Home Latest News ಶೃಂಗೇರಿ ಶಾಸಕ ಎಲ್ಲಿ : ಫಾರಿನ್ ಟೂರ್ ನಲ್ಲಿ : ಪ್ರತಿಭಟನಾಕಾರರ ವಿಭಿನ್ನ ಘೋಷಣೆ
Latest News

ಶೃಂಗೇರಿ ಶಾಸಕ ಎಲ್ಲಿ : ಫಾರಿನ್ ಟೂರ್ ನಲ್ಲಿ : ಪ್ರತಿಭಟನಾಕಾರರ ವಿಭಿನ್ನ ಘೋಷಣೆ

Share
Share

ಚಿಕ್ಕಮಗಳೂರು :

ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಎಲ್ಲಿ ನಮ್ಮ ಕ್ಷೇತ್ರದ ಶಾಸಕರು ವಿದೇಶದಲ್ಲಿ

ಹೀಗೆ ಪ್ರತಿಭಟನೆ ವೇಳೆ ಘೋಷಣೆ ಕೂಗಿ ತಮ್ಮದೇ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ವಿರುದ್ಧ ಈ ಚಳುವಳಿ ಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ವಿರುದ್ಧ ಮಲೆನಾಡಿಗರ ಪ್ರತಿಭಟನೆ ವೇಳೆ ಕೇಳಿ ಬಂದಿದೆ. ನೊಂದ ರೈತರು ಮತ್ತು ಕಾರ್ಮಿಕರ ಹಕ್ಕೊತ್ತಾಯ ಸಮಿತಿಯಿಂದ ಈ ಪ್ರತಿಭಟನೆ ನಡೆದಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ತಾಲೂಕಿನ ಅಗಳಗಂಡಿ ಹಾಗೂ ಗುಡ್ಡೇತೋಟ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆದಿದ್ದು ಬೆಳೆಹಾನಿ ಪರಿಹಾರದ ಹಣ ಬಿಡುಗಡೆ ಮಾಡಿಸುವಂತೆ ಆಗ್ರಹ ಕೇಳಿಬಂದಿದೆ. ನಿವೇಶನ ಇಲ್ಲದ ಜನರಿಗೆ ನಿವೇಶನ ನೀಡುವಂತೆ ಪ್ರತಿಭಟನಾ ಮೆರವಣಿಗೆ ವೇಳೆ ಒತ್ತಾಯ ಕೇಳಿ ಬಂದಿದೆ.‌ ಗ್ರಾಮದ ರಸ್ತೆಯಲ್ಲಿನ ಗುಂಡಿಗಳನ್ನು ಸಹಾ ಮುಚ್ಚುವಂತೆ ಆಗ್ರಹಿಸಿ ಪ್ರತಿಭಟನೆ ನಡೆದಿದೆ. ನೂರಾರು ಮಲೆನಾಡಿಗರು ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ಕೊಪ್ಪ ತಾಲೂಕಿನ ಅಭಿವೃದ್ಧಿ ಬಗ್ಗೆ ನಿರ್ಲಕ್ಷ ವಹಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

ಚಿಕ್ಕಮಗಳೂರು: ಹೊರವಲಯದ ಹುಕ್ಕುಂದ ಗ್ರಾಮದ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟು ಜೂಜಾಟವಾಡುತ್ತಿದ್ದ ಹೈಟೆಕ್ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪಿಎಸ್‌ಐ...

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...