Home namma chikmagalur chikamagalur ಶೃಂಗೇರಿಯ ಅಂಚೆ ಮತಗಳ ಎಣಿಕೆ-ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ
chikamagalurHomeLatest Newsnamma chikmagalur

ಶೃಂಗೇರಿಯ ಅಂಚೆ ಮತಗಳ ಎಣಿಕೆ-ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

Share
Share

ಚಿಕ್ಕಮಗಳೂರು: ಜಿಲ್ಲಾಧಿಕಾರಿಯಾಗಿದ್ದ ಎನ್.ಎಂ. ನಾಗರಾಜ್ ಅವರ ದಿಢೀರ್ ವರ್ಗಾವಣೆ ಜಿಲ್ಲಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆ ಒಳಗೊಂಡ ಜಿಲ್ಲೆಯ ಆಡಳಿತ ಹಳಿ ಹತ್ತುವಷ್ಟರಲ್ಲೇ, ಅಧಿಕಾರ ವಹಿಸಿಕೊಂಡ ಕೇವಲ ನಾಲ್ಕು ತಿಂಗಳಿಗೆ ಅವರನ್ನು ಬೆಂಗಳೂರಿಗೆ ಎತ್ತಂಗಡಿ ಮಾಡಿರುವುದು ಹಲವು ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ಈ ಹಠಾತ್ ವರ್ಗಾವಣೆಯ ಹಿಂದೆ ಇತ್ತೀಚೆಗೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವೇಳೆ ಉಂಟಾದ ಗೊಂದಲವೇ ಪ್ರಮುಖ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ.
ಶೃಂಗೇರಿಯ ಅಂಚೆ ಮತಗಳ ಎಣಿಕೆಗೂ ಮುನ್ನ ಬ್ಯಾಲೆಟ್ ಬಾಕ್ಸ್ ಓಪನ್ ಮಾಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಮತ ಮರು ಎಣಿಕೆಯ ದಿನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಶೃಂಗೇರಿ ಶಾಸಕ ರಾಜೇಗೌಡ ತಕ್ಷಣವೇ ಮತ ಎಣಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದರೂ ಅಲ್ಲದೆ, ಈ ಇಡೀ ಗೊಂದಲದ ಪ್ರಕರಣವನ್ನು ಹೈಕೋರ್ಟ್ ಗಮನಕ್ಕೆ ತಂದು, ನ್ಯಾಯಾಲಯದ ಕಾನೂನಾತ್ಮಕ ನಿರ್ದೇಶನ ಪಡೆದ ಬಳಿಕವಷ್ಟೇ ಮುಂದಿನ ಮತ ಎಣಿಕೆ ನಡೆಸಬೇಕು ಎಂದು ಪಟ್ಟು ಹಿಡಿದ್ದರು. ಸೂಕ್ಷ್ಮತೆಯಿಂದ ಕೂಡಿದ್ದ ಈ ಮರು ಎಣಿಕೆ ಪ್ರಕ್ರಿಯೆಯಲ್ಲಿ 12 ಅಂಚೆ ಮತಗಳು ನಾಪತ್ತೆಯಾಗಿದ್ದು ಅನುಮಾನ ಮೂಡಿಸಿತ್ತು.

ಒಟ್ಟಾರೆ ಇಡೀ ಪ್ರಕ್ರಿಯೆ ನಿಭಾಯಿಸುವಲ್ಲಿ ಜಿಲ್ಲಾಡಳಿತ ವಿಫಲವಾಯಿತೇ ಮತ್ತು ಇದೇ ಕಾರಣಕ್ಕೆ ಡಿಸಿ ನಾಗರಾಜ್ ಅವರು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾಗಿದ್ದಾರೆಯೇ ಎಂಬ ಪ್ರಶ್ನೆ ಈಗ ಕಾಫಿನಾಡಿನಲ್ಲಿ ಸಂಚಲನ ಸೃಷ್ಟಿಸಿದೆ. ಸದ್ಯ ಗುಲ್ಬರ್ಗಾ ಜಿಲ್ಲಾ ಪಂಚಾಯಿತಿ ಸಿಇಓ ಆಗಿದ್ದ ಭನ್ವರ್ ಸಿಂಗ್ ಮೀನ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಈ ಬೆಳವಣಿಗೆಗಳ ಮಧ್ಯೆ ನೂತನ ಡಿಸಿ ಜಿಲ್ಲೆಯನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಮೂಡಿದೆ.

