Home Latest News ನೌಕರರ ಸಂಘದ ಅಧ್ಯಕ್ಷ ದೇವೇಂದ್ರಗೆ ಪಿ.ಯು ಬೋರ್ಡ್ ನೋಟಿಸ್ : ಭೋಜೇಗೌಡ ನಿಂದನೆ ಪ್ರಕರಣ
Latest News

ನೌಕರರ ಸಂಘದ ಅಧ್ಯಕ್ಷ ದೇವೇಂದ್ರಗೆ ಪಿ.ಯು ಬೋರ್ಡ್ ನೋಟಿಸ್ : ಭೋಜೇಗೌಡ ನಿಂದನೆ ಪ್ರಕರಣ

Share
Share

ಚಿಕ್ಕಮಗಳೂರು : ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಗೆದ್ದು ಬೀಗಿದ ದೇವೇಂದ್ರ ಅವರಿಗೆ ಎಂಎಲ್.ಸಿ ಭೋಜೇಗೌಡರ ಗುಮ್ಮ ಕಾಡುತ್ತಿದೆ. ಪೈಪೋಟಿ ಭರಾಟೆಯಲ್ಲಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿದ್ದ ದೇವೇಂದ್ರ ಭೋಜೇಗೌಡರ ಮೇಲೆ ಮಾಡಿದ ಆರೋಪಗಳು ಇದೀಗ ಅವರಿಗೆ ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿಯೊಂದರ ಪ್ರಕಾರ ಸರ್ಕಾರಿ ಉಪನ್ಯಾಸಕರಾಗಿ ರುವ ದೇವೇಂದ್ರರಿಗೆ ನೋಟೀಸ್ ಕೊಟ್ಟಿದೆ ಎನ್ನಲಾಗಿದೆ.

ಮಳೆ ಬಿಟ್ಟರು ಮರದ ಹನಿ ನಿಂತಿಲ್ಲ ಎಂಬ ಮಾತಿನಂತೆ ನೌಕರರ ಚುನಾವಣೆ ಮುಗಿದರೂ ನೂತನ ಅಧ್ಯಕ್ಷರಿಗೆ ಕಾಟ ತಪ್ಪಲಾರದು ಎಂಬಂತಾಗಿದೆ, ಎರಡನೇ ಬಾರಿ ಅಯ್ಕೆ ಆಗಿರುವ ದೇವೇಂದ್ರರವರಿಗೆ ಪಿ.ಯು.ಬೋರ್ಡ್ ನಿಂದ ನೋಟಿಸ್ ನೀಡಿದೆ ಎಂಬ ಮಾಹಿತಿ ತಿಳಿದು ಬಂದಿದ್ದು ದೇವೇಂದ್ರ ದಿಢೀರ್ ಬೆಂಗಳೂರಿಗೆ ದೌಡಾಯಿಸಿದ್ದಾರಡೆ

ನೌಕರರ ಚುನಾವಣೆ ವೇಳೆ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ರನ್ನು ನಿಂದಿಸಿದ್ದು, ಸರ್ಕಾರಿ ನೌಕರರಾಗಿ ಜನಪ್ರತಿನಿಧಿಗಳಿಗೆ ಅವಮಾನ ಮಾಡಿರುವ ನಿಮ್ಮ ಮೇಲೆ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂದು ಕಾರಣ ಕೇಳಿ ಶೊಕಾಸ್ ನೋಟಿಸ್ ನೀಡಲಾಗಿದೆ ಎಂದು ನೌಕರರು ಮಾತನಾಡುತ್ತಿದ್ದಾರೆ. ಈ ನಡುವೆ ಭೋಜೇಗೌಡ ಹಠಕ್ಕೆ ಬೀದಿದ್ದು ದೇವೇಂದ್ರ ವಿರುದ್ಧ ಕಾನೂನು ಹೋರಾಟ ಮಾಡಲು ಮುಂದಾಗಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...