Home Political News ಎಸ್ಎಲ್ ಭೋಜೇಗೌಡ ರಾಜಕೀಯ ಚದುರಂಗದಾಟ : ಬುಗುರಿ ತಿರುಗಿಸೋ ನಿಸ್ಸೀಮ
Political News

ಎಸ್ಎಲ್ ಭೋಜೇಗೌಡ ರಾಜಕೀಯ ಚದುರಂಗದಾಟ : ಬುಗುರಿ ತಿರುಗಿಸೋ ನಿಸ್ಸೀಮ

Share
Share

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ ರಾಜಕೀಯ ಬುಗುರಿ ಆಡಿಸುವುದರಲ್ಲಿ ನೀಸ್ಸಿಮರು ಒಮ್ಮೆ ಬುಗುರಿ ಆದರೆ ಮತ್ತೊಂದು ಬಾರಿ ಚಾಟಿ ರೀತಿ ಹೇಗೆ ಬೇಕೋ ಹಾಗೆ ಬೀಸುತ್ತಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಬೀಸಿದವರು ಸ್ಥಳೀಯ ಸಂಸ್ಥೆಯ ಚುನಾವಣೆ ಗೆ ಬಿಜೆಪಿಯವರು ಇವರ ಪರ ಚಾಟಿ ಬಿಸುವಂತೆ ಮಾಡಿಕೊಂಡರು ಇದೇ ರಾಜಕೀಯವಲ್ಲವೇ ?

ಜಿಲ್ಲೆಯಲ್ಲಿ ನಡೆದ ನಗರಸಭೆ ಮತ್ತು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಚಿಕ್ಕಮಗಳೂರು ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಚಾಟಿ ಬೀಸಿದರೆ ಮೂಡಿಗೆರೆ ಪಟ್ಟಣ ಪಂಚಾಯಿತಿಯಲ್ಲಿ ದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಪತ್ನಿ ಮಂಜುಳಾ ಕಾಂಗ್ರೆಸ್ ಸೇರಿ ಅಧ್ಯಕ್ಷರಾದರು ಆದರೆ ರಂಜನ್ ಅಜಿತ್ ಕೂಡ ಜಾತ್ಯಾತೀತ ಜನತಾ ದಳದ ಜಿಲ್ಲಾ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಇದನ್ನು ನೋಡಿದರೆ ಗೌಡರ ಚಾಟಿಯ ಮಸಲತ್ತು ಹೇಗಿದೆ ಎಂಬುದು ಮೂಡರಿಗೂ ತಿಳಿಯುತ್ತದೆ.
ದಳದ ಸಂಪೂರ್ಣ ಹಿಡಿತ ಭೋಜೇಗೌಡರ ಬಳಿಯಿದೆ ಎಂಬುದು ಎಲ್ಲರಿಗೂ ಗೊತ್ತು ದಳದ ಮುಖಂಡರು ಉಗಿಯುವಂತೆ ಇಲ್ಲ ನುಂಗುವಂತೆ ಇಲ್ಲ ಎಂಬ ಅಡಕತ್ತರಿಯಲ್ಲಿ ಸಿಕ್ಕಿಕೊಂಡಿದ್ದಾರೆ.

ಕಾಂಗ್ರೆಸ್ ನವರಿಗೆ ಒಂದು ಬಣ್ಣದ ಬುಗುರಿ ಬಿಟ್ಟರೆ ಬಿಜೆಪಿಯವರಿಗೆ ಮತ್ತೊಂದು ಬಣ್ಣದ ಬುಗುರಿ ಬಿಟ್ಟು ಎರಡು ಪಕ್ಷದವರು ಗಿರಿ,ಗಿರಿ ತಿರುಗುವಂತೆ ಮಾಡಿದ್ದಾರೆ ಎಂದುಮೂರು ಪಕ್ಷದವರು ಮಾತನಾಡುತ್ತಿದ್ದಾರೆ. ಜಿಲ್ಲಾ ರಾಜಕಾರಣದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿರೋಧ ಪಕ್ಷದವರಿಗೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡರೇ ಎಲ್ಲಾ ತೀರ್ಮಾನ ತೆಗೆದುಕೊಳ್ಳುವ ನಾಯಕರಾಗಿದ್ದಾರೆ. ಅಧಿಕಾರ ಮುಖ್ಯ ಎಂದು ಎಲ್ಲರೂ ಹೊಂದಾಣಿಕೆಯ ರಾಜಕಾರಣದಲ್ಲಿ ತಲ್ಲೀನರಾಗಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಸಿ.ಟಿ.ರವಿ ಸೋಲಿನ ಹತಾಶೆಯಿಂದ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ

ಚಿಕ್ಕಮಗಳೂರು: ಸಿ.ಟಿ.ರವಿ ಅವರು ಸೋಲಿನ ಹತಾಶೆಯಿಂದ ಎಚ್.ಡಿ.ತಮ್ಮಯ್ಯ ವಿರುದ್ಧ ಬಾಯಿಗೆ ಬಂದಂತೆ ನಾಲಿಗೆ ಹರಿಬಿಟ್ಟಿದ್ದಾರೆ ಎಂದು ಕಾಂಗ್ರೆಸ್‌...

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು...

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್...