Home namma chikmagalur ಬಿಜೆಪಿ ಎಸ್‌ಸಿ ಮೋರ್ಚಾದಿಂದ ಮೌನ ಪ್ರತಿಭಟನೆ
namma chikmagalurchikamagalurHomeLatest News

ಬಿಜೆಪಿ ಎಸ್‌ಸಿ ಮೋರ್ಚಾದಿಂದ ಮೌನ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಸಲು ನಿರ್ಧರಿಸಿರುವ ಸರ್ಕಾರದ ಕ್ರಮವನ್ನು ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ವೆಂಕಟೇಶ್ ಖಂಡಿಸಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೩೯ ಸಾವಿರ ಕೋಟಿ ರೂ ಎಸ್‌ಸಿ, ಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗೆ ರಾಜ್ಯಸರ್ಕಾರ ಬಳಸಿರುವುದರ ವಿರುದ್ಧ ಆಜಾದ್ ವೃತ್ತದಲ್ಲಿ ಆ.೧೩ ರಂದು ಬೆಳಗ್ಗೆ ೧೧ ಗಂಟೆಗೆ ಪ್ರತಿಭಟನಾ ಧರಣಿಯನ್ನು ಆರಂಭಿಸಿ ಆ.೧೫ ರಂದು ಸ್ವತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಕಪ್ಪುಪಟ್ಟಿ ಧರಿಸಿ ಬಾಗವಹಿಸುತ್ತೇವೆ ಎಂದು ಎಚ್ಚರಿಸಿದರು.

ಅಂಬೇಡ್ಕರ್ ಭವನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಸಂಪೂರ್ಣ ಅಭಿವೃದ್ಧಿಪಡಿಸಿ ಒಂದು ಮಾದರಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕೆಂದು ಸ್ಥಳೀಯ ಶಾಸಕ ಹೆಚ್.ಡಿ. ತಮ್ಮಯ್ಯ ಅವರನ್ನು ಆಗ್ರಹಿಸಿದರು.

ವಿಧಾನಸಭಾ ಕ್ಷೇತ್ರದಲ್ಲಿ ೫೨ ಅಂಬೇಡ್ಕರ್ ಭವನದಲ್ಲಿ ೨೭ ಕಾಮಗಾರಿಗಳು ನಿರ್ಮಾಣವಾಗಿಲ್ಲ, ಹೆಚ್ಚುವರಿಯಾಗಿ ೨೫ ಅಂಬೇಡ್ಕರ್ ಭವನ ನಿರ್ಮಿಸಲು ಒಟ್ಟು ೬ ಕೋಟಿ ಅನುದಾನದಲ್ಲಿ ೧ ಕೋಟಿ ರೂಗಳನ್ನು ಮಾತ್ರ ಸಂಬಂಧಪಟ್ಟ ಇಲಾಖೆಗೆ ಮಂಜೂರು ಮಾಡಲಾಗಿದೆ ಎಂದು ವಿವರಿಸಿದರು.

ಈವರೆಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೈಗೊಳ್ಳಲಾಗುವ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿಲ್ಲ. ಆಗಸ್ಟ್ ತಿಂಗಳಾದರೂ ನಿಗಮದಿಂದ ಯಾವುದೇ ಅಧಿಸೂಚನೆ ಹೊರಡಿಸಿಲ್ಲ ಎಂದು ಆರೋಪಿಸಿದರು.

ನಮ್ಮ ಹಕ್ಕಿಗಾಗಿ ಸಮಾಜದ ಪರವಾಗಿ ಸರ್ಕಾರದ ಗಮನ ಸೆಳೆಯಲು ಆಯೋಜಿಸಿರುವ ಈ ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಹೊರತುಪಡಿಸಿ ದಲಿತಪರವಾದ ಚಿಂತಕರು, ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸೀತಾರಾಂಭರಣ್ಯ, ಹಂಪಯ್ಯ, ಕೊಲ್ಲಾಬೋವಿ, ಕೇಶವ, ಬೀರಪ್ಪ, ಕೃಷ್ಣಮೂರ್ತಿ, ರೇವನಾಥ್ ಉಪಸ್ಥಿತರಿದ್ದರು.

Silent protest by BJP SC Morcha

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...