Home namma chikmagalur chikamagalur ಕೇಂದ್ರ ಬಜೆಟ್‌ ನಲ್ಲಿ ರಾಜ್ಯಕ್ಕೆ ಬಿಡಿಗಾಸು ನೀಡದೆ ಮಲತಾಯಿ ಧೋರಣೆ
chikamagalurHomeLatest Newsnamma chikmagalur

ಕೇಂದ್ರ ಬಜೆಟ್‌ ನಲ್ಲಿ ರಾಜ್ಯಕ್ಕೆ ಬಿಡಿಗಾಸು ನೀಡದೆ ಮಲತಾಯಿ ಧೋರಣೆ

Share
Share

ಚಿಕ್ಕಮಗಳೂರು: ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ರಾಜಕೀಯ ಲಾಭಕ್ಕೋಸ್ಕರ ಬಜೆಟ್‌ನಲ್ಲಿ ಹಣದ ಹೊಳೆಯನ್ನೇ ಹರಿಸಿರುವ ಕೇಂದ್ರ ಸರಕಾರ ಕರ್ನಾಟಕ ರಾಜ್ಯಕ್ಕೆ ಬಿಡಿಗಾಸನ್ನೂ ನೀಡದೆ ಮಲತಾಯಿ ಧೋರಣೆ ಅನುಸರಿಸಿದ್ದು, ರಾಜ್ಯದಿಂದ ಆರಿಸಿ ಹೋಗಿರುವ ಎಂಪಿಗಳು ತುಟಿ ಬಿಚ್ಚುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್ ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದ ಬಜೆಟ್ ಬಗ್ಗೆ ಜನ ಇಟ್ಟುಕೊಂಡಿದ್ದ ನಿರೀಕ್ಷೆ ಹುಸಿಯಾಗಿದೆ. ರಾಜ್ಯದಿಂದ ಎನ್‌ಡಿಎಗೆ ದೊಡ್ಡ ಕೊಡುಗೆ ನೀಡಲಾಗಿದೆ. ೧೮ ಮಂದಿ ಎಂಪಿಗಳನ್ನು ರಾಜ್ಯದಿಂದ ಗೆಲ್ಲಿಸಿ ಕಳುಹಿಸಲಾಗಿದೆ. ಇಲ್ಲಿನ ರೈತರು, ದಲಿತ, ಕಾರ್ಮಿಕ, ಅಲ್ಪಸಂಖ್ಯಾತರ ಬಗ್ಗೆ ಕಿಂಚಿತ್ತು ಆಲೋಚನೆ ಮಾಡದಿರುವ ಕೇಂದ್ರ ಸರಕಾರ ಜನಪರ ಯೋಜನೆಗಳಿಗೆ ಹಣವನ್ನೇ ನೀಡಿಲ್ಲ ಎಂದು ದೂರಿದರು.

ಜಿಲ್ಲೆಯ ಬಯಲು ಭಾಗದ ಕೆರೆ ತುಂಬಿಸುವ ಭದ್ರಾಕಣವೆ ಉಪಯೋಜನೆಗೆ ೫೩೦೦ ಕೋಟಿ ರೂ. ನೀಡಬೇಕಿತ್ತು. ಅದರಲ್ಲಿ ಬಿಡಿಗಾಸು ನೀಡಿಲ್ಲ. ಕರ್ನಾಟಕದ ವಿರೋಧಿಯಾಗಿ ಕೇಂದ್ರ ಸರಕಾರ ನಡೆದುಕೊಂಡಿದೆ. ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡಿದೆ ಎಂದು ಟೀಕಿಸಿದರು.

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ, ಉಗ್ರ ಹೋರಾಟ ಮಾಡುತ್ತೇವೆ ಎನ್ನುವವರು ಮಾತೆತ್ತಿದರೆ ಪಾಕಿಸ್ತಾನ, ಮುಸ್ಲಿಂರ ಬಗ್ಗೆ ಕೆಂಡಕಾರುವ ಸಿ.ಟಿ.ರವಿ ಬಜೆಟ್ ಅನ್ಯಾಯದ ಬಗ್ಗೆ ಏಕೆ ಪ್ರಶ್ನೆಮಾಡುತ್ತಿಲ್ಲ ಎಂದ ಅವರು, ಕೇಂದ್ರದಲ್ಲಿ ಸಚಿವರಾಗಿರುವ ಪ್ರಹ್ಲಾದಜೋಶಿ, ಶೋಭಾಕರಂದ್ಲಾಜೆ, ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ ಮತ್ತಿತರೆ ನಾಯಕರು ಇಲ್ಲಿ ಯಾವುದೋ ಸಣ್ಣ ವಿಚಾರಕ್ಕೆ ಬೊಂಬಡ ಹೊಡೆಯುತ್ತಾರೆ. ಕೇಂದ್ರದಿಂದ ಅನುದಾನ ಏಕೆ ತರಲಿಲ್ಲ. ಇವರಿಗೆ ಮೋದಿ, ಅಮಿತ್‌ಶಾ ಕಂಡರೆ ಭಯವೇ ಎಂದು ಪ್ರಶ್ನಿಸಿದರು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕರ್ನಾಟಕ ದೇಶದ ಒಂದು ಅವಿಭಾಜ್ಯ ಅಂಗ, ರಾಜಕೀಯ ಲಾಭಕ್ಕಾಗಿ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಸಿಂಹಪಾಲು ಅನುದಾನ ನೀಡಿ ರಾಜ್ಯಕ್ಕೆ ಬಿಡಿಗಾಸು ನೀಡದಿರುವ ಕೇದ್ರದ ನಡೆ ಘೋರ ಅನ್ಯಾಯ ಎಂದು ಗುಡುಗಿದರು.

ಪರಿಸ್ಥಿತಿ ಹೀಗೇ ಮುಂದುವರಿದರೆ ಎನ್‌ಡಿಎ ವಿರುದ್ಧ ಜನ ತಿರುಗಿ ಬೀಳುವ ಕಾಲ ದೂರವಿಲ್ಲ. ಅವರ ಯಾವುದೇ ಕಾರ್ಯಸೂಚಿಯನ್ನು ಜನ ಒಪ್ಪಿಕೊಳ್ಳದ ಮಟ್ಟಕ್ಕೆ ಹೋಗಲಿದ್ದಾರೆ ಮುಂದೆ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸಲಿದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಮಹಮದ್, ಆನಂದ್, ಶ್ರೀನಿವಾಸ್ ದೇವಾಂಗ, ಶಿವು ಹಿರೇಗೌಜ ಉಪಸ್ಥಿತರಿದ್ದರು.

Stepmotherly attitude of not giving a single penny to the state in the central budget

Share

Leave a comment

Leave a Reply

Your email address will not be published. Required fields are marked *

Don't Miss

ಕೇಂದ್ರ ಬಜೆಟ್‌ ನಲ್ಲಿ ರಾಜ್ಯಕ್ಕೆ ಬಿಡಿಗಾಸು ನೀಡದೆ ಮಲತಾಯಿ ಧೋರಣೆ

ಚಿಕ್ಕಮಗಳೂರು: ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ರಾಜಕೀಯ ಲಾಭಕ್ಕೋಸ್ಕರ ಬಜೆಟ್‌ನಲ್ಲಿ ಹಣದ ಹೊಳೆಯನ್ನೇ ಹರಿಸಿರುವ ಕೇಂದ್ರ ಸರಕಾರ ಕರ್ನಾಟಕ ರಾಜ್ಯಕ್ಕೆ ಬಿಡಿಗಾಸನ್ನೂ ನೀಡದೆ ಮಲತಾಯಿ ಧೋರಣೆ ಅನುಸರಿಸಿದ್ದು, ರಾಜ್ಯದಿಂದ ಆರಿಸಿ...

ಅಕ್ರಮ ಮದ್ಯ ಮಾರಾಟ-ಇಬ್ಬರ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ಬಣಕಲ್ ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರತ್ಯೇಕ ದಾಳಿ ನಡೆಸಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಬಣಕಲ್ ಪೊಲೀಸ್ ಠಾಣಾ...

Related Articles

ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಕ್ರೀಡಾಕೂಟ-ಸಾಂಸ್ಕೃತಿಕ ಸ್ಪರ್ಧೆ

ಚಿಕ್ಕಮಗಳೂರು:  ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ವರ್ಗದವರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆಬ್ರವರಿ ೨೧...

ಅನುಮಾನಗಳಿಗೆ ಎಡೆಮಾಡಿಕೊಟ್ಟ ಲಘು ವಿಮಾನ ಹಾರಾಟ

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಿಗೂಢವಾಗಿ ಹಾರಾಡಿದ ಲಘು ವಿಮಾನವೊಂದು ಸಾರ್ವಜನಿಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ....

ಶರಣರ ವಚನಗಳು ಮನುಷ್ಯನ ಆತ್ಮಾವಲೋಕನಕ್ಕೆ ಪ್ರೇರೇಪಿಸುವ ಶಕ್ತಿಗಳು

ಚಿಕ್ಕಮಗಳೂರು: ಶರಣರ ವಚನಗಳು ಕೇವಲ ರಚನೆಗಳಲ್ಲ. ಅವು ಮನುಷ್ಯನ ಆತ್ಮಾವಲೋಕನಕ್ಕೆ ಪ್ರೇರೇಪಿಸುವ ಶಕ್ತಿಗಳು ಎಂದು ಸಾಣೆಹಳ್ಳಿ...

ಸಮಾಜ ಪರಿವರ್ತನೆಗೆ ಶರಣ ಚಳುವಳಿಯೇ ಪರಿಹಾರ

ಚಿಕ್ಕಮಗಳೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ತನ್ನ...