Home Crime News ಕೊಳಲು ನುಡಿಸುವ ಆಸೆ, ಓದಲು ಇಷ್ಟವಿಲ್ಲ: ವಿದ್ಯಾರ್ಥಿ ಆತ್ಮಹತ್ಯೆ
Crime News

ಕೊಳಲು ನುಡಿಸುವ ಆಸೆ, ಓದಲು ಇಷ್ಟವಿಲ್ಲ: ವಿದ್ಯಾರ್ಥಿ ಆತ್ಮಹತ್ಯೆ

Share
student suicide in sringeri
Share

Sringeri NEWS, 3 OCTOBER 2024 : ಕೊಳಲು ನುಡಿಸುವ ಆಸೆ ಇದ್ದ ಹತ್ತನೇ ತರಗತಿ ವಿದ್ಯಾರ್ಥಿ ಓದಲು ಇಷ್ಟವಿಲ್ಲದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಹತ್ತನೇ ತರಗತಿಯ ಧ್ರುವ ಎಂದು ಗುರುತಿಸಲಾಗಿದೆ. ಮೃತ ಧ್ರುವ ಮೂಲತಃ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನವನು. ಶೃಂಗೇರಿ ಪಟ್ಟಣದಲ್ಲಿ ಪಿಜಿಯಲ್ಲಿ ಇದ್ದುಕೊಂಡು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು.

ಮೃತ ವಿದ್ಯಾರ್ಥಿ ಧ್ರುವನಿಗೆ ಓದಿನಲ್ಲಿ ಆಸಕ್ತಿ ಇರಲಿಲ್ಲ. ಕೊಳಲು ನುಡಿಸಲು ಹೆಚ್ಚಿನ ಆಸಕ್ತಿ ಹೊಂದಿದ್ದನು. ಪೋಷಕರು ಹತ್ತನೇ ತರಗತಿ ಮುಗಿಯಲಿ ಆಮೇಲೆ ಹೋಗುವಂತೆ ಎಂದು ಪೋಷಕರು ಬುದ್ಧಿ ಹೇಳಿದ್ದರು ಎಂದು ತಿಳಿದುಬಂದಿದೆ.

ಆದರೆ, 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಗೆ ಧ್ರುವ ಎರಡು ದಿನಗಳಿಂದ ಹೋಗಿರಲಿಲ್ಲ. ಈ ಬಗ್ಗೆ ಮೃತ ಬಾಲಕ ಧ್ರುವ ಅಜ್ಜನಿಗೆ ಶಾಲೆಯ ಮುಖ್ಯಸ್ಥರು ಫೋನ್ ಮಾಡಿ ಹೇಳಿದ್ದರು. ಶೃಂಗೇರಿ ಪಟ್ಟಣದ ಪಿಜಿವೊಂದರಲ್ಲಿ ಧ್ರುವ ಇದ್ದ ರೂಮಿಗೆ ಬಂದು ತಾತ ನೋಡಿದಾಗ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದನು.

ಧ್ರುವ ಆರಂಭದಲ್ಲಿ ಶೃಂಗೇರಿ ಪಟ್ಟಣದ ಸಮೀಪದ ಹಳ್ಳಿಯಿಂದ ನಿತ್ಯ ಶಾಲೆಗೆ ಬಂದು ಹೋಗುತ್ತಿದ್ದನು. ಆದರೆ, ಆ ಮಾರ್ಗದಲ್ಲಿ ಆನೆ ಕಂಡು ಶಾಲೆಗೆ ಬರಲು ಭಯವಾಗಿ ಪಿಜಿಯಲ್ಲೇ ಇದ್ದನು. ಇಂದು ಪಿಜಿಯ ತನ್ನ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...