Home Latest News ಶೃಂಗೇರಿ ಶಾಸಕ ಎಲ್ಲಿ : ಫಾರಿನ್ ಟೂರ್ ನಲ್ಲಿ : ಪ್ರತಿಭಟನಾಕಾರರ ವಿಭಿನ್ನ ಘೋಷಣೆ
Latest News

ಶೃಂಗೇರಿ ಶಾಸಕ ಎಲ್ಲಿ : ಫಾರಿನ್ ಟೂರ್ ನಲ್ಲಿ : ಪ್ರತಿಭಟನಾಕಾರರ ವಿಭಿನ್ನ ಘೋಷಣೆ

Share
Share

ಚಿಕ್ಕಮಗಳೂರು :

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಎಲ್ಲಿ ನಮ್ಮ ಕ್ಷೇತ್ರದ ಶಾಸಕರು ವಿದೇಶದಲ್ಲಿ

ಹೀಗೆ ಪ್ರತಿಭಟನೆ ವೇಳೆ ಘೋಷಣೆ ಕೂಗಿ ತಮ್ಮದೇ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ವಿರುದ್ಧ ಈ ಚಳುವಳಿ ಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧ ಮಲೆನಾಡಿಗರ ಪ್ರತಿಭಟನೆ ವೇಳೆ ಕೇಳಿ ಬಂದಿದೆ. ನೊಂದ ರೈತರು ಮತ್ತು ಕಾರ್ಮಿಕರ ಹಕ್ಕೊತ್ತಾಯ ಸಮಿತಿಯಿಂದ ಈ ಪ್ರತಿಭಟನೆ ನಡೆದಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ತಾಲೂಕಿನ ಅಗಳಗಂಡಿ ಹಾಗೂ ಗುಡ್ಡೇತೋಟ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆದಿದ್ದು ಬೆಳೆಹಾನಿ ಪರಿಹಾರದ ಹಣ ಬಿಡುಗಡೆ ಮಾಡಿಸುವಂತೆ ಆಗ್ರಹ ಕೇಳಿಬಂದಿದೆ. ನಿವೇಶನ ಇಲ್ಲದ ಜನರಿಗೆ ನಿವೇಶನ ನೀಡುವಂತೆ ಪ್ರತಿಭಟನಾ ಮೆರವಣಿಗೆ ವೇಳೆ ಒತ್ತಾಯ ಕೇಳಿ ಬಂದಿದೆ.‌ ಗ್ರಾಮದ ರಸ್ತೆಯಲ್ಲಿನ ಗುಂಡಿಗಳನ್ನು ಸಹಾ ಮುಚ್ಚುವಂತೆ ಆಗ್ರಹಿಸಿ ಪ್ರತಿಭಟನೆ ನಡೆದಿದೆ. ನೂರಾರು ಮಲೆನಾಡಿಗರು ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಕೊಪ್ಪ ತಾಲೂಕಿನ ಅಭಿವೃದ್ಧಿ ಬಗ್ಗೆ ನಿರ್ಲಕ್ಷ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಜಿ.ಎಸ್‌. ಬಾಲಕೃಷ್ಣ ಕರ್ತವ್ಯದಿಂದ ವಜಾ

ಚಿಕ್ಕಮಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಬಾಲಕೃಷ್ಣ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತ ನಿರ್ಧಾರವನ್ನು...

ರೈತನಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಸಾವು – ಹೊತ್ತಿ ಉರಿದ ಬೈಕ್!

ಚಿಕ್ಕಮಗಳೂರು: ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿ ರೈತರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು-ಕಡೂರು ರಸ್ತೆಯ ಎಐಟಿ ಸರ್ಕಲ್ ಬಳಿ ನಡೆದಿದೆ....

Related Articles

ಒಂದು ವರ್ಷದ ಅಭಿನಯ – ರಂಗ ತರಬೇತಿ ಡಿಪ್ಲೋಮಾಗೆ ಆಹ್ವಾನ

ಚಿಕ್ಕಮಗಳೂರು: ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ ೨೦೨೫-೨೬ (ಒಂದು ವರ್ಷದ ಅಭಿನಯ ಮತ್ತು...

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಒದಗಿಸಿ ನ್ಯಾಯ ದೊರಕಿಸಲು ಸಮೀಕ್ಷೆ

ತರೀಕೆರೆ: ‘ಪರಿಶಿಷ್ಟ ಜಾತಿಯಲ್ಲಿ ರುವ 101 ಜಾತಿಗಳಿಗೂ ಅವರ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಒದಗಿಸಿ...

ಮೂಡಿಗೆರೆಯಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ

ಮೂಡಿಗೆರೆ: ‘ಸತ್ಯದ ಹಾದಿ ಯಲ್ಲಿ ಸಾಗುವ ಮೂಲಕ ದಂಪತಿ ಸಂಬಂಧವನ್ನು ಗಟ್ಟಿ ಮಾಡಿಕೊ ಳ್ಳಬೇಕು’ ಎಂದು...

ಕಮ್ಮರಗೋಡು ಗ್ರಾಮದ ಕೃಷಿಹೊಂಡದಲ್ಲಿ ಕಾಡಾನೆ ನೀರಾಟ

ಮೂಡಿಗೆರೆ: ಗೋಣಿಬೀಡು ಹೋಬಳಿಯ ಕಮ್ಮರಗೋಡು ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಬಂದಿದ್ದ ಕಾಡಾನೆಯೊಂದು ಕೃಷಿಹೊಂಡಕ್ಕೆ ಇಳಿದು ಅರ್ಧ...