Home Latest News ರಾಜ್ಯ ಮಟ್ಟದ ಯುವತಿಯರ ಕ್ರಿಕೆಟ್ : ಗೌಡ್ತೀಸ್ ಲೀಗ್ ಪಂದ್ಯಾವಳಿ
Latest News

ರಾಜ್ಯ ಮಟ್ಟದ ಯುವತಿಯರ ಕ್ರಿಕೆಟ್ : ಗೌಡ್ತೀಸ್ ಲೀಗ್ ಪಂದ್ಯಾವಳಿ

Share
Share

ಚಿಕ್ಕಮಗಳೂರು: ಕಾಫಿನಾಡಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಗೌಡ್ತಿಯರ ಟೆನಿಸ್ ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್ ಆಯೋಜಿಸಿದ್ದು ಒಕ್ಕಲಿಗ ಜನಾಂಗದ ಗೌಡ್ತಿ ಮಹಿಳೆಯರು ಅಖಾಡದಲ್ಲಿ ಬ್ಯಾಟ್ ಬೀಸಿ, ಬೌಲಿಂಗ್ ಮಾಡಿ ನಾವೇನು ಕಮ್ಮಿ ಎಂದು ಯುವಕರು ನಾಚಿಸುವಂತೆ ಆಟವಾಡುತ್ತಿದ್ದಾರೆ. ನಗರದ ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ಇಂದು ಮತ್ತೆ ನಾಳೆ ಗೌಡ್ತಿಯರ ಗೆಲುವಿನ ಕಾಳಗದ ಜಿದ್ದಾಜಿದ್ದಿನಲ್ಲಿ ನಾವಾ-ನೀವಾ ಎಂದು ಮಹಿಳೆಯರಿಗೆ ಮಹಿಳೆಯರೇ ತೊಳು ಏರಿಸಿದ್ದಾರೆ.

ರಾಜ್ಯ ಮಟ್ಟದ ಈ ಟೂರ್ನಿಯಲ್ಲಿ 8 ತಂಡಗಳು ಭಾಗವಹಿಸಿದ್ದು, ಕಾಫಿನಾಡ ಇತಿಹಾಸದಲ್ಲೇ ಮೊದಲ ಬಾರಿಗೆ ಗೌಡ್ತಿಯರಿಗಾಗೇ ಕ್ರಿಕೆಟ್ ಆಯೋಜನೆಗೊಂಡಿದೆ. ಈ ಟೂರ್ನಿ ರಾಜ್ಯ ಮಟ್ಟದ ಸ್ಪರ್ಧೆಯಾಗಿರೋದ್ರಿಂದ ರಾಜ್ಯದ ನಾನಾ ಭಾಗಗಳಿಂದಲೂ ಗೌಡ್ತಿಯರು ತಮ್ಮ ಕಲೆ ಪ್ರದರ್ಶನಕ್ಕೆ ಆಗಮಿಸಿದ್ದಾರೆ. ಸಾಮಾನ್ಯವಾಗಿ ಹುಡುಗರಿಗೆ ಕ್ರಿಕೆಟ್ ಟೂರ್ನಿ ಆಯೋಜನೆಯಾಗುತ್ತೆ. ಆದರೆ, ಒಕ್ಕಲಿಗ ಜನಾಂಗದವರೇ ಹೆಚ್ಚಿರೋ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಕ್ಕಲಿಗ ಜನಾಂಗದ ಗೌಡ್ತಿಯರಿಗಾಗೇ ಟೂರ್ನಿ ಆಯೋಜನೆಗೊಂಡಿದೆ.

ಈವರೆಗೂ ಮಹಿಳೆಯರಿಗೆ ಎಲ್ಲೂ ಟೂರ್ನಿಮೆಂಟ್ ಆಯೋಜಿಸರಲಿಲ್ಲ. ಹಾಗಾಗಿ, ಇದೇ ಮೊದಲ ಬಾರಿಗೆ ಆಯೋಜಿಸಲಾಗಿದೆ ಅನ್ನೋದು ಆಯೋಜಕರ ಮಾತು. ಚಿಕ್ಕಮಗಳೂರು ಒಂದರಲ್ಲೇ ಆಟಗಾರರು ಸಿಗುವುದು ಕಷ್ಟ ಅಂತ ರಾಜ್ಯದ ನಾನಾ ಭಾಗಗಳಿಂದಲೂ ಆಟಗಾರ್ತಿಯರು ಬರುತ್ತಿದ್ದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಬಂದ ಗೌಡ್ತಿ ಮಹಿಳೆಯರು ಬ್ಯಾಟಿಂಗ್ ಮಾಡಿ, ಬೌಲಿಂಗ್ ಮಾಡಿ ಮಿಂಚುತ್ತಿದ್ದಾರೆ. ಒಟ್ಟು ಎಂಟು ತಂಡಗಳು ಹೆಸರನ್ನ ನೊಂದಾಯಿಸಿಕೊಂಡಿದ್ದು, ಚಿಕ್ಕಮಗಳೂರಿನ ಐದು ತಂಡದ ಜೊತೆ ಬೆಂಗಳೂರು-ಮೈಸೂರು ಹಾಗೂ ಮಡಿಕೇರಿಯಿಂದಲೂ ತಂಡಗಳೂ ಭಾಗವಹಿಸಿವೆ. ಹುಡುಗಿಯರು-ಮಹಿಳೆಯರು ಇಬ್ಬರೂ ಸೇರೆ ತಂಡ ಮಾಡಿಕೊಂಡಿದ್ದು ಅಖಾಡದಲ್ಲಿ ಹುಡುಗರು ನಾಚಿಸುವಂತೆ ಬ್ಯಾಟಿಂಗ್-ಬೌಲಿಂಗ್ ಮಾಡ್ತಿದ್ದಾರೆ. ಮೊದಲ ಬಹುಮಾನ 1 ಲಕ್ಷ ಇದ್ರೆ, 2ನೇ ಬಹುಮಾನ 70 ಸಾವಿರ. 3ನೇ ಬಹುಮಾನ 50 ಸಾವಿರ ಮತ್ತು 4ನೇ ಬಹುಮಾನ 25 ಸಾವಿರ ಇದ್ದು, 1 ಲಕ್ಷದ ಗೆಲುವಿಗಾಗಿ ಮಹಿಳೆಯರು ಅಖಾಡದಲ್ಲಿ ಹೋರಾಡುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...