನೆ ಕಾರ್ಯಗತಕ್ಕೆ ನಾಲ್ಕು ವರ್ಷಗಳ ಕಾಲಾವಕಾಶ ಬೇಕಾಗುತ್ತದೆ ಎಂದರು.

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಸಾಕಷ್ಟು ವಿದ್ಯುತ್ ಶೇಖರಣೆ ಮಾಡಲಾಗಿದೆ. ಹೀಗಿದ್ದರೂ ಸಹ ತಮ್ಮ ಸರ್ಕಾರ ವಿದ್ಯುತ್ ಉತ್ಪಾದನೆಯ ಜೊತೆಗೆ ನೆರೆ ರಾಜ್ಯಗಳಿಂದ ಖರೀದಿಸುವ ಮೂಲಕ ಸಾಕಷ್ಟು ವಿದ್ಯುತ್ ಸಂಗ್ರಹಣೆ ಮಾಡಿಕೊಳ್ಳಲಾಗಿದೆ. ಏಷ್ಯಾದಲ್ಲಿಯೇ ದೊಡ್ಡದಾದ ಪಾವಗಡದ ರೈತರ ಸಹಭಾಗಿತ್ವದ ಸೋಲಾರ್ ಪಾರ್ಕ್‌ನಲ್ಲಿ ೨೦೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಅವಕಾಶವಾಗಿದೆ. ಇಲ್ಲಿ ೧೦ ಸಾವಿರ ಎಕರೆ ಪ್ರದೇಶವನ್ನು ಈ ಯೋಜನೆಗೆ ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು, ಇನ್ನೂ ರೈತರು ವಿದ್ಯುತ್ ಉತ್ಪಾದನೆಗೆ ಭೂಮಿ ನೀಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಜಿ.ಹೆಚ್.ಶ್ರೀನಿವಾಸ್, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಬ್ದುಲ್ ರೆಹಮಾನ್, ಉಪಾಧ್ಯಕ್ಷರಾದ ಜಿ.ಭವಾನಿ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್. ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು, ಸಹ ನಿರ್ದೇಶಕರಾದ ಆರೋಗ್ಯ ಇಲಾಖೆಯ ಸಹ ಜಿಲ್ಲಾ ನೋಡಲ್ ಅಧಿಕಾರಿ ಡಾ.ಚಂದ್ರಿಕಾ, ಭಾಗವಹಿಸಿದ್ದರು.

Sharavati project to generate 3000 MW of electricity

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...