Home namma chikmagalur ಕೋಮುದ್ವೇಷ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ
namma chikmagalurchikamagalurHomeLatest News

ಕೋಮುದ್ವೇಷ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

Share
Share

ಚಿಕ್ಕಮಗಳೂರು: ಬಾಬಾಬುಡನ್‌ಗಿರಿಯಲ್ಲಿ ಎರಡು ಸಮುದಾಯದ ಸಮಾನ ಸಂಖ್ಯೆಯ ಸಮಿತಿ ರಚಿಸಬೇಕು. ಹೊರಗಡೆಯಿಂದ ಬಂದು ಸುಳ್ಳುಸುದ್ದಿ ಹಬ್ಬಿಸಿ ಕೋಮುದ್ವೇಷ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಸಂಚಾಲಕ ಗೌಸ್ ಮೊಹಿಯುದ್ದೀನ್ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶ್ರೀ ಗುರು ದತ್ತಾತ್ರೇಯಸ್ವಾಮಿ ಬಾಬಾಬುಡನ್ ದರ್ಗಾವು ಸರ್ವ ಧರ್ಮೀಯರ ಸೌಹಾರ್ಧ ಕೇಂದ್ರವಾಗಿತ್ತು. ೧೯೭೫ ರಲ್ಲಿ ಈ ದರ್ಗಾವನ್ನು ಕರ್ನಾಟಕ ವಕ್ಫ್ ಸಂಸ್ಥೆಗೆ ವರ್ಗಾಯಿಸಿತು. ಇದು ಸರಕಾರ ಮಾಡಿದ ಮೊದಲ ಎಡವಟ್ಟು. ಸರಕಾರದ ಈ ಕ್ರಮವನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ನ್ಯಾಯಾಲಯದಲ್ಲಿ ದಾವೆ ಹೂಡಿದವು. ಇದನ್ನು ಪುರಸ್ಕರಿಸಿ ಮತ್ತೆ ಸರಕಾರ ಮುಜರಾಯಿ ಇಲಾಖೆಗೆ ಒಪ್ಪಿಸಿತು. ಇದರ ವಿರುದ್ಧ ವಕ್ಫ್ ಸಂಸ್ಥೆ ರಾಜ್ಯದ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿದೆ. ಇದು ವಕ್ಫ್ ಸಂಸ್ಥೆ ಮಾಡಿದ ಇನ್ನೊಂದು ಎಡವಟ್ಟು.

ಹೀಗಾಗಿ ಆಯಾ ಕಾಲಘಟ್ಟಕ್ಕೆ ನ್ಯಾಯಾಲಯದ ಸೂಚನೆಯಂತೆ ಅಲ್ಲಿ ಸರಕಾರ ಯಥಾಸ್ಥಿತಿ ಕಾಪಾಡಿಕೊಂಡು ಬಂದಿದೆ. ಈ ಮಧ್ಯೆ ಕೆಲ ಸಂಘಟನೆಗಳು ಅಲ್ಲಿ ದತ್ತಜಯಂತಿ ಕಾರ್ಯಕ್ರಮ ನಡೆಸುತ್ತಾ ಬರುತ್ತಿವೆ ಎಂದರು.

ದತ್ತಾತ್ರೇಯ ಸ್ವಾಮಿ ಬಾಬಾಬುಡನ್ ದರ್ಗಾದ ನಿರ್ವಹಣೆಗೆ ಎರಡೂ ಕೋಮಿನ ಸಮಾನ ಸಂಖ್ಯೆಯಲ್ಲಿರುವ ಸಮಿತಿ ರಚಿಸಬೇಕು. ಗಿರಿಯಲ್ಲಿ ಮಸ್ಲಿಂ ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಮಸೀದಿ ಬೇಕು. ಯಾತ್ರಿ ನಿವಾಸ ಅಗತ್ಯತೆ ಇದೆ. ಹಿಂದೂ ಮುಸ್ಲಿಂ ಎಂಬ ತಾರತಮ್ಯವಿಲ್ಲದೆ ಮುಜಾವರ್ ಮೂಲಕ ಭಕ್ತಿ ಸಲ್ಲಿಸಲು ಎಲ್ಲರಿಗೆ ಅವಕಾಶ ಕಲ್ಪಿಸಬೆಕು ಎಂದು ಆಗ್ರಹಿಸಿದರು.

ದತ್ತಮಾಲೆ ಮತ್ತು ದತ್ತಜಯಂತಿ ಸಂದರ್ಭದಲ್ಲಿ ಬಾಬಾಬುಡನ್‌ಗಿರಿಗೆ ತೆರಳುವ ಮಾರ್ಗಮಧ್ಯದಲ್ಲಿ ಅತ್ತಿಗುಂಡಿ, ಮಸೀದಿ ಮನೆಗಳಿಗೆ ಸೂಕ್ತ ರಕ್ಷಣೆ ನೀಡಬೇಕು. ಗುಹೆ ಒಳಗೆ ಪೂಜೆ, ಮುಜಾವರ್ ನೇತೃತ್ವದಲ್ಲಿ ನಡೆಯಬೇಕು. ಜಿಲ್ಲೆ ಹಾಗೂ ಹೊರಜಿಲ್ಲೆ ಎಲ್ಲಿಯೂ ಕೂಡ ಶಾಂತಿಭಂಗ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಳೆದ ೨ ತಿಂಗಳ ಹಿಂದೆ ಗುಹೆಯೊಳಗೆ ಮೂರ್ತಿಯೊಂದನ್ನು ತೆಗೆದುಕೊಂಡು ಹೋಗಿರುವುದಾಗಿ ಈಗಾಗಲೇ ಮೊಕದ್ದಮೆ ದಾಖಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ದಿವಾಕರ, ಗಣೇಶ್, ಸಂದೀಪ್, ಅರುಣ ಮತ್ತಿತರರಿದ್ದರು.

Strict legal action should be taken against those spreading communal hatred.

 

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...