Home Latest News ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ
Latest NewschikamagalurHomenamma chikmagalur

ಸಮರ್ಪಕ ಪಡಿತರ ವಿತರಣೆಗೆ ರಾಜ್ಯ ಪಡಿತರ ಸಂಘ ಆಗ್ರಹ

Share
Share

ಚಿಕ್ಕಮಗಳೂರು:  ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು ೫ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು. ಅನ್ನಭಾಗ್ಯ ಅಕ್ಕಿಯ ಕಮಿಷನ್ ಹಣ ಬಿಡುಗಡೆ ಮಾಡಬೇಕು ಎಂದು ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿವಿಧ ಕಾರಣ ನೀಡಿ ಪಡಿತರವನ್ನು ಅಂಗಡಿ ಮಾಲೀಕರಿಗೆ ೧೫ನೇ ತಾರೀಖಿನಿಂದ ಎತ್ತುವಳಿ ನೀಡಲಾಗುತ್ತಿದೆ. ಇದರಿಂದ ಪಡಿತರದಾರರಿಗೆ ವಿತರಣೆ ಮಾಡುವುದು ತಡವಾಗುತ್ತಿದೆ ಎಂದು ತಿಳಿಸಿದರು.

ನಿತ್ಯ ಅಂಗಡಿ ಮುಂದೆ ಸರತಿ ಸಾಲು ಬೆಳೆಯುತ್ತದೆ. ಹೀಗಾಗಿ ಹಿಂದಿನ ಪದ್ದತಿಯಂತೆ ತಿಂಗಳ ೫ನೇ ತಾರೀಖಿನೊಳಗೆ ಪಡಿತರವನ್ನು ಎತ್ತುವಳಿ ಮಾಡಿಸಿದರೆ ವಿತರಣೆ ಮಾಡಲು ಅನುಕೂಲ ಆಗಲಿದೆ ಎಂದರು.

ಅಂಗಡಿ ಮಾಲೀಕರಿಗೆ ಬರಬೇಕಾದ ಅನ್ನಭಾಗ್ಯ ಅಕ್ಕಿಯ ಕಮಿಷನ್ ಹಣವನ್ನು ಆಯಾ ತಿಂಗಳಲ್ಲೇ ಪಾವತಿ ಮಾಡಬೇಕು. ಸುಮಾರು ೭ ವರ್ಷದಿಂದ ಇಕೆವೈಸಿ ಮಾಡಿರುವ ಹಣವೂ ಕೂಡ ಬಂದಿಲ್ಲ. ಪ್ರಸ್ತುತ ನ್ಯಾಯಬೆಲೆ ಅಂಗಡಿಗಳಿಗೆ ಬಿಲ್ಲಿಂಗ್ ಮಾಡಿದ ೨೪ ಗಂಟೆಗಳ ನಂತರ ಅಪ್‌ಡೇಟ್ ಆಗುತ್ತಿದೆ. ಕೂಡಲೇ ಈ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ ಬಿಲ್ ಹಾಕಿದ ಕೂಡಲೇ ಪಡಿತರ ವಿತರಣೆಗೆ ಅವಕಾಶ ಮಾಡಿಕೊಡಬೇಕು ಎಂದರು.

ರಾಜ್ಯ ಸರಕಾರ ಮುಂದೆ ೫ ಕಿಲೋ ಅಕ್ಕಿ ಬದಲಿಗೆ ಆಹಾರ ಪದಾರ್ಥಗಳ ಕಿಟ್ ನೀಡಲು ಮುಂದಾಗಿದೆ. ಕಿಟ್ ನೀಡಲಿ. ಆದರೆ, ಅಕ್ಕಿ ನೀಡುವುದನ್ನು ನಿಲ್ಲಿಸಬಾರದು. ಕಿಟ್ಟನ್ನು ನಾವು ಖರೀದಿಸಿ ಪಡಿತರದಾರರಿಂದ ಹಣ ಪಡೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಅಕ್ಕಿ ಪೂರೈಕೆ ನಿಲ್ಲಿಸಬಾರದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಚನ್ನಕೇಶವೇಗೌಡ, ಬಸವರಾಜ್, ದೇವರಾಜ್, ಸಿದ್ದೇಗೌಡ, ಎಂ.ಎಸ್ ಮಂಟೆಸ್ವಾಮಿ ಉಪಸ್ಥಿತರಿದ್ದರು

