ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಪ್ರಯುಕ್ತ ಮಂಗಳವಾರ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ನಗರದ ತಾಲ್ಲೂಕು ಕಚೇರಿ ಸಮೀಪದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂ ಜೆ ಸಲ್ಲಿಸಿ ದೀರ್ಘಾಯುಷ್ಯಿಗಾಗಿ ಪ್ರಾರ್ಥಿಸಿದರು.
ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ಕುಮಾರ್ ಮಾತನಾಡಿ ನಾಡಿನಲ್ಲಿ ರೈತಪರವಾಗಿ ಅತ್ಯ ಂತ ಕಾಳಜಿ ಹೊಂದಿದ ನಾಯಕ ಕುಮಾರಸ್ವಾಮಿ. ರಾಜ್ಯದಲ್ಲಿ ಎರಡು ಭಾರೀ ಮುಖ್ಯಮಂತ್ರಿ ಸ್ಥಾನ ಅಲಂ ಕರಿಸಿ ಸಾರಾಯಿ, ಲಾಟರಿ ನಿಷೇಧಿಸಿ, ಗ್ರಾಮವಾಸ್ತವ್ಯ ನಡೆಸಿದಲ್ಲದೇ, ಏಡ್ಸ್ ಪೀಡಿತ ರೋಗಿಯ ಮನೆಗೆ ತೆರಳಿ ಧೈರ್ಯ ತುಂಬುವ ಕೆಲಸ ಮಾಡಿದವರು ಎಂದರು.
ನಾಡಿನಲ್ಲಿ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದ ವೇಳೆ ಸಾಲಬಾಧೆಯಿಂದ ತತ್ತರಿಸಿ ಹೋಗಿದ್ಧ ರೈತರಿಗೆ ಸಾಲಮನ್ನಾ ಯೋಜನೆ ಜಾರಿಗೊಳಿಸಿ ಬದುಕಿಗೆ ಬೆಳಕನ್ನು ತೋರುವ ಮೂ ಲಕ ಅನ್ನದಾತನಿಗೆ ಆಸರೆಯಾದವರು. ರಾಜ್ಯಸರ್ಕಾರದ ಆಳ್ವಿಕೆಯಲ್ಲಿ ಪ್ರಪ್ರಥಮ ಭಾರಿಗೆ ರೈತರ ಧನಿಗೂ ಡಿಸಿ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರಿಗೆ ಆರೋಗ್ಯ ವೃದ್ದಿಗೊಂಡು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬುದು ಕಾರ್ಯಕರ್ತರ ಅಭಿಲಾಷೆಯಾಗಿದ್ದು ಆ ನಿಟ್ಟಿನಲ್ಲಿ ಇಂದು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ, ಸಿಹಿ ಹಂ ಚಿಲಾಗಿದೆ ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಣಗೌಡ ಮಾತನಾಡಿ ಕಾರ್ಮಿಕರು, ಮಹಿಳೆಯರ ಕಷ್ಟಗಳಿಗೆ ಸ್ಪಂದಿಸು ವ ಅಪರೂಪದ ಗುಣ ಕುಮಾರಸ್ವಾಮಿ ಅವರಲ್ಲಿದೆ. ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಸಚಿವರಾದರೂ ಕೂಡಾ ರಾಜ್ಯದ ಕೋಟ್ಯಾಂತರ ಜನತೆಯ ಮನಸ್ಸಿನಲ್ಲಿ ಉಳಿದಿರುವ ಧೀಮಂತ ನಾಯಕ ಎಂದು ಬಣ್ಣಿಸಿದರು.
ನಗರಸಭೆ ಸದಸ್ಯ ಗೋಪಿ ಮಾತನಾಡಿ ಬಡವರು, ಶೋಷಿತರ ಪರವಾಗಿ ವಿಶೇಷ ಕಾಳಜಿ ವಹಿಸಿದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಬಡವರ ಮನೆಯಲ್ಲೇ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಿರುವ ಕಾರಣ ಪ್ರತಿವರ್ಷವು ಜನ್ಮದಿನವನ್ನು ರಾಜ್ಯಾದ್ಯಂತ ಕಾರ್ಯಕರ್ತರು ಸಂಭ್ರಮದಿಂದ ಆಚರಿಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ನಗರ ಪ್ರಧಾನ ಕಾರ್ಯದ ರ್ಶಿ ಸಿ.ಕೆ.ಮೂರ್ತಿ, ಎಸ್ಸಿ ವಿಭಾಗದ ಜಿಲ್ಲಾಧ್ಯಕ್ಷ ದೇವಿಪ್ರಸಾದ್, ಮುಖಂಡರುಗಳಾದ ದೇವರಾಜ್ಅರಸ್, ಶಿವು, ದಿನೇಶ್, ಚಿದಾನಂದ್, ಜಯಂತಿ, ರತ್ನ, ರಾಮು, ಪ್ರದೀಪ್, ಅಣ್ಣಪ್ಪಶೆಟ್ಟಿ ಮತ್ತಿತರರು ಉಪಸ್ಥಿತ ರಿದ್ದರು.
Special puja offered on the birthday of former Chief Minister Kumaraswamy
Leave a comment