Home Political News ಎಸ್ಎಲ್ ಭೋಜೇಗೌಡ ರಾಜಕೀಯ ಚದುರಂಗದಾಟ : ಬುಗುರಿ ತಿರುಗಿಸೋ ನಿಸ್ಸೀಮ
Political News

ಎಸ್ಎಲ್ ಭೋಜೇಗೌಡ ರಾಜಕೀಯ ಚದುರಂಗದಾಟ : ಬುಗುರಿ ತಿರುಗಿಸೋ ನಿಸ್ಸೀಮ

Share
Share

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ ರಾಜಕೀಯ ಬುಗುರಿ ಆಡಿಸುವುದರಲ್ಲಿ ನೀಸ್ಸಿಮರು ಒಮ್ಮೆ ಬುಗುರಿ ಆದರೆ ಮತ್ತೊಂದು ಬಾರಿ ಚಾಟಿ ರೀತಿ ಹೇಗೆ ಬೇಕೋ ಹಾಗೆ ಬೀಸುತ್ತಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಬೀಸಿದವರು ಸ್ಥಳೀಯ ಸಂಸ್ಥೆಯ ಚುನಾವಣೆ ಗೆ ಬಿಜೆಪಿಯವರು ಇವರ ಪರ ಚಾಟಿ ಬಿಸುವಂತೆ ಮಾಡಿಕೊಂಡರು ಇದೇ ರಾಜಕೀಯವಲ್ಲವೇ ?

ಜಿಲ್ಲೆಯಲ್ಲಿ ನಡೆದ ನಗರಸಭೆ ಮತ್ತು ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಚಿಕ್ಕಮಗಳೂರು ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಚಾಟಿ ಬೀಸಿದರೆ ಮೂಡಿಗೆರೆ ಪಟ್ಟಣ ಪಂಚಾಯಿತಿಯಲ್ಲಿ ದಳದ ಜಿಲ್ಲಾ ಅಧ್ಯಕ್ಷ ಅಜಿತ್ ರಂಜನ್ ಪತ್ನಿ ಮಂಜುಳಾ ಕಾಂಗ್ರೆಸ್ ಸೇರಿ ಅಧ್ಯಕ್ಷರಾದರು ಆದರೆ ರಂಜನ್ ಅಜಿತ್ ಕೂಡ ಜಾತ್ಯಾತೀತ ಜನತಾ ದಳದ ಜಿಲ್ಲಾ ಅಧ್ಯಕ್ಷರಾಗಿ ಮುಂದುವರೆದಿದ್ದಾರೆ. ಇದನ್ನು ನೋಡಿದರೆ ಗೌಡರ ಚಾಟಿಯ ಮಸಲತ್ತು ಹೇಗಿದೆ ಎಂಬುದು ಮೂಡರಿಗೂ ತಿಳಿಯುತ್ತದೆ.
ದಳದ ಸಂಪೂರ್ಣ ಹಿಡಿತ ಭೋಜೇಗೌಡರ ಬಳಿಯಿದೆ ಎಂಬುದು ಎಲ್ಲರಿಗೂ ಗೊತ್ತು ದಳದ ಮುಖಂಡರು ಉಗಿಯುವಂತೆ ಇಲ್ಲ ನುಂಗುವಂತೆ ಇಲ್ಲ ಎಂಬ ಅಡಕತ್ತರಿಯಲ್ಲಿ ಸಿಕ್ಕಿಕೊಂಡಿದ್ದಾರೆ.

ಕಾಂಗ್ರೆಸ್ ನವರಿಗೆ ಒಂದು ಬಣ್ಣದ ಬುಗುರಿ ಬಿಟ್ಟರೆ ಬಿಜೆಪಿಯವರಿಗೆ ಮತ್ತೊಂದು ಬಣ್ಣದ ಬುಗುರಿ ಬಿಟ್ಟು ಎರಡು ಪಕ್ಷದವರು ಗಿರಿ,ಗಿರಿ ತಿರುಗುವಂತೆ ಮಾಡಿದ್ದಾರೆ ಎಂದುಮೂರು ಪಕ್ಷದವರು ಮಾತನಾಡುತ್ತಿದ್ದಾರೆ. ಜಿಲ್ಲಾ ರಾಜಕಾರಣದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿರೋಧ ಪಕ್ಷದವರಿಗೆ ವಿಧಾನ ಪರಿಷತ್ ಸದಸ್ಯ ಭೋಜೇಗೌಡರೇ ಎಲ್ಲಾ ತೀರ್ಮಾನ ತೆಗೆದುಕೊಳ್ಳುವ ನಾಯಕರಾಗಿದ್ದಾರೆ. ಅಧಿಕಾರ ಮುಖ್ಯ ಎಂದು ಎಲ್ಲರೂ ಹೊಂದಾಣಿಕೆಯ ರಾಜಕಾರಣದಲ್ಲಿ ತಲ್ಲೀನರಾಗಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...