Home namma chikmagalur ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ
namma chikmagalurchikamagalurLatest News

ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ

Share
Share

ಚಿಕ್ಕಮಗಳೂರು: ಗೃಹಸಚಿವರಾಗಿ ಮೂರನೇ ಬಾರಿಗೆ ಹುದ್ದೆ ನಿಭಾಯಿಸುತ್ತಿರುವ ಪ್ರಾಮಾಣಿಕ, ಸರಳ ಸಜ್ಜನಿಕೆಯ ರಾಜಕಾರಣಿ ಡಾ. ಜಿ. ಪರಮೇಶ್ವರ್‌ರವರಿಗೆ ಶಾಸಕ ಹೆಚ್.ಡಿ. ತಮ್ಮಯ್ಯ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.

zವರು ಇಂದು ನಗರದ ಗಣಪತಿ ದೇವಸ್ಥಾನದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಎಸ್‌ಸಿ ಸೆಲ್ ಘಟಕದ ನೇತೃತ್ವದಲ್ಲಿ ಏರ್ಪಡಿಸಲಾಗಿದ್ದ ಗೃಹಸಚಿವ ಡಾ. ಜಿ. ಪರಮೇಶ್ವರ್‌ರವರ ೭೪ನೇ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಿ ಶುಭ ಹಾರೈಸಿದರು.

ಮುಂದಿನ ದಿನಗಳಲ್ಲಿ ಸಚಿವರಿಗೆ ಆಯಸ್ಸು, ಆರೋಗ್ಯ, ಹೆಚ್ಚಿನ ಅಧಿಕಾರ ಸಿಗಲಿ ಎಂದು ಕ್ಷೇತ್ರದ ಜನರು ಮತ್ತು ಕಾರ್ಯಕರ್ತರ ಪರವಾಗಿ ಹಾರೈಸಿದರು.
ಡಾ. ಜಿ. ಪರಮೇಶ್ವರ್ ಅವರು ಕೇವಲ ದಲಿತ ಸಮುದಾಯಕ್ಕೆ ಸೀಮಿತರಾಗದೇ ಕೆಪಿಸಿಸಿ ಅಧ್ಯಕ್ಷರಾಗಿ ೬ ವರ್ಷಗಳ ಕಾಲ ಸೇವೆ ಸಲ್ಲಿಸಿದ ಪರಿಣಾಮ ೨೦೧೩ ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ್ದರು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇವರೊಂದಿಗೆ ಪರಮೇಶ್ವರ್‌ರವರು ೨೦೨೩ ರಲ್ಲಿ ಶ್ರಮಿಸಿದ ಫಲವಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ಮಾತನಾಡಿ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವ ಸರಳ, ಸೌಮ್ಯ ರಾಜಕಾರಣಿ ಡಾ. ಜಿ. ಪರಮೇಶ್ವರ್‌ರವರಿಗೆ ಆಯಸ್ಸು, ಆರೋಗ್ಯದ ಜೊತೆಗೆ ರಾಜಕೀಯದಲ್ಲಿ ಉನ್ನತ ಹುದ್ದೆ ಅಲಂಕರಿಸಲಿ ಎಂದು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಕಾಂಗ್ರೆಸ್ ಮುಖಂಡರಾದ , ಮಲ್ಲೇಶ್‌ಸ್ವಾಮಿ, ಓಂಕಾರಣ್ಣ, ವೇಣುಗೋಪಾಲ್, ನೇತ್ರಾವತಿ, ಮಹೇಶ್, ಚಂದ್ರು, ಶಾಂತಕುಮಾರ್, ರಾಜ್ ಕುಮಾರ್, ಜಗಧೀಶ್, ವೆಂಕಟೇಶ್, ಸುದೀಪ್ ಮತ್ತಿತರರು ಶುಭ ಹಾರೈಸಿದರು.

Special Puja for Home Minister Dr. G. Parameshwar’s birthday

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...