Home Crime News ಪರೀಕ್ಷಾ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆ
Crime NewsHomeKadurLatest Newsnamma chikmagalur

ಪರೀಕ್ಷಾ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆ

Share
Share

ಕಡೂರು: ಪರೀಕ್ಷಾ ಭಯ ಹಾಗೂ ಅಧಿಕಾರಿಗಳ ಮಾತಿನಿಂದ ನೊಂದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ದುರದೃಷ್ಟಕರ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗ್ರಾಮ ಒಂದರಲ್ಲಿ ನಡೆದಿದೆ.

ಜನವರಿ 28ರಂದು ಮನೆಯಲ್ಲಿದ್ದ ಕೀಲು ನೋವು ಹಾಗೂ ಉಳುಕಿನ ಮಾತ್ರೆಗಳನ್ನು ಅತಿಯಾಗಿ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿಯನ್ನು ಕೂಡಲೇ ಕಡೂರು ಆಸ್ಪತ್ರೆಗೆ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.

ವಿದ್ಯಾರ್ಥಿನಿಯು 2ನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಲ್ಲಿದ್ದಳು ಎನ್ನಲಾಗಿದ್ದು, ಈ ನಡುವೆ ಬಿ.ಇ.ಓ. (ಕ್ಷೇತ್ರ ಶಿಕ್ಷಣಾಧಿಕಾರಿ) ಅವರು ಬಾಲಕಿಯ ಮನೆಗೆ ಭೇಟಿ ನೀಡಿ, “500ಕ್ಕೆ 93 ಅಂಕ ತೆಗೆದಿದ್ದೀಯಾ, ನೀನು ಪಾಸ್ ಆಡ್ತೀಯಾ?” ಎಂದು ಪ್ರಶ್ನಿಸಿ ಬುದ್ದಿ ಹೇಳಿದ್ದರು ಎನ್ನಲಾಗಿದೆ.

ಅಧಿಕಾರಿಯ ಈ ಮಾತಿನಿಂದ ವಿದ್ಯಾರ್ಥಿನಿ ತೀವ್ರವಾಗಿ ಮಂಕಾಗಿದ್ದಳು ಎಂದು ಹೇಳಲಾಗುತ್ತಿದೆ. ಮಗಳ ಸಾವಿನ ಬಗ್ಗೆ ಪೋಷಕರು ಯಾವುದೇ ದೂರು ನೀಡಲು ಮುಂದಾಗಿಲ್ಲವಾದರೂ, “ಬದುಕಿಗೆ ಅಂಕಗಳೇ ಮುಖ್ಯವಲ್ಲ, ಜೀವಕ್ಕೆ ಬೆಲೆಯಿಲ್ಲವೇ?” ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Student commits suicide due to exam fear

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...