Home namma chikmagalur chikamagalur ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ
chikamagalurHomeLatest Newsnamma chikmagalur

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

Share
Share

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ನಗರದ ಬೇಲೂರು ರಸ್ತೆ ಸಮೀಪ ಮುಖಂಡರುಗಳು ಮೌನ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ವನಕೃಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ|| ಕೆ.ಸುಂದರಗೌಡ ಕರ್ನಾಟಕ ರಾಜ್ಯ ಶ್ರೀಗಂಧದ ಬೀಡಾಗಿತ್ತು. ಯಥೆಚ್ಚವಾಗಿ ಬೆಳೆಯುತ್ತಿದ್ದ ಶ್ರೀಗಂಧವು ಇಂದು ಮರವಿಲ್ಲದೇ ಬರಡು ಭೂಮಿಯಾಗುತ್ತಿದೆ. ರೈತರು ಜೀವನಕ್ಕೆ ಆಸರೆಯಾಗಿ ಬೆಳೆದಿರುವ ಶ್ರೀಗಂಧ ಮರವನ್ನು ಕಳ್ಳರ ಹಾವಳಿಯಿ ಂದ ನಲುವಂತಾಗುತ್ತಿದೆ ಎಂದರು.

ಕೃಷಿ ಚಟುವಟಿಕೆ ಜೊತೆಗೆ ರೈತರು ಉಪ ಬೆಳೆಯಾಗಿ ಶ್ರೀಗಂಧ ಬೆಳೆಯುತ್ತಿದ್ದರು. ಅನೇಕ ವರ್ಷಗಳಿ ಂದ ಪೋಷಿಸಿದ ಮರವನ್ನು ರಾತ್ರೋರಾತ್ರಿ ಕಡಿದು ಸಾಗಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಮತ್ತು ಅರ ಣ್ಯ ಇಲಾಖೆ ರೈತರ ಬೆಳೆದಿರುವ ಬೆಳೆಗೆ ರಕ್ಷಣೆ ಒದಗಿಸದಿದ್ದಲ್ಲಿ ಮುಂದೆ ಶ್ರೀಗಂಧ ಮರವು ನಶಿಸುವ ಕಾಲ ಸನ್ನಿಹಿತವಾಗಲಿದೆ ಎಂದು ತಿಳಿಸಿದರು.

ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷ ಶ್ರೀಗಂಧದ ಕೃಷ್ಣೇಗೌಡ ಮಾತನಾಡಿ ರೈತರು ಮತ್ತು ಬೆಳೆಗಾರರಿಗೆ ಬದುಕಿಗೆ ಆಸರೆಯಾದ ಶ್ರೀಗಂಧ ಬೆಳೆ ರಕ್ಷಣೆಗೆ ಅನೇಕ ವರ್ಷಗಳಿಂದ ಅಧಿಕಾರಿಗಳಿಗೆ ಮನ ವಿ ಸಲ್ಲಿಸಿದರೂ ಯಾವುದೇ ಕ್ರಮ ವಹಿಸುತ್ತಿಲ್ಲ. ಪೂರ್ವಿಕರು ಬಳುವಳಿಯಾಗಿ ಉಳಿಸಿಕೊಟ್ಟ ಶ್ರೀಗಂಧ ಬೆಳೆ ಇಂದು ಕದೀಮರ ಪಾಲಾಗುತ್ತಿದೆ ಎಂದು ಹೇಳಿದರು.

ಕಾಡಿನ ವನ್ಯಮೃಗಗಳು ನಾಡಿನತ್ತ ಧಾವಿಸಲು ಅರಣ್ಯದಲ್ಲಿ ಆಹಾರದ ಕೊರತೆ ಹಾಗೂ ಕಾಡುಪ್ರಾಣಿ ಗಳ ಹತ್ಯೆಯೇ ನೇರ ಕಾರಣವಾಗಿದೆ. ಮಾನವ ದುರಾಸೆಗೆ ಪಕೃತಿಯನ್ನು ಹಾಳು ಮಾಡುವುದು ಸರಿಯಲ್ಲ. ಇತ್ತೀಚೆಗೆ ಕಾಡಾನೆಗಳ ಹಿಂಡು ನಗರ ಸಮೀಪದಲ್ಲೇ ಸಂಚರಿಸಿ ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದ್ದು ಈ ಬಗ್ಗೆ ಅರಣ್ಯ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದರು.

ಶ್ರೀಗಂಧ ಬೆಳೆಗಾರ ವಿಶುಕುಮಾರ್ ಮಾತನಾಡಿ ರೈತರು ಶ್ರೀಗಂಧ ಮರಗಳ ಮಾರಾಟದಿಂದ ಸರ್ಕಾ ರಕ್ಕೆ ಶೇ.೫೫ ರಷ್ಟು ತೆರಿಗೆ ರೂಪದಲ್ಲಿ ನೀಡಲಾಗುವುದು. ಹೀಗಾಗಿ ಸರ್ಕಾರವು ಶ್ರೀಗಂಧ ಬೆಳೆಗೆ ಪ್ರೊತ್ಸಾಹ ನೀಡಬೇಕು. ಅಲ್ಲದೇ ಬೆಳೆಗಾರರಿಗೆ ಉಚಿತ ಗನ್ ತರಬೇತಿ, ತೋಟಗಳಿಗೆ ಸಿಸಿಟಿವಿ ಸೌಲಭ್ಯ ಕಲ್ಪಿಸಿಕೊಡ ಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ವಕ್ತಾರ ಹುಣಸೇಮಕ್ಕಿ ಲ ಕ್ಷ್ಮಣ್, ಮುಖಂಡರಾದ ತರೀಕೆರೆ ಲಿಂಗರಾಜ್, ಮರಬೈಲು ಜಗದೀಶ್ ಉಪಸ್ಥಿತರಿದ್ದರು.

Silent protest demanding protection of sandalwood trees and plastic-free environment

Share

Leave a comment

Leave a Reply

Your email address will not be published. Required fields are marked *

Don't Miss

ಟಿಪ್ಪು ಸುಲ್ತಾನ್ ಕಟೌಟ್ ಗೆ ದೇಶದ್ರೋಹಿ ಹಾಡು-7 ಜನ ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಕಾಫಿನಾಡಲ್ಲಿ ಪಾಕ್ ಪ್ರೇಮಿಗಳು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಈದ್ ಮಿಲಾದ್ ಆಚರಣೆಗೆ ಟಿಪ್ಪು ಸುಲ್ತಾನ್ ಕಟೌಟ್ ಹಾಕಿರುವ ಯುವಕರು, ಕಟೌಟ್ ಬ್ಯಾಕ್ ಗ್ರೌಂಡ್ ಗೆ ದೇಶದ್ರೋಹಿ ಸಾಂಗ್ ಹಾಕಿ ವಿವಾದ...

ಕಾಫಿಕಿಂಗ್ ಸಿದ್ಧಾರ್ಥಹೆಗ್ಗಡೆ ಹೆಸರು ಶಾಶ್ವತವಾಗಿ ಉಳಿಸುವ ಕಾರ್ಯ ಮಾಡಬೇಕಿದೆ

ಮೂಡಿಗೆರೆ: ಕಾಫಿ ಡೇ ಮಾಲೀಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಗಡೆ ಅವರು ತಮ್ಮ ಸಂಪೂರ್ಣ ಜೀವನವನ್ನು ಕಾಫಿ ಬೆಳೆಗಾರರ ಮತ್ತು ಕಾರ್ಮಿಕರ ಹಿತಕ್ಕಾಗಿ ಸವಿಸಿದ್ದಾರೆಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು. ಅವರು ಭಾನುವಾರ...

Related Articles

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...

ಚಿಕ್ಕಮಗಳೂರಿನಲ್ಲಿ 30 ಕೆ.ಜಿಗೂ ಅಧಿಕ ನಕಲಿ ನಾಟಿ ತುಪ್ಪ ಪತ್ತೆ

ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು...

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ...