Home Crime News ಕೊಳಲು ನುಡಿಸುವ ಆಸೆ, ಓದಲು ಇಷ್ಟವಿಲ್ಲ: ವಿದ್ಯಾರ್ಥಿ ಆತ್ಮಹತ್ಯೆ
Crime News

ಕೊಳಲು ನುಡಿಸುವ ಆಸೆ, ಓದಲು ಇಷ್ಟವಿಲ್ಲ: ವಿದ್ಯಾರ್ಥಿ ಆತ್ಮಹತ್ಯೆ

Share
student suicide in sringeri
Share

Sringeri NEWS, 3 OCTOBER 2024 : ಕೊಳಲು ನುಡಿಸುವ ಆಸೆ ಇದ್ದ ಹತ್ತನೇ ತರಗತಿ ವಿದ್ಯಾರ್ಥಿ ಓದಲು ಇಷ್ಟವಿಲ್ಲದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಹತ್ತನೇ ತರಗತಿಯ ಧ್ರುವ ಎಂದು ಗುರುತಿಸಲಾಗಿದೆ. ಮೃತ ಧ್ರುವ ಮೂಲತಃ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನವನು. ಶೃಂಗೇರಿ ಪಟ್ಟಣದಲ್ಲಿ ಪಿಜಿಯಲ್ಲಿ ಇದ್ದುಕೊಂಡು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು.

ಮೃತ ವಿದ್ಯಾರ್ಥಿ ಧ್ರುವನಿಗೆ ಓದಿನಲ್ಲಿ ಆಸಕ್ತಿ ಇರಲಿಲ್ಲ. ಕೊಳಲು ನುಡಿಸಲು ಹೆಚ್ಚಿನ ಆಸಕ್ತಿ ಹೊಂದಿದ್ದನು. ಪೋಷಕರು ಹತ್ತನೇ ತರಗತಿ ಮುಗಿಯಲಿ ಆಮೇಲೆ ಹೋಗುವಂತೆ ಎಂದು ಪೋಷಕರು ಬುದ್ಧಿ ಹೇಳಿದ್ದರು ಎಂದು ತಿಳಿದುಬಂದಿದೆ.

ಆದರೆ, 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಗೆ ಧ್ರುವ ಎರಡು ದಿನಗಳಿಂದ ಹೋಗಿರಲಿಲ್ಲ. ಈ ಬಗ್ಗೆ ಮೃತ ಬಾಲಕ ಧ್ರುವ ಅಜ್ಜನಿಗೆ ಶಾಲೆಯ ಮುಖ್ಯಸ್ಥರು ಫೋನ್ ಮಾಡಿ ಹೇಳಿದ್ದರು. ಶೃಂಗೇರಿ ಪಟ್ಟಣದ ಪಿಜಿವೊಂದರಲ್ಲಿ ಧ್ರುವ ಇದ್ದ ರೂಮಿಗೆ ಬಂದು ತಾತ ನೋಡಿದಾಗ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು.

ಧ್ರುವ ಆರಂಭದಲ್ಲಿ ಶೃಂಗೇರಿ ಪಟ್ಟಣದ ಸಮೀಪದ ಹಳ್ಳಿಯಿಂದ ನಿತ್ಯ ಶಾಲೆಗೆ ಬಂದು ಹೋಗುತ್ತಿದ್ದನು. ಆದರೆ, ಆ ಮಾರ್ಗದಲ್ಲಿ ಆನೆ ಕಂಡು ಶಾಲೆಗೆ ಬರಲು ಭಯವಾಗಿ ಪಿಜಿಯಲ್ಲೇ ಇದ್ದನು. ಇಂದು ಪಿಜಿಯ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

127 K.G ಚಿನ್ನದ ಕಳ್ಳಿ ರನ್ಯಾರಾವ್ ಗೆ 102 ಕೋಟಿ ದಂಡ

ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಚಿತ್ರನಟಿ ರನ್ಯಾ ರಾವ್ ವಿದೇಶದಿಂದ 127ಕೆ,ಜಿ,ಚಿನ್ನ ಕದ್ದು ತಂದು ಕಂದಾಯ ಗುಪ್ತಚರ...

ಚಿನ್ನ ಕಳ್ಳಸಾಗಣೆ ಪ್ರಕರಣ: ₹277 ಕೋಟಿ ದಂಡ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ₹277 ಕೋಟಿ ದಂಡ ಪಾವತಿಸಿ ಎಂದು ರೆವೆನ್ಯು ಗುಪ್ತಚರ ನಿರ್ದೇಶನಾಲಯವು...

ಅಸ್ಸಾಂ ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿಗಳು ಕಾಫಿನಾಡಿನಲ್ಲಿ ಅರೆಸ್ಟ್

ಚಿಕ್ಕಮಗಳೂರು: ಪೋಕ್ಸೋ ಪ್ರಕರಣದಡಿ ಬಂಧನಕ್ಕೊಳಗಾಗಿ ಅಸ್ಸಾಂ ರಾಜ್ಯದ ಮೋರಿಗಾನ್ ಜಿಲ್ಲಾ ಕಾರಾಗೃಹದಲ್ಲಿ ಸಜಾ ಬಂಧಿಗಳಾಗಿದ್ದ ಇಬ್ಬರು...

ಪುನಗು ಬೆಕ್ಕು ಬೇಟೆಯಾಡಿದವನ ಬಂಧನ

ಚಿಕ್ಕಮಗಳೂರು:  ತಾಲೂಕಿನ ಉದ್ದೆಬೋರನಹಳ್ಳಿ ವ್ಯಾಪ್ತಿಯ ಪಾದುಮನೆ ಗ್ರಾಮದಲ್ಲಿ ಪುನುಗು ಬೆಕ್ಕು ಬೇಟೆಯಾಡಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ...