Home namma chikmagalur chikamagalur ಕಬ್ಬಡ್ಡಿ ಪಂದ್ಯಾವಳಿ ಎಸ್‌ಟಿಜೆ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ
chikamagalurHomeLatest Newsnamma chikmagalur

ಕಬ್ಬಡ್ಡಿ ಪಂದ್ಯಾವಳಿ ಎಸ್‌ಟಿಜೆ ಕಾಲೇಜಿನ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ

Share
Share

ಚಿಕ್ಕಮಗಳೂರು:  ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಮಹಿಳಾ ಪದವಿ ಪೂರ್ವ ಕಾಲೇಜಿನ ಕುಮಾರಿ ಚಂದನ ಹಾಗೂ ಕುಮಾರಿ ತನುಶ್ರೀ ಇವರುಗಳು ರಾಜ್ಯಮಟ್ಟದ ಕಬ್ಬಡ್ಡಿಯಲ್ಲಿ ಜಯಗಳಿಸಿ ರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಶಾಲೆಯ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಡಾ. ವಿನಾಯಕ ಸಿಂದಿಗೆರೆ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಇಬ್ಬರು ವಿದ್ಯಾರ್ಥಿನಿಯರನ್ನು ಪರಮ ಪೂಜ್ಯ ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಅಭಿನಂದಿಸಿ ಆಶಿರ್ವದಿಸಿದ್ದಾರೆ ಎಂದರು.

ಭುವನೇಶ್ವರಿ ಪ್ರೌಢಶಾಲೆಯ ೧೦ನೇ ತರಗತಿಯ ವರ್ಷ, ೮ನೇ ತರಗತಿಯ ಸಿಂಚನ, ೯ನೇ ತರಗತಿ ಅಂಕಿತ ಇವರುಗಳು ಮಿನಿ ಒಲಂಪಿಕ್‌ನಲ್ಲಿ ಗೆಲುವು ಸಾಧಿಸಿದ್ದು, ಬಿ.ಎಲ್ ಪ್ರಿಯಾಂಕ ಇವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಹೇಳಿದರು.

ಈ ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾಗಿರುವ ಕೆ.ಟಿ.ವೆಂಕಟೇಶ್, ಎನ್.ಎಂ ನಾಗರಾಜ್, ಕಬ್ಬಡ್ಡಿ ತರಬೇತುದಾರರಾದ ಮಂಜುನಾಥ್ ಹಾಗೂ ಪಿ.ಮಹೇಶ್ ಇವರುಗಳ ನಿರಂತರ ತರಬೇತಿ ಕಾರಣವಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಭಾಗದ ಪ್ರತಿಭೆಗಳು ಉತ್ತಮ ತರಬೇತಿ ಮತ್ತು ಮಾರ್ಗದರ್ಶನ ದೊರಕಿದರೆ ರಾಷ್ಟ್ರಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸುತ್ತಾರೆಂಬುದಕ್ಕೆ ಈ ಬಾಲಕಿಯರು ಸ್ಪಷ್ಟ ನಿದರ್ಶನವಾಗಿದ್ದು, ಈ ಸಾಧನೆಗೆ ಶಾಲೆಯ ಎಲ್ಲಾ ಶಿಕ್ಷಕರು, ಪ್ರಾಂಶುಪಾಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆಂದರು.

ಈ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಜಯಗಳಿಸಿ ಜಿಲ್ಲೆಗೆ, ಕಾಲೇಜಿಗೆ, ಪೋಷಕರಿಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಾಚಾರ್ಯ ಶಿವನಗೌಡ ಕೆ ಸುರಕೋಡ, ಆಶಾಮಲ್ಲೇಶ್, ಭಾರತಿ, ಬಿ. ಚೇತನ, ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

STJ College students selected for national level kabaddi tournament

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...