Home namma chikmagalur chikamagalur ಸಂತ್ರಸ್ತರಿಗೆ ನೆರವು ನೀಡಲು ರಾಜ್ಯ ಸರ್ಕಾರವು ತುರ್ತು ಕ್ರಮ
chikamagalurHomeLatest Newsnamma chikmagalur

ಸಂತ್ರಸ್ತರಿಗೆ ನೆರವು ನೀಡಲು ರಾಜ್ಯ ಸರ್ಕಾರವು ತುರ್ತು ಕ್ರಮ

Share
Share

ಚಿಕ್ಕಮಗಳೂರು: ಮಧ್ಯಪ್ರಾಚ್ಯದ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಯಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಇರಾನ್, ಇಸ್ರೇಲ್, ಲೆಬನಾನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವು ದೇಶಗಳ ವಾಯುಪ್ರದೇಶವನ್ನು  ಮುಚ್ಚಲಾಗಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ ಸೇರಿದಂತೆ ವಿವಿಧ ದೇಶಗಳಲ್ಲಿ ಸಿಲುಕಿಕೊಂಡಿದ್ದು, ಸಂತ್ರಸ್ತರಿಗೆ ನೆರವು ನೀಡಲು ರಾಜ್ಯ ಸರ್ಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.

ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರ ಸೂಚನೆಯಂತೆ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಮತ್ತು ಎಲ್ಲಾ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು (DEOCs) 24×7 ಕಾರ್ಯನಿರ್ವಹಿಸುವಂತೆ ಸಕ್ರಿಯಗೊಳಿಸಲಾಗಿದೆ.

ಸಂಕಷ್ಟದಲ್ಲಿರುವ ಕನ್ನಡಿಗರ ಸಹಾಯಕ್ಕಾಗಿ ಇಸ್ರೇಲ್  (+972-54-7520711), ಇನಾನ್‌  (+989128109115), ಯುಎಇ (800-46342) 2 ಅರೇಬಿಯಾದಂತಹ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಹೆಲ್ಪಲೈನ್ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ಪೀಡಿತ ಪ್ರದೇಶಗಳಲ್ಲಿರುವ ಕನ್ನಡಿಗರು ಸ್ಥಳೀಯ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ‘ಸಾರಥಿ ಸಹಾಯತಾ’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಮತ್ತು ವೀಸಾ ಸಂಬಂಧಿತ ಸಮಸ್ಯೆಗಳಿಗಾಗಿ FRRO ಅನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ನಿವಾಸಿಗಳು ಯಾವುದೇ ತುರ್ತು ನೆರವಿಗಾಗಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರದ ಸಂಖ್ಯೆ 08262-238950 ಅನ್ನು ಸಂಪರ್ಕಿಸಬಹುದು. ದೆಹಲಿಯಲ್ಲಿರುವ ಕರ್ನಾಟಕ ಭವನದ ತಂಡವು ಕೂಡ ಸಮನ್ವಯ ಕಾರ್ಯಕ್ಕಾಗಿ ಸನ್ನದ್ಧವಾಗಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.

State government takes urgent action to provide assistance to victims

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಕ್ಷೇತ್ರದಲ್ಲಿ ಆನೆಗಳ ಕಾಟ-ರಾಜಕೀಯದವರ ತಿಕ್ಕಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಗೂ ಕಾಡು ಪ್ರಾಣಿಗಳಿಗೂ ಅವಿನಾಭಾವ ಸಂಬಂಧ. ಆನೆಗಳು, ಕಾಡು ಕೋಣಗಳು,ಜಿಂಕೆ, ಸಾರಂಗ, ಚಿರತೆ,ಹುಲಿಗಳು ಸಾಮಾನ್ಯ. ಆದರೆ ಎಂದೂ ಮನುಷ್ಯರ ಜೊತೆಗೆ ಸಂಘರ್ಷ ಇರಲಿಲ್ಲ.ಆದರೆ ಇಂದು ‌ಮನುಷ್ಯನ ಜೀವ ತೆಗೆಯುತ್ತಿರುವ...

ಜೀವಹಾನಿ ತಪ್ಪಿಸಲು ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಚಿಕ್ಕಮಗಳೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳೂ ಸೇರಿದಂತೆ ಕಾಡುಪ್ರಾಣಿಗಳಿಂದ ಆಗುತ್ತಿರುವ ಜೀವಹಾನಿಯನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ಇಂದು...

Related Articles

ಅಫ್ ರೇಟ್-ಚೀಫ್ ರೇಟ್ ಅಜ್ಜಂಪುರದಲ್ಲಿ ವಂಚಕರು ಜಾಲ

ಅಜ್ಜಂಪುರ: ಅಫ್ ರೇಟ್ ಚೀಫ್ ರೇಟ್ ಎಂದು ಜನರನ್ನು ನಂಬಿಸಿ ವಂಚನೆ ಮಾಡುವವರು ಅಂಗಡಿ ತೆರೆದು...

ಕಾಂಗ್ರೆಸ್‌ನ ಮುಸ್ಲಿಂ ಮುಖಂಡ ರಾಹಿಲ್ ಷರೀಫ್‌ ಬಂದನಕ್ಕೆ ಬಿಜೆಪಿ ಆಗ್ರಹ

ಚಿಕ್ಕಮಗಳೂರು : ಇತ್ತೀಚೆಗೆ ದಲಿತ ಮಹಿಳೆಯೋರ್ವರ ಮೇಲೆ ಹಲ್ಲೆ ನಡೆಸಿರುವ ಕಾಂಗ್ರೆಸ್‌ನ ಮುಸ್ಲಿಂ ಮುಖಂಡ ರಾಹಿಲ್...

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಚಾಟನೆ

ಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಸಭ್ಯ ವರ್ತನೆಯ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ...

ಮೂಡಿಗೆರೆ ಪೊಲೀಸ್ ಠಾಣೆಯ ಒಳಗೆ ಕತ್ತಿ ಹಿಡಿದು ದಾಂಧಲೆ

ಮೂಡಿಗೆರೆ: ವೆಲ್ಡಿಂಗ್ ವಿಚಾರದ ಗಲಾಟೆಯು ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನಡೆದಿದೆ....