Home namma chikmagalur ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್
namma chikmagalurchikamagalurHomeLatest NewsPolitical News

ಶೃಂಗೇರಿ ಲಡಾಯಿ: ಶಾಸಕ ಟಿ.ಡಿ.ರಾಜೇಗೌಡ V/S ಜೀವರಾಜ್

Share
Share

ಶೃಂಗೇರಿ: ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮತ್ತು ಬಿಜೆಪಿ ಮಾಜಿ ಸಚಿವ ಶಾಸಕ ಜೀವರಾಜ್ ಮಧ್ಯೆ ಭಾರಿ ಲಡಾಯಿ ನಡೆಯುತ್ತಿದೆ.

ಮಲೆನಾಡಿನ ರಾಜಕಾರಣ ಬಯಲು ಸೀಮೆ ರಾಜಕಾರಣಕ್ಕಿಂತ ಹೆಚ್ಚು ರಂಗು ಪಡೆಯುತ್ತಿದೆ.ದಿನವೂ ಒಂದಲ್ಲ ಒಂದು ಆರೋಪ ಪ್ರತಿ ಆರೋಪಗಳು ನಡೆಯುತ್ತಿವೆ.ಇಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ತಲುಪಿದೆ.

ಅನ್ಯಾಯದ ಪರಮಾವಧಿ ತಲುಪಿರುವ ಸ್ಥಿತಿಗೆ ಶೃಂಗೇರಿ ಕ್ಷೇತ್ರದ ರಾಜಕಾರಣ ತಲುಪಿದೆ. ದಿನನಿತ್ಯ ಶಾಸಕ ರಾಜೇಗೌಡರ ಮಧ್ಯೆ ಆರೋಪ ಪ್ರತಿ ಆರೋಪಗಳು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಬರುತ್ತಿವೆ.

ರಾಜೇಗೌಡ ಭ್ರಷ್ಟ ಅಲ್ಲ ಆದರೆ ಮೊದಲಿನ ಚಟುವಟಿಕೆ ಇಲ್ಲ ಆದರೂ ಭ್ರಷ್ಟಾಚಾರದ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದಾಖಲಾಗಿದೆ.ಇದಕ್ಕೆ ಜೀವರಾಜ್ ಕಾರಣ ಎಂದು ಕಾಂಗ್ರೆಸ್ ನವರ ಆರೋಪ.

ಆದಾಯ ಕ್ಕಿಂತ ಹೆಚ್ಚು ವಹಿವಾಟು ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.ಈ ಬಗ್ಗೆ ತನಿಖೆ ನಡೆಯುತ್ತಿದೆ ಇದರ ಹಿಂದೆ ಸೋತಿರುವ ಜೇವರಾಜ್ ಬುಸುಗುಟ್ಟುತ್ತಿದ್ದಾರೆ.ಇದರ ಫಲವೇ ಹಾದಿ ಬೀದಿಯಲ್ಲಿ ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಪ್ರತಿ ಆರೋಪ ಮಾಡುತ್ತಿದ್ದಾರೆ.ಹಲ್ಲಿಲ್ಲದ ಹಾವು ಕಚ್ಚಲು ಸಾಧ್ಯವಿಲ್ಲ.ಆದರೆ ಸದಾ ಪ್ರಚಾರವೋ ಅಪಪ್ರಚಾರವೋ ನಡೆಯುತ್ತಿದೆ.

ಶಾಸಕ ರಾಜೇಗೌಡರ ಮೇಲೆ ದಿನಕ್ಕೊಂದು ದೂರು ಹೇಳುವುದೆ ಜೀವರಾಜ್ ಮತ್ತು ಬಿಜೆಪಿಯವರ ಕೆಲಸ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ.

ಚುನಾವಣೆಯಲ್ಲಿ ಘೋಷಣೆ ಮಾಡಿರುವ ಆದಾಯಕ್ಕಿಂತ ಹೆಚ್ಚಿನ ಆದಾಯ ಇದೆ ಎಂದು ಬಿಜೆಪಿಯ ದಿನೇಶ್ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ನೀಡಿದ್ದು ಜೀವರಾಜ್ ಮಾಧ್ಯಮಗಳ ಮುಂದೆ ಆರಚಿಕೊಳ್ಳುತ್ತಿದ್ದಾರೆ.ಇದಕ್ಕೆ ಶಾಸಕ ರಾಜೇಗೌಡ ಕೂಡ ಕೆಂಡ ಮಂಡಲರಾಗಿದ್ದಾರೆ. ಜನರು ಕೂಡ ಪುಕ್ಕಟ್ಟೆ ಮಜಾ ತೆಗೆದುಕೊಳ್ಳುತ್ತಿದ್ದಾರೆ.ಸದ್ಯ ಕಾಂಗ್ರೆಸ್ ನವರು”ಸತ್ಯ ಮೇವ ಜಯತೆ” ಎಂದು ತಿರುಗಿ ಬೀಳಲು ತಯಾರಾಗಿದ್ದಾರೆ.

ಬಯಲು ಪ್ರದೇಶ ರಾಜಕಾರಣ ತಣ್ಣಗಾಗಿದೆ ಮಲೆನಾಡಿನಲ್ಲಿ ಬೆಂಕಿ ರಾಜಕಾರಣ ದಿನವೂ ಲಡಾಯಿ ನೋಡಿ ನಗಾಡುತ್ತಿದ್ದು ಮುಂದಿನ ಚುನಾವಣೆವರೆಗೂ ಇದು ಇದ್ದೆ ಇರುತ್ತದೆ ಎಂದು ಜನ ನಗುತ್ತಿದ್ದಾರೆ.

Sringeri Ladai MLA TD Rajegowda V/S Jeevaraj

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...