State Ration Association demands adequate ration distribution

Share

Leave a comment

Leave a Reply

Your email address will not be published. Required fields are marked *

Don't Miss

ತಾಯಿಗೆ ಬೆಂಕಿ ಹಾಕಿ ಕೊಂದ ಮಗ

ಚಿಕ್ಕಮಗಳೂರು: ತಾಯಿಯನ್ನು ಮಗ ಬೆಂಕಿ ಹಾಕಿ ಸುಟ್ಟು ಕೊಂದಿರುವ ಅಮಾನುಷ ಘಟನೆ ನಡೆದಿದೆ. ಆಲ್ದೂರು ಠಾಣೆ ವ್ಯಾಪ್ತಿಯ ಅರೆನೂರು ಗ್ರಾಮದಲ್ಲಿ ನಡೆದಿದ್ದು ವಿಷಯ ತಿಳಿದ ತಕ್ಷಣ ಪೊಲೀಸ್ ಸಿಬ್ಬಂದಿ ತೆರಳಿದ್ದಾರೆ. Son...

ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಸಖರಾಯಪಟ್ಟಣ ಹೋಬಳಿ ಅಗ್ರಹಾರ ಗ್ರಾಮದ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದ್ದು, ಉಭಯ ಕಡೆ ಅಹಿತಕರ ಘಟನೆ ನಡೆಯುವ ಸಂಭವವಿರುವುದರಿಂದ ಸ್ಥಳದಿಂದ ಒಂದು ಕಿ.ಮೀ. ವ್ಯಾಪ್ತಿಯವರೆಗೆ ಜುಲೈ ೨೮ ರಿಂದ...

Related Articles

ಆ.10ಕ್ಕೆ ಬಸವ ಮಾಚಿದೇವ ಶ್ರೀಗಳ ಸಾಮೂಹಿಕ ಪಾದಪೂಜೆ

ಚಿಕ್ಕಮಗಳೂರು: ಶ್ರಾವಣ ಮಾಸದ ಪೂಜೆ ಕಾರ್ಯಕ್ರಮದ ಅಂಗವಾಗಿ ಬಸವನಹಳ್ಳಿಯ ಜಿಲ್ಲಾ ಮಡಿವಾಳರ ಸಂಘದ ಆವರಣದಲ್ಲಿ ಆ.೧೦...

ಆ.7-8 ಕ್ಕೆ ಸಿಪಿಐ ಸಮಾವೇಶ-ಬಹಿರಂಗ ಅಧಿವೇಶನ

ಚಿಕ್ಕಮಗಳೂರು: ಭಾರತ ಕಮ್ಯುನಿಷ್ಟ ಪಾರ್ಟಿ ಸ್ಥಾಪನೆಯಾಗಿ ೧೦೦ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆ.೭ ಮತ್ತು ೮...

ಬೀದಿಗಿಳಿಯದ ಕೆಎಸ್‌ಆರ್‌ಟಿಸಿ ಬಸ್‌ಗಳು-ಜಿಲ್ಲೆಯಾದ್ಯಂತ ಪರದಾಡಿದ ಪ್ರಯಾಣಿಕರು

ಚಿಕ್ಕಮಗಳೂರು: ವೇತನ ಪರಿಷ್ಕರಣೆ, ಬಾಕಿ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಸಾರಿಗೆ ನೌಕರರು...

’ವಿಶ್ವ ಸ್ತನ್ಯಪಾನ ಸಪ್ತಾಹ’ – ೨೦೨೫

ಚಿಕ್ಕಮಗಳೂರು: ತಾಯಿ ಹಾಲು ಅದರ ಮಹತ್ವ ಮಗುವಿನ ಮೇಲಾಗುವ ಪ್ರಯೋಜನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಆಗಸ್ಟ್...