Home namma chikmagalur chikamagalur ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ
chikamagalurHomeLatest Newsnamma chikmagalur

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

Share
Share

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ ಮಳೆಯಾಗಿ ಕೆರೆಗಳು ತುಂಬಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದರು.

ಸುಮಾರು 1,300 ಹೆಕ್ಟೇರ್ ವಿಸ್ತೀರ್ಣದ ಅಯ್ಯನಕೆರೆ ಹಾಗೂ 800 ಹೆಕ್ಟೇರ್ ವಿಸ್ತೀರ್ಣದ ಮದಗದಕೆರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುವ ಮಳೆಯನ್ನೇ ಅವಲಂಬಿಸಿವೆ. ಈ ಬಾರಿ ಸಮರ್ಪಕ ಮಳೆಯಾಗದ ಪರಿಣಾಮ ಎರಡೂ ಕೆರೆಗಳು ತುಂಬದಿರುವುದರಿಂದ ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

ಈ ಹಿನ್ನೆಲೆಯಲ್ಲಿ ಕಡೂರು ತಾಲೂಕಿನ ಹಸ್ತಿನಾಪುರ ಗ್ರಾಮದ ಸುಮಾರು 180 ಮನೆಗಳ ಜನರು ಒಟ್ಟಾಗಿ ಸೇರಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಶಕುನ ರಂಗನಾಥ ಸ್ವಾಮಿಗೆ 101 ಎಡೆ ಹಾಗೂ ಬಾಳೆಹಣ್ಣಿನ ರಸಾಯನ ಸಮರ್ಪಿಸಿ ವಿಶೇಷ ಪೂಜೆ ನಡೆಸಲಾಯಿತು. ಅಲ್ಲದೆ ಸರಪಳಿ ಕೆಂಚರಾಯ ಸ್ವಾಮಿಗೆ ಮೂರು ಕುರಿಗಳನ್ನು ಬಲಿ ನೀಡಿ ಹತ್ತು ಹಳ್ಳಿಗಳ ಗ್ರಾಮಸ್ಥರು ತಮ್ಮ ಸಂಪ್ರದಾಯದಂತೆ ಪೂಜೆ ಸಲ್ಲಿಸಿದರು.

ಮಡಿವಾಳ ಸಮಾಜದ ವತಿಯಿಂದ ದಾಸಪ್ಪರನ್ನು ಕರೆಸಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ತಾಪಂ ಮಾಜಿ ಅಧ್ಯಕ್ಷ ಆನಂದ್ ನಾಯ್ಕ್ ಹಾಗೂ ಗ್ರಾಮದ ಯುವಕರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು.

ಅಯ್ಯನಕೆರೆ ಹಾಗೂ ಮದಗದಕೆರೆಗಳು ಭರ್ತಿಯಾದರೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಗ್ರಾಮಸ್ಥರು ಆಶಾಭಾವ ವ್ಯಕ್ತಪಡಿಸಿದರು. ಉತ್ತಮ ಮಳೆಯಾಗಿ ಕೆರೆಗಳು ಶೀಘ್ರದಲ್ಲೇ ತುಂಬಲಿ ಎಂಬ ಪ್ರಾರ್ಥನೆಯೊಂದಿಗೆ ಗ್ರಾಮಸ್ಥರು ದೇವರಲ್ಲಿ ಬೇಡಿಕೊಂಡರು.

Special puja at the foothills of Ayyanakere and Madagadakere for rain

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಹುಲಿ ಸಂರಕ್ಷಿತ ಸಿಬ್ಬಂದಿಗಳಿಂದಲೇ ಮದ್ಯಪಾನ ಮೋಜು ಮಸ್ತಿ

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ವ್ಯಾಪ್ತಿಯ ತಣಿಗೆಬೈಲು ವಲಯದ, ವಿರೂಪಾಕ್ಷ ಖಾನ್ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳು ಆಗಲು ರಾತ್ರಿ ಎನ್ನದೆ ಮದ್ಯಪಾನ ಮಾಡಿ ಮೋಜು ಮಸ್ತಿಯಲ್ಲಿ ತೊಡಗಿರುವುದು ಕಂಡುಬಂದಿದೆ , ಚೆಕ್...

ತೋಟಕ್ಕೆ ನೀರು ಬಿಡಲು ಹೋದ ಯುವತಿ ಅಪಹರಣ

ಅಜ್ಜಂಪುರ : ಯುವತಿಯೊಬ್ಬಳನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋಗಿರುವ ಗಂಭೀರ ಆರೋಪ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ತ್ಯಾಗದಕಟ್ಟೆ ಗ್ರಾಮದಲ್ಲಿ ಕೇಳಿ ಬಂದಿದೆ. ಬೈರಪ್ಪ ಎಂಬುವವರ ಮಗಳು ಗಾಯತ್ರಿ...

Related Articles

ಮೇಡಿಕಲ್ ಅಂಗಡಿಯಲ್ಲಿ ನಗದು ಕಳವು ಆರೋಪಿ ಬಂದನ

ಶೃಂಗೇರಿ: ಪಟ್ಟಣದ ಭಾರತೀ ಬೀದಿಯಲ್ಲಿರುವ ಭಗವಾನ್ ಮೇಡಿಕಲ್ ಅಂಗಡಿಯಲ್ಲಿ ಜು.೭ರಂದು ಬೀಗ ಒಡೆದು ಬಾಗಿಲು ತೆರೆದು...

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು...

ತೆಂಗಿನಕಾಯಿ ಕದ್ದ ಆರೋಪ: ಮಹಿಳೆ ಮೇಲೆ ಮೂವರಿಂದ ಹಲ್ಲೆ

ಕಡೂರು: ತೆಂಗಿನಕಾಯಿ ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಹಲ್ಲೆ ನಡೆಸಿದ ಘಟನೆ...

ಸಾಲು ಸಾಲು ರಸ್ತೆ ಅಪಘಾತ – 12ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಂಭವಿಸಿದ ಸಾಲು ಸಾಲು ರಸ್ತೆ ಅಪಘಾತಗಳಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು...