ಜಯಪುರ: ಜಯಪುರದ ಸತ್ಯ ಸಾಯಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನು ನದಿ ಸ್ನಾನಕ್ಕೆ ತೆರಳಿದ ವೇಳೆ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಭಾನುವಾರ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಅನಿಕೇತ್ (13) ಎಂದು ಗುರುತಿಸಲಾಗಿದೆ. ಪುತ್ತೂರು ಮೂಲದ ಈತ ಕಳೆದ ಎರಡು ವರ್ಷಗಳಿಂದ ಜಯಪುರದ ಸತ್ಯಸಾಯಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಪ್ರಸ್ತುತ ಏಳನೇ ತರಗತಿಯಲ್ಲಿ ಓದುತ್ತಿದ್ದನು.
ಭಾನುವಾರ ಮಧ್ಯಾಹ್ನ ಮೂವರು ಶಿಕ್ಷಕರು ಹಾಗೂ ಸುಮಾರು 20 ವಿದ್ಯಾರ್ಥಿಗಳೊಂದಿಗೆ ನದಿ ಸ್ನಾನಕ್ಕೆ ತೆರಳಿದ ವೇಳೆ ಅನಿಕೇತ್ ಆಕಸ್ಮಿಕವಾಗಿ ನೀರಲ್ಲಿ ಮುಳುಗಿದ್ದಾನೆ. ತಕ್ಷಣವೇ ಆತನನ್ನು ರಕ್ಷಿಸಿ ಜಯಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಈ ಕುರಿತು ಜಯಪುರ ಪೊಲೀಸ್ ಠಾಣೆಯ ಪಿ ಎಸ್ ಐ ರವೀಶ್ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Student drowns while taking a bath in river
Leave a comment