Home Latest News ರಾಜ್ಯ ಮಟ್ಟದ ಯುವತಿಯರ ಕ್ರಿಕೆಟ್ : ಗೌಡ್ತೀಸ್ ಲೀಗ್ ಪಂದ್ಯಾವಳಿ
Latest News

ರಾಜ್ಯ ಮಟ್ಟದ ಯುವತಿಯರ ಕ್ರಿಕೆಟ್ : ಗೌಡ್ತೀಸ್ ಲೀಗ್ ಪಂದ್ಯಾವಳಿ

Share
Share

ಚಿಕ್ಕಮಗಳೂರು: ಕಾಫಿನಾಡಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಗೌಡ್ತಿಯರ ಟೆನಿಸ್ ಬಾಲ್ ಕ್ರಿಕೆಟ್ ಪ್ರಿಮಿಯರ್ ಲೀಗ್ ಆಯೋಜಿಸಿದ್ದು ಒಕ್ಕಲಿಗ ಜನಾಂಗದ ಗೌಡ್ತಿ ಮಹಿಳೆಯರು ಅಖಾಡದಲ್ಲಿ ಬ್ಯಾಟ್ ಬೀಸಿ, ಬೌಲಿಂಗ್ ಮಾಡಿ ನಾವೇನು ಕಮ್ಮಿ ಎಂದು ಯುವಕರು ನಾಚಿಸುವಂತೆ ಆಟವಾಡುತ್ತಿದ್ದಾರೆ. ನಗರದ ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ಇಂದು ಮತ್ತೆ ನಾಳೆ ಗೌಡ್ತಿಯರ ಗೆಲುವಿನ ಕಾಳಗದ ಜಿದ್ದಾಜಿದ್ದಿನಲ್ಲಿ ನಾವಾ-ನೀವಾ ಎಂದು ಮಹಿಳೆಯರಿಗೆ ಮಹಿಳೆಯರೇ ತೊಳು ಏರಿಸಿದ್ದಾರೆ.

ರಾಜ್ಯ ಮಟ್ಟದ ಈ ಟೂರ್ನಿಯಲ್ಲಿ 8 ತಂಡಗಳು ಭಾಗವಹಿಸಿದ್ದು, ಕಾಫಿನಾಡ ಇತಿಹಾಸದಲ್ಲೇ ಮೊದಲ ಬಾರಿಗೆ ಗೌಡ್ತಿಯರಿಗಾಗೇ ಕ್ರಿಕೆಟ್ ಆಯೋಜನೆಗೊಂಡಿದೆ. ಈ ಟೂರ್ನಿ ರಾಜ್ಯ ಮಟ್ಟದ ಸ್ಪರ್ಧೆಯಾಗಿರೋದ್ರಿಂದ ರಾಜ್ಯದ ನಾನಾ ಭಾಗಗಳಿಂದಲೂ ಗೌಡ್ತಿಯರು ತಮ್ಮ ಕಲೆ ಪ್ರದರ್ಶನಕ್ಕೆ ಆಗಮಿಸಿದ್ದಾರೆ. ಸಾಮಾನ್ಯವಾಗಿ ಹುಡುಗರಿಗೆ ಕ್ರಿಕೆಟ್ ಟೂರ್ನಿ ಆಯೋಜನೆಯಾಗುತ್ತೆ. ಆದರೆ, ಒಕ್ಕಲಿಗ ಜನಾಂಗದವರೇ ಹೆಚ್ಚಿರೋ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಕ್ಕಲಿಗ ಜನಾಂಗದ ಗೌಡ್ತಿಯರಿಗಾಗೇ ಟೂರ್ನಿ ಆಯೋಜನೆಗೊಂಡಿದೆ.

ಈವರೆಗೂ ಮಹಿಳೆಯರಿಗೆ ಎಲ್ಲೂ ಟೂರ್ನಿಮೆಂಟ್ ಆಯೋಜಿಸರಲಿಲ್ಲ. ಹಾಗಾಗಿ, ಇದೇ ಮೊದಲ ಬಾರಿಗೆ ಆಯೋಜಿಸಲಾಗಿದೆ ಅನ್ನೋದು ಆಯೋಜಕರ ಮಾತು. ಚಿಕ್ಕಮಗಳೂರು ಒಂದರಲ್ಲೇ ಆಟಗಾರರು ಸಿಗುವುದು ಕಷ್ಟ ಅಂತ ರಾಜ್ಯದ ನಾನಾ ಭಾಗಗಳಿಂದಲೂ ಆಟಗಾರ್ತಿಯರು ಬರುತ್ತಿದ್ದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಬಂದ ಗೌಡ್ತಿ ಮಹಿಳೆಯರು ಬ್ಯಾಟಿಂಗ್ ಮಾಡಿ, ಬೌಲಿಂಗ್ ಮಾಡಿ ಮಿಂಚುತ್ತಿದ್ದಾರೆ. ಒಟ್ಟು ಎಂಟು ತಂಡಗಳು ಹೆಸರನ್ನ ನೊಂದಾಯಿಸಿಕೊಂಡಿದ್ದು, ಚಿಕ್ಕಮಗಳೂರಿನ ಐದು ತಂಡದ ಜೊತೆ ಬೆಂಗಳೂರು-ಮೈಸೂರು ಹಾಗೂ ಮಡಿಕೇರಿಯಿಂದಲೂ ತಂಡಗಳೂ ಭಾಗವಹಿಸಿವೆ. ಹುಡುಗಿಯರು-ಮಹಿಳೆಯರು ಇಬ್ಬರೂ ಸೇರೆ ತಂಡ ಮಾಡಿಕೊಂಡಿದ್ದು ಅಖಾಡದಲ್ಲಿ ಹುಡುಗರು ನಾಚಿಸುವಂತೆ ಬ್ಯಾಟಿಂಗ್-ಬೌಲಿಂಗ್ ಮಾಡ್ತಿದ್ದಾರೆ. ಮೊದಲ ಬಹುಮಾನ 1 ಲಕ್ಷ ಇದ್ರೆ, 2ನೇ ಬಹುಮಾನ 70 ಸಾವಿರ. 3ನೇ ಬಹುಮಾನ 50 ಸಾವಿರ ಮತ್ತು 4ನೇ ಬಹುಮಾನ 25 ಸಾವಿರ ಇದ್ದು, 1 ಲಕ್ಷದ ಗೆಲುವಿಗಾಗಿ ಮಹಿಳೆಯರು ಅಖಾಡದಲ್ಲಿ ಹೋರಾಡುತ್ತಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...