Home namma chikmagalur chikamagalur ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ
chikamagalurHomeLatest Newsnamma chikmagalur

ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ

Share
???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಚಿಕ್ಕಮಗಳೂರು: ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭವಿಷ್ಯ ನುಡಿದರು

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಸರ್ಕಾರದ ಆರ್ಥಿಕ ನೀತಿ ಹಾಗೂ ಮುಂಬರುವ ಬಜೆಟ್ ಕುರಿತು  ತೀವ್ರ ವಾಗ್ದಾಳಿ ನಡೆಸಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್ ಸರ್ವಕಾಲಿಕ ದಾಖಲೆಯ ಬಜೆಟ್ ಆಗಲಿದೆ ಎಂದು ಭವಿಷ್ಯ ನುಡಿದಿದರು

ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಗಾಗಿ ಎಸ್ಸಿ-ಎಸ್ಟಿ ಸಮುದಾಯದ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ವರ್ಷವೂ ಕೂಡ ಸುಮಾರು 15 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಅನುಮಾನವಿದ್ದು, ಒಂದು ವೇಳೆ ಹಾಗೆ ಮಾಡಿದರೆ ಒಟ್ಟು ಮೊತ್ತ 54 ಸಾವಿರ ಕೋಟಿಗೆ ತಲುಪಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಅನ್ಯಾಯಗಳನ್ನು ಸರಿಪಡಿಸಿ, ಈ ಬಾರಿ ಹಣವನ್ನು ಬೇರೆಡೆಗೆ ಬಳಸಿಕೊಳ್ಳುವುದಿಲ್ಲ ಎಂದು ಬಜೆಟ್‌ನಲ್ಲಿ ಅಧಿಕೃತವಾಗಿ ಘೋಷಿಸಬೇಕು ಹಾಗೂ ಕೂಡಲೇ ಬಾಕಿ ಇರುವ 39 ಸಾವಿರ ಕೋಟಿ ರೂಪಾಯಿಗಳನ್ನು ವಾಪಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಸ್ತುತ ರಾಜ್ಯದ ಒಟ್ಟು ಸಾಲ 8 ಲಕ್ಷ 14 ಸಾವಿರ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ ಮತ್ತು ಕಳೆದ ವರ್ಷವೊಂದರಲ್ಲೇ 1 ಲಕ್ಷದ 14 ಸಾವಿರ ಕೋಟಿ ಸಾಲ ಮಾಡಲಾಗಿದೆ ಎಂದು ತಿಳಿಸಿದರು. ಅತಿ ಹೆಚ್ಚು ಬಜೆಟ್ ಮಂಡಿಸಿದ ಹಾಗೂ ಅತಿ ಹೆಚ್ಚು ಸಾಲ ಮಾಡಿದ ಖ್ಯಾತಿ ಸಿದ್ದರಾಮಯ್ಯನವರ ಹೆಸರಿನಲ್ಲಿದೆ ಎಂದು ವ್ಯಂಗ್ಯವಾಡಿದರು.

ರವಿ, ಇದು ‘ಚಾಣಾಕ್ಯ ನೀತಿ’ಯಲ್ಲ ಬದಲಾಗಿ ಬೆಲೆ ಏರಿಕೆ ಮಾಡಿ ಖಜಾನೆ ತುಂಬಿಸುವ ಹಾಗೂ ಸಾಲ ಮಾಡಿಯಾದರೂ ಮಜಾ ಮಾಡು ಎನ್ನುವ ‘ಚಾರ್ವಾಕ ನೀತಿ’ ಎಂದು ಟೀಕಿಸಿದ್ದಾರೆ. 2025 26ನೇ ಸಾಲಿನಲ್ಲಿ ಬಡ್ಡಿ ಕಟ್ಟುವುದಕ್ಕಾಗಿಯೇ 48 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದ್ದು, ಇಷ್ಟೆಲ್ಲ ಸಾಲದ ಹೊರತಾಗಿಯೂ ಔಷಧಿ ಖರೀದಿ, ನಿಗಮ ಮಂಡಳಿಗಳಿಗೆ ಅನುದಾನವಿಲ್ಲ ಮತ್ತು ಗುತ್ತಿಗೆದಾರರಿಗೆ 38 ಸಾವಿರ ಕೋಟಿ ರೂಪಾಯಿ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಾದರೂ ಸರ್ಕಾರದ ಖಜಾನೆ ತುಂಬದಿರುವುದು ಹಣ ಸೋರಿಕೆಯಾಗುತ್ತಿರುವ ಅನುಮಾನ ಮೂಡಿಸುತ್ತಿದೆ ಎಂದ ಅವರು, ಕೆ.ಪಿ.ಎಸ್.ಸಿ. ಹಗರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸುವುದರ ಜೊತೆಗೆ, ದಾಖಲೆ ಬಜೆಟ್ ಮಂಡಿಸಲಿರುವ ಸಿಎಂಗೆ ಶುಭ ಹಾರೈಸಿ ಅನ್ಯಾಯಗಳನ್ನು ಸರಿಪಡಿಸುವಂತೆ ಮನವಿ ಮಾಡಿದರು.

Siddaramaiah’s budget to be presented will be an all-time record budget

Share

Leave a comment

Leave a Reply

Your email address will not be published. Required fields are marked *

Don't Miss

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ ಕೋಣೆಯಲ್ಲಿ ಮಕ್ಕಳಿಗೆ ಹಾಲು ಕಾಯಿಸುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಅಡುಗೆ ಪಾತ್ರೆಗಳು...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ತಿಳಿಸಿದರು. ದೊಡ್ಡ ಕುರುಬರಹಳ್ಳಿಯ ಬಸವತತ್ವ ಪೀಠದ ಆವರಣದಲ್ಲಿ ಕರ್ನಾಟಕ...

Related Articles

ಆಧುನಿಕ ಸೌಲಭ್ಯಗಳೊಂದಿಗೆ ಮಿಲನ್ ಚಿತ್ರಮಂದಿರ ಪುನರಾರಂಭ

ಚಿಕ್ಕಮಗಳೂರು: ದಶಕಗಳ ಕಾಲ ಸಿನಿ ರಸಿಕರಿಗೆ ಭರಪೂರ ಮನರಂಜನೆ ಒದಗಿಸಿ ಕಳೆದೆರಡು ವರ್ಷಗಳ ಹಿಂದೆ ಮುಚ್ಚಲ್ಪಟ್ಟಿದ್ದ...

ರಾಜ್ಯ ಸರ್ಕಾರದ ವಿರುದ್ಧ ಎದ್ದೇಳು ಕರ್ನಾಟಕ ಪ್ರತಿಭಟನೆ

ಚಿಕ್ಕಮಗಳೂರು:  ಗುರುದತ್ತಾತ್ರೇಯ ಬಾಬಬುಡನ್ ದರ್ಗಾದಲ್ಲಿ ಜ್ಯಾತ್ಯತೀತವಾಗಿ ಉರೂಸ್ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಿಲ್ಲ ಎಂದು ಆರೋಪಿಸಿ...

ದೇವನೂರು ಸರ್ಕಾರಿ ಶಾಲೆ ನೂತನ ಕಟ್ಟಡ ಜೂನ್‌ನಲ್ಲಿ ಉದ್ಘಾಟನೆ

ಚಿಕ್ಕಮಗಳೂರು: ಕಡೂರು ತಾಲ್ಲೂಕು ದೇವನೂರಿನ ಸರ್ಕಾರಿ ಶಾಲೆಯಲ್ಲಿ ೧೨೨ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ೫೦ ಲಕ್ಷ...

ಕೊಪ್ಪ ಪಟ್ಟಣದ ಮನೆಯಲ್ಲಿ ಚಿನ್ನಾಭರಣ ಕಳ್ಳತನ

ಕೊಪ್ಪ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಕೈಚಳಕ ತೋರಿಸುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ...