ಚಿಕ್ಕಮಗಳೂರು: ಶೃಂಗೇರಿ ಇಆರ್ಎಸ್ಎಸ್ (ERSS) ರೆಸ್ಪಾಂಡರ್ ಪಿ.ಸಿ. 612 ಸತೀಶ್ ಅವರು ಇಆರ್ಎಸ್ಎಸ್ ಕಾರ್ಯಕ್ರಮಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೃದಯಾಘಾತಕ್ಕೊಳಗಾಗಿ ಅಸ್ವಸ್ಥಗೊಂಡ ಘಟನೆ ನಡೆದಿದೆ.
ತಕ್ಷಣ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಸತೀಶ್ ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಅಕಾಲಿಕ ನಿಧನದಿಂದ ಸಹೋದ್ಯೋಗಿಗಳು ಹಾಗೂ ಪೊಲೀಸ್ ವಲಯದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಮೃತರ ನಿಧನಕ್ಕೆ ಪೊಲೀಸ್ ಇಲಾಖೆ ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.
Sringeri’s PC Satish passes away due to heart attack
Leave a comment