Home Crime News ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ – ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ
Crime NewsBanagaloreHomeLatest Newsnamma chikmagalur

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ – ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

Share
Share

ಬೆಂಗಳೂರು: 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕಾಲ್ತುಳಿತ ದುರಂತದ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದ ಬಳಿ ಯಾವುದೇ ದುರಂತ ಸಂಭವಿಸಿಲ್ಲ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತ ಸಂಭವಿಸಿದೆ. ಇಂತಹ ದೊಡ್ಡ ದುರಂತ ಸಂಭವಿಸಬಾರದಿತ್ತು. ಇದರಿಂದ ತುಂಬ ದುಃಖವಾಗುತ್ತಿದೆ ಎಂದರು.

ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದರು.

ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುವುದು. ಇದು ಸರ್ಕಾರದ ಕಾರ್ಯಕ್ರಮ ಅಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.

ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 19 ಗಾಯಾಳುಗಳ ಪೈಕಿ 7 ಜನ ಮೃತಪಟ್ಟರೆ, ವೈದೇಹಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ 8 ಜನ ಗಾಯಾಳುಗಳ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್​ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಬಳಿಕ ಕಾವೇರಿ ನಿವಾಸದಲ್ಲಿ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಹಾಗೂ ನಗರ ಪೊಲೀಸ್ ಆಯುಕ್ತರ ಜೊತೆ ಸಭೆ ನಡೆಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಸಿಎಂ, ವಿದ್ಯಾರ್ಥಿಗಳು, ಯುವಕರು, ಯುವತಿಯರು ಮನೆಗೆ ಸೇಫಾಗಿ ತೆರಳಲು ವ್ಯವಸ್ಥೆ ಮಾಡಲು ಸೂಚಿಸಿದರು. ವಿಧಾನಸೌಧ, ಸ್ಟೇಡಿಯಂನ ಸುತ್ತ ಸಂಚಾರ ತೆರವುಗೊಳಿಸಿ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಹಾಗೂ ಅಗತ್ಯ ಭದ್ರತೆ ಕಲ್ಪಿಸಲು ಸೂಚಿಸಿದರು.

Stampede near Chinnaswamy Stadium – Death toll rises to 11

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮೂರು ತಿಂಗಳಿಂದ ಪಿಂಚಣಿ ಹಣ ಸ್ಥಗಿತ

ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ “ತಿಳುವಳಿಕೆ ಪತ್ರ” ನೀಡುವ ನೆಪದಲ್ಲಿ ಕಳೆದ ಸುಮಾರು ಮೂರು ತಿಂಗಳಿಂದ ಪಿಂಚಣಿ ಹಣ ತಡೆಹಿಡಿಯಲಾಗಿದೆ...

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದಲ್ಲಿ ಕಾಡುಕೋಣ ದಾಳಿಗೆ 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್...

Related Articles

ಯಗಟಿ ಸಮೀಪದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಬಲಿ

ಚಿಕ್ಕಮಗಳೂರು: ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು...

ಸಿ.ಟಿ.ರವಿಯನ್ನು ಇನ್ನೆರಡು ದಿನದಲ್ಲಿ ಬಂಧಿಸದಿದ್ದರೆ ಜಿಲ್ಲಾ ಬಂದ್‌

ಮೂಡಿಗೆರೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಸಮರ್ಥಿಸುವ ಭರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು...

ಸಿ.ಟಿ.ರವಿಯಿಂದ ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮುಲ್ಲಾನ ಎದೆ ಸೀಳಿದರೆ ಮೂರಕ್ಷರ ಇಲ್ಲ...

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು...