ಚಿಕ್ಕಮಗಳೂರು: ತರೀಕೆರೆ ಪೊಲೀಸರ ಕಾರ್ಯಾಚರಣೆಯಿಂದ ೨೪ ಘಂಟೆಯೊಳಗೆ ಮನೆಗಳ್ಳನ ಮಾಡಿದ ವ್ಯಕ್ತಿಗಳನ್ನು ಬಂಧಿಸಿರುವ ಪೊಲೀಸರು ೮.೭೬ ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳು ಹಾಗೂ ೮.೯೦ ನಗದನ್ನು ವಶಪಡಿಸಿಕೊಂಡಿದ್ದಾರೆ.
ತರೀಕೆರೆಯ ಕೋಡಿಕ್ಯಾಂಪ್ ೯ನೇ ತಿರುವಿನ ಚಿಕ್ಕೇರೆಯ ತವಕ್ಕಲ್ಮುಸ್ತಾನ್ ಅವರ ಮನೆಯ ಶೀಟ್ ತೆಗೆದು ಡಿ ೨೦ರಂದು ಒಳನುಗ್ಗಿರುವ ಕಳ್ಳರು ೭೩.೫ ಗ್ರಾಂ ಚಿನ್ನಾಭರಣಗಳನ್ನು ಹಾಗೂ ೮.೯೦ ನಗದು ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಮನೆಯ ಮಾಲೀಕ ನೀಡಿದ ದೂರನ್ನು ತರೀಕೆರೆಪಟ್ಟಣ ಪೊಲೀಸರು ದಾಖಲಿಸಿಕೊಂಡಿದ್ದರು.
ಈ ಪ್ರಕರಣದ ಆರೋಪಿಯನ್ನು ಕೂಡಲೇ ಪತ್ತೆಹಚ್ಚುವಂತೆ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ ಅವರು ತರೀಕೆರೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿದ್ದರು. ಕೂಡಲೇ ಕಾರ್ಯಪ್ರವೃತ್ತದ ತಂಡ ಕೋಡಿಕ್ಯಾಂಪ್ ಚಿಕ್ಕೆರೆಯ ಸಯ್ಯದ್ಸಾಧಿಕ್ ಎಂಬಾತನನ್ನು ಇಂದು ಬಂಧಿಸಿ ಆರೋಪಿಯಿಂದ ಕಳ್ಳತನ ಮಾಡಿದ್ದ ಸುಮಾರು ೮.೭೬ ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ ೮.೯೦ ಲಕ್ಷ ರೂ. ನಗದದನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ವಿಶೇಷ ಕಾರ್ಯಾಚರಣೆಯು ಎಸ್ಪಿ ಡಾ.ವಿಕ್ರಮ್ಅಮಟೆ, ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಸಿ.ಟಿ. ಜಯಕುಮಾರ್, ತರೀಕೆರೆ ಡಿವೈಎಸ್ಪಿ ಪರಶುರಾಮಪ್ಪ, ಅವರ ಮಾರ್ಗದರ್ಶನದಲ್ಲಿ ತರೀಕೆರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ, ಠಾಣಾಧಿಕಾರಿಗಳಾದ ನಾಗೇಂದ್ರನಾಯ್ಕ್ ,ಮಂಜುನಾಥ್ ಮನ್ನಂಗಿ , ದೇವೇಂದ್ರ ರಾಥೋಡ್, ಎ.ಎಸ್.ಐ ರವಿ,ಮುಖ್ಯಪೇದೆ ಪ್ರಕಾಶ್ ಹಾಗೂ ಸಿಬ್ಬಂದಿಗಳಾದ, ರುದ್ರೇಶ್, ರಿಯಾಜ್, ಧನಂಜಯಸ್ವಾಮಿ, ಮಧು, ಕಾಂತರಾಜು, ರಾಜೇಶ, ಶ್ರೀನಿವಾಸ ಅವರುಗಳ ಕಾರ್ಯವನ್ನು ಜಿಲ್ಲಾಪೊಲೀಸ್ ಮುಖ್ಯಾಧಿಕಾರಿಗಳು ಶ್ಲಾಘಿಸಿದ್ದಾರೆ.
Stolen gold jewellery worth Rs. 8.76 lakh recovered
Leave a comment