Sringeri postal votes counted – District Magistrate transferred suddenly

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಹಕರಿಗೆ ಬಡ್ಡಿ ಸಹಿತ ವಿಮಾ ಕಂತು ಮರಳಿಸುವಂತೆ ಆದೇಶ

ಚಿಕ್ಕಮಗಳೂರು : ಖಾತೆದಾರರ ಒಪ್ಪಿಗೆ ಪಡೆಯದೆ ಅವರ ಖಾತೆಯಿಂದ ಹಣ ಮುರಿದುಕೊಂಡು ವಿಮಾ ಪಾಲಿಸಿ ಖರೀದಿಸಿ ಸೇವಾ ನ್ಯೂನತೆ ಎಸಗಿದ ಆರೋಪದಲ್ಲಿ ಕೋಟಕ್ ಮಹೀಂದ್ರಾ ಓಲ್ಡ್ ಮ್ಯೂಚ್ಯುಯಲ್ ಲೈಫ್ ಇನ್‌ಶೂರೆನ್ಸ್ ಲಿಮಿಟೆಡ್...

ಲೋಕಾಯುಕ್ತ ಬಲೆಗೆ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು

ಚಿಕ್ಕಮಗಳೂರು: ರೈತನೊಬ್ಬನಿಂದ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕು ಕಚೇರಿಯಲ್ಲಿ ನಡೆದಿದೆ. ತರೀಕೆರೆ ತಾಲೂಕಿನ...

Related Articles

“ಶಿವಾನಂದ ನೀಲಣ್ಣವ‌ರ್ ಕೊಡುಗೆ” ನಾಮಫಲಕ ತೆರವು

ಕಡೂರು: ಅನಧಿಕೃತವಾಗಿ ಬಡ್ಡಿ ವ್ಯವಹಾರ ಮಾಡಿದ ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಅವರನ್ನು...

ಆಟವಾಡುತ್ತಿದ್ದ ವೇಳೆ ಹಗ್ಗಕ್ಕೆ ಸಿಲುಕಿ ಬಾಲಕಿ ಸಾವು

ಶೃಂಗೇರಿ: ಬೇಸಿಗೆ ರಜಾ ಕಳೆಯಲು ಅಜ್ಜಿ ಮನೆಗೆ ಬಂದ ಸಂದರ್ಭದಲ್ಲಿ ಬಾಲಕಿಯೊಬ್ಬಳು ಆಟವಾಡುತ್ತಿದ್ದ ವೇಳೆ ಹಗ್ಗಕ್ಕೆ...

ಪರವಾನಗಿ ಇಲ್ಲದ ಅಕ್ರಮ ಸಿಂಗಲ್ ಬ್ಯಾರೆಲ್ ಬಂದೂಕು ವಶ

ಚಿಕ್ಕಮಗಳೂರು: ಪರವಾನಗಿ ಇಲ್ಲದೆ ಮನೆಯಲ್ಲಿ ಇಟ್ಟುಕೊಂಡಿದ್ದ ಅಕ್ರಮ ಸಿಂಗಲ್ ಬ್ಯಾರೆಲ್ ಬಂದೂಕನ್ನು (ಎಸ್‌ಬಿಎಂಎಲ್) ಆಲ್ಲೂರು ಪೊಲೀಸರು...

ಕಾಮೇನಹಳ್ಳಿ ಮೀಸಲು ಅರಣ್ಯದಲ್ಲಿ ಕ್ಯಾಮೆರಾ ಕಳವು

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ಮೇಲೆ ಕಣ್ಣಿಡಲು ಅಳವಡಿಸಲಾಗಿದ್ದ ಅತ್ಯಾಧುನಿಕ ಕ್ಯಾಮೆರಾಗಳನ್ನೇ ಖದೀಮರು ಹೊತ್ತೊಯ್ದಿರುವ...