Home namma chikmagalur ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್
namma chikmagalurchikamagalurHomeLatest NewsPolitical News

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

Share
Share

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್ ಮಧ್ಯೆ ಭಾರಿ ಲಡಾಯಿ ನಡೆಯುತ್ತಿದೆ.

ಮಲೆನಾಡಿನ ರಾಜಕಾರಣ ಬಯಲು ಸೀಮೆ ರಾಜಕಾರಣಕ್ಕಿಂತ ಹೆಚ್ಚು ರಂಗು ಪಡೆಯುತ್ತಿದೆ.ದಿನವೂ ಒಂದಲ್ಲ ಒಂದು ಆರೋಪ ಪ್ರತಿ ಆರೋಪಗಳು ನಡೆಯುತ್ತಿವೆ.ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತಲುಪಿದೆ.

ಅನ್ಯಾಯದ ಪರಮಾವಧಿ ತಲುಪಿರುವ ಸ್ಥಿತಿಗೆ ಶೃಂಗೇರಿ ಕ್ಷೇತ್ರದ ರಾಜಕಾರಣ ತಲುಪಿದೆ. ದಿನನಿತ್ಯ ಶಾಸಕ ರಾಜೇಗೌಡರ ಮಧ್ಯೆ ಆರೋಪ ಪ್ರತಿ ಆರೋಪಗಳು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಬರುತ್ತಿವೆ.

ರಾಜೇಗೌಡ ಭ್ರಷ್ಟ ಅಲ್ಲ ಆದರೆ ಮೊದಲಿನ ಚಟುವಟಿಕೆ ಇಲ್ಲ ಆದರೂ ಭ್ರಷ್ಟಾಚಾರದ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದಾಖಲಾಗಿದೆ.ಇದಕ್ಕೆ ಜೀವರಾಜ್ ಕಾರಣ ಎಂದು ಕಾಂಗ್ರೆಸ್ ನವರ ಆರೋಪ.

ಆದಾಯ ಕ್ಕಿಂತ ಹೆಚ್ಚು ವಹಿವಾಟು ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.ಈ ಬಗ್ಗೆ ತನಿಖೆ ನಡೆಯುತ್ತಿದೆ ಇದರ ಹಿಂದೆ ಸೋತಿರುವ ಜೇವರಾಜ್ ಬುಸುಗುಟ್ಟುತ್ತಿದ್ದಾರೆ.ಇದರ ಫಲವೇ ಹಾದಿ ಬೀದಿಯಲ್ಲಿ ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಪ್ರತಿ ಆರೋಪ ಮಾಡುತ್ತಿದ್ದಾರೆ.ಹಲ್ಲಿಲ್ಲದ ಹಾವು ಕಚ್ಚಲು ಸಾಧ್ಯವಿಲ್ಲ.ಆದರೆ ಸದಾ ಪ್ರಚಾರವೋ ಅಪಪ್ರಚಾರವೋ ನಡೆಯುತ್ತಿದೆ.

ಶಾಸಕ ರಾಜೇಗೌಡರ ಮೇಲೆ ದಿನಕ್ಕೊಂದು ದೂರು ಹೇಳುವುದೆ ಜೀವರಾಜ್ ಮತ್ತು ಬಿಜೆಪಿಯವರ ಕೆಲಸ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ.

ಚುನಾವಣೆಯಲ್ಲಿ ಘೋಷಣೆ ಮಾಡಿರುವ ಆದಾಯಕ್ಕಿಂತ ಹೆಚ್ಚಿನ ಆದಾಯ ಇದೆ ಎಂದು ಬಿಜೆಪಿಯ ದಿನೇಶ್ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ನೀಡಿದ್ದು ಜೀವರಾಜ್ ಮಾಧ್ಯಮಗಳ ಮುಂದೆ ಆರಚಿಕೊಳ್ಳುತ್ತಿದ್ದಾರೆ.ಇದಕ್ಕೆ ಶಾಸಕ ರಾಜೇಗೌಡ ಕೂಡ ಕೆಂಡ ಮಂಡಲರಾಗಿದ್ದಾರೆ. ಜನರು ಕೂಡ ಪುಕ್ಕಟ್ಟೆ ಮಜಾ ತೆಗೆದುಕೊಳ್ಳುತ್ತಿದ್ದಾರೆ.ಸದ್ಯ ಕಾಂಗ್ರೆಸ್ ನವರು”ಸತ್ಯ ಮೇವ ಜಯತೆ” ಎಂದು ತಿರುಗಿ ಬೀಳಲು ತಯಾರಾಗಿದ್ದಾರೆ.

ಬಯಲು ಪ್ರದೇಶ ರಾಜಕಾರಣ ತಣ್ಣಗಾಗಿದೆ ಮಲೆನಾಡಿನಲ್ಲಿ ಬೆಂಕಿ ರಾಜಕಾರಣ ದಿನವೂ ಲಡಾಯಿ ನೋಡಿ ನಗಾಡುತ್ತಿದ್ದು ಮುಂದಿನ ಚುನಾವಣೆವರೆಗೂ ಇದು ಇದ್ದೆ ಇರುತ್ತದೆ ಎಂದು ಜನ ನಗುತ್ತಿದ್ದಾರೆ.

Sringeri Ladai MLA TD Rajegowda V/S Jeevaraj

Share

Leave a comment

Leave a Reply

Your email address will not be published. Required fields are marked *

Don't Miss

ಮತದಾರ ಪಟ್ಟಿಗೆ ಮತದಾರರನ್ನು ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಲು

ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...

ನೂತನ ತಂತ್ರಜ್ಞಾನವನ್ನು ಯುವಜನತೆ ಮಿತಿಯಲ್ಲಿ ಬಳಸಬೇಕು

ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....

Related Articles

ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮೈಲಿಮನೆ ಗ್ರಾಮ...

ರಕ್ತದಾನದಿಂದ ಜೀವ ಉಳಿಸುವವರು ಜೀವಸಂರಕ್ಷಕರೇ

ಚಿಕ್ಕಮಗಳೂರು: – ರಕ್ತದಾನಕ್ಕೆ ಜಾತಿ ತಾರತಮ್ಯವಿಲ್ಲ. ಜೀವ ಉಳಿಸುವ ಪ್ರತಿಯೊಬ್ಬ ವ್ಯಕ್ತಿಯು ಜೀವಸಂರಕ್ಷಕರೇ. ಶ್ರೀಮಂತಿಕೆ ಎಷ್ಟೇ...

ಯುದ್ಧ ನಿಲ್ಲಿಸಬೇಕಾದವರು ಮೌನವಾಗಿರುವುದು ಮಾನವತೆಯ ಸೋಲು

ಚಿಕ್ಕಮಗಳೂರು: ಯುದ್ಧದ ಬೆಂಕಿ ವಿಶ್ವವನ್ನು ಸುಡುತ್ತಿರುವಾಗ, ಶಾಂತಿಯ ಮಾತುಗಳನ್ನು ಹೇಳಬೇಕಾದ ಸಂಘಟನೆಗಳು ರಾಜಕೀಯ ಲಾಭ-ನ?ದ ಲೆಕ್ಕಾಚಾರದಲ್ಲಿ...

ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು

ಚಿಕ್ಕಮಗಳೂರು: ಚಿನ್ನದ ಬೆಲೆ ಹೆಚ್ಚಳದಿಂದಾಗಿ ಶೇ.೮೦ ರಷ್ಟು ಗೋಲ್ಡ್‌ಸ್ಮಿತ್ ಕೆಲಸಗಾರರು ಕೆಲಸವಿಲ್ಲದೆ ಪೇಚಾಡುವಂತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ...