Home namma chikmagalur chikamagalur ಶೃಂಗೇರಿ ರಾಜಕೀಯ ಮಿಕ್ಸ್ ಮಸಾಲಾ-ಎದೆ ಬಡಿತ ಯಾರಿಗೆ.
chikamagalurHomeLatest Newsnamma chikmagalur

ಶೃಂಗೇರಿ ರಾಜಕೀಯ ಮಿಕ್ಸ್ ಮಸಾಲಾ-ಎದೆ ಬಡಿತ ಯಾರಿಗೆ.

Share
Share

ಶೃಂಗೇರಿ: ಶೃಂಗೇರಿ ವಿಧಾನ ಸಭಾ ಸದಸ್ಯರಾದ ಟಿ.ಡಿ.ರಾಜೇಗೌಡರ ಆಯ್ಕೆಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಅನ್ಯಾಯಯಾಗಿದೆ ಎಂದು ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಅರ್ಜಿ ಹೈಕೋರ್ಟ್ ಪುರಸ್ಕರಿಸಿ ಮೇ 2 ರಂದು ಅಂಚೆ ಮತಗಳ ಏಣಿಕೆಗೆ ಆದೇಶ ನೀಡಿದೆ.

ಮತಗಳ ಏಣಿಕೆಗಾಗಿ ಈಗಾಗಲೇ ಜಿಲ್ಲಾ ಆಡಳಿತ ತಯಾರಿ ನಡೆಸಿದೆ.ಫಲಿತಾಂಶ ಏನೇ ಬಂದರು ಮತ್ತೆ ಸುಪ್ರೀಂ ಕೋರ್ಟ್ ಗೆ ಹೋಗಲೇ ಬೇಕಾಗುತ್ತದೆ ಎಂದು ಕಾನೂನು ತಜ್ಞರು ಹೇಳುತ್ತಿದ್ದಾರೆ.

ರಾಜೇಗೌಡರು 205 ಮತಗಳ ಅಂತರದಿಂದ ವಿಜೇಯತರಾಗಿದ್ದು 299 ಮತಗಳನ್ನು ತಿರಸ್ಕರಿಸಿರುವುದು ಸೇರಿದಂತೆ ಅಂಚೆ ಮತಗಳನ್ನು ಮತ್ತೊಮ್ಮೆ ಏಣಿಕೆ ಮಾಡಬೇಕಾಗಿದೆ.ಹೀಗಾಗಿ ಜೀವರಾಜ್ ಮತ್ತು ರಾಜೇಗೌಡರ ಹೃದಯ ಬಡಿತ ಯಾರಿಗೆ ಬೇಕಾದರೂ ಆಗಬಹುದು ಎಂದು ನಿರೀಕ್ಷೆ ಮಾಡುವಂತಿಲ್ಲ ಏಕೆಂದರೆ ಯಾರ ಪರ ಫಲಿತಾಂಶ ಬಂದರು ಮತ್ತೊಮ್ಮೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಅವಕಾಶವಿದೆ.

ಈಗಾಗಲೇ ವಿಧಾನ ಪರಿಷತ್ ಸದಸ್ಯರಾದ ಪ್ರಾಣೇಶ್ ಮತ್ತು ಗಾಯಿತ್ರಿ ಶಾಂತೇಗೌಡ ಆಯ್ಕೆ ತಕರಾರು ಸುಪ್ರೀಂ ಕೋರ್ಟ್ ಆದೇಶದಂತೆ ಏಣಿಕೆ ಕಾರ್ಯ ಕೂಡ ಮುಗಿದರು ಫಲಿತಾಂಶ ಮಾತ್ರ ಪ್ರಕಟವಾಗಿಲ್ಲ.ಹೀಗಾಗಿ ಏನೇ ಫಲಿತಾಂಶ ಬಂದರು ಅವಧಿ ಮುಗಿಯುವವರೆಗೆ ಟಾಕು ಠೀಕಾಗಿ ರಾಜೇಗೌಡ ಓಡಾಡುತ್ತಾರೆ ಎಂದು ಅಂದಾಜಿಸಲಾಗುತ್ತಿದೆ.

ಜಿಲ್ಲೆಯಲ್ಲಿ ವಿಧಾನ ಪರಿಷತ್ ಮತ್ತು ವಿಧಾನ ಸಭಾ ಕ್ಷೇತ್ರಗಳ ತಕರಾರು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಆದರೆ ಮುಂದಿನ ವಿಧಾನ ಸಭಾ ಚುನಾವಣೆ ರಂಗೇರುವುದು ಖಚಿತ.ಬಿಜೆಪಿಯಲ್ಲಿ ಗದ್ದೆ ಮನೆ ವಿಶ್ವನಾಥ ಎಂಟ್ರಿ ಕೊಟ್ಟಿರುವುದು ಜೀವರಾಜ್ ಪರಿಸ್ಥಿತಿ ಏನು ಎಂದು ಚರ್ಚೆ ಅಗುತ್ತಿದೆ.ಇದರ ಜೊತೆಗೆ ಮಲೆನಾಡಿನಲ್ಲಿ ಝಣ,ಝಣ ಕಾಂಚಾಣ ಸದ್ದು ಮಾಡುವುದು ಮಾತ್ರ ಖಚಿತ ಎನ್ನಲಾಗಿದೆ.

ಬಿಜೆಪಿ ಜನತಾದಳ ಒಟ್ಟಾಗಿ ಚುನಾವಣೆಗೆ ಹೋದರೆ ಕಾಂಗ್ರೆಸ್ ಗೆ ಸಂಕಷ್ಟ ಎನ್ನಲಾಗುತ್ತಿದೆ.ಆದರೂ ರಾಜೇಗೌಡರು ಪವರ್ ಪುಲ್ ಅಭ್ಯರ್ಥಿಯಾಗಿರುವುದು ಹಣ ಬಲ ಕೂಡ ನೆರವಿಗೆ ಬರುತ್ತದೆ ಎಂದು ಕಟ್ಟಾ ಕಾಂಗ್ರೆಸ್ಸಿಗರ ಅಭಿಪ್ರಾಯವಾಗಿದೆ.

Sringeri political mix masala-who is the chest beating for?

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...