Home ಒಂಟಿ ಮಹಿಳೆಯರ ಸರಗಳ್ಳತನ – ಆರೋಪಿಗಳ ಬಂಧನ
HomechikamagalurLatest Newsnamma chikmagalur

ಒಂಟಿ ಮಹಿಳೆಯರ ಸರಗಳ್ಳತನ – ಆರೋಪಿಗಳ ಬಂಧನ

Share
Share

ಚಿಕ್ಕಮಗಳೂರು: ಒಂಟಿ ಮಹಿಳೆಯರ ಸರಗಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ನರಸಿಂಹರಾಜಪುರ ಪೊಲೀಸ್ ಠಾಣೆ ಪೊಲೀಸರು ಬಂಧಿತರಿಂದ ಅಂದಾಜು ೭ಲಕ್ಷ ರೂ. ಮೌಲ್ಯದ ೬೯ ಗ್ರಾಂ ಚಿನ್ನದ ಆಭರಣ, ೫೦ಸಾವಿರ ರೂ. ಮೌಲ್ಯದ ಬೈಕ್ ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಸಾಗರ್ ಹಾಗೂ ಭದ್ರಾವತಿ ಹೊಳೊಹೊನ್ನೂರು ನಿವಾಸಿ ರಾಕೇಶ್ ಎಂಬಾತನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜೂ.೨೦ರಂದು ನರಸಿಂಹರಾಜಪುರ ಪಟ್ಟಣದ ಬಾಳೆಹೊನ್ನುರು ರಸ್ತೆಯಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಮಹಿಳೆಯನ್ನು ಅಡ್ಡಗಟ್ಟಿ ೩೮ ಗ್ರಾಂ (ಅಂದಾಜು ಮೌಲ್ಯ ೩,೫೦,೦೦೦) ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸರಗಳ್ಳರ ಪತ್ತೆಗೆ ವಿಶೇಷ ತಂಡ ರಚಿಸಿ ಅಂದಾಜು ೫೦ ರಿಂದ ೬೦ ಸಿಸಿ ಕ್ಯಾಮಾರಗಳನ್ನು ಪರಿಶೀಲನೆ ನಡೆಸಿದ ಪೊಲೀಸರು, ಅನುಮಾನಸ್ಪದ ಬೈಕ್‌ವೊಂದರ ಬೆನ್ನು ಹತ್ತಿದ ನಂತರ ಆರೋಪಿಗಳ ಸುಳಿವು ಪತ್ತೆಯಾಗಿದ್ದು, ಶಿವಮೊಗ್ಗ ಜಿಲ್ಲೆ ಸಾಗರ ಮತ್ತು ಭದ್ರಾವತಿಯಲ್ಲಿ ಒಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಜಿಲ್ಲೆ ಸೇರಿದಂತೆ ಅಂತರ್ ಜಿಲ್ಲೆಯ ವಿವಿಧೆಡೆಗಳಲ್ಲಿ ಸರಗಳ್ಳತನ ಕೃತ್ಯ ನಡೆಸಿರುವುದು ಬೆಳಕಿಗೆ ಬಂದಿದೆ.

ದಕ್ಷಣ ಕನ್ನಡ ಜಿಲ್ಲೆ ಬೆಳ್ತಗಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ೩೧ ಗ್ರಾಂ ಚಿನ್ನ ಅಂದಾಜು ಮೌಲ್ಯ ೩.೧೦,೦೦೦, ಶಿವಮೊಗ್ಗ ಜಿಲ್ಲೆ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂದಾಜು ೫೦ ಸಾವಿರ ರೂ. ಮೌಲ್ಯದ ಹಿರೋ ಸ್ಪೆಡ್ಲರ್ ಪ್ಲೆಸ್ ಬೈಕ್, ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಎನ್‌ಎಸ್ ಪ್ರಕರಣ ಹಾಗೂ ಹಾಸನ ಜಿಲ್ಲೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಸ್‌ಎಸ್ ರೀತ್ಯಾ ಕೃತ್ಯ ನಡೆಸಿರುವುದು ತಿಳಿದಿದೆ.

ಸರಗಳ್ಳತನ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ವಿಕ್ರಮ್ ಅಮಟೆ ಶ್ಲಾಘಿಸಿದ್ದಾರೆ.

Single women robbed – Accused arrested

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...