Home namma chikmagalur ಆದಿವಾಸಿ ಪ್ರದೇಶದ ಹೋಂಸ್ಟೇ ನಿರ್ಮಾಣಕ್ಕೆ ಸಹಾಯಧನ
namma chikmagalurchikamagalurHomeLatest News

ಆದಿವಾಸಿ ಪ್ರದೇಶದ ಹೋಂಸ್ಟೇ ನಿರ್ಮಾಣಕ್ಕೆ ಸಹಾಯಧನ

Share
Share

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಮತ್ತು ಪ್ರಧಾನ ಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನದ ಅಧೀನದಲ್ಲಿ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ ಯೋಜನೆಯ ಉಪಯೋಜನೆಯಾಗಿ ಆದಿವಾಸಿ ಪ್ರದೇಶಗಳಲ್ಲಿ ಹೋಂಸ್ಟೇ ಅಭಿವೃದ್ಧಿಗೆ ಸಹಾಯಧನ ನೀಡಲಾಗುತ್ತಿದೆ.

ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರು ಗ್ರಾಮ ಪಂಚಾಯಿತಿಯ ಮಲನಾಡು ಗ್ರಾಮ, ಕೊಪ್ಪ ತಾಲ್ಲೂಕಿನ ಗುಡ್ಡೆ ತೋಟ ಗ್ರಾಮ ಪಂಚಾಯಿತಿಯ ಮೇಗೂರು ಗ್ರಾಮ, ಅಜ್ಜಂಪುರ ತಾಲ್ಲೂಕಿನ ಬೇಗೂರು ಗ್ರಾಮ ಪಂಚಾಯಿತಿಯ, ಭೂತನಕಾಡು ಗ್ರಾಮಗಳನ್ನು ಗುರುತಿಸಲಾಗಿದ್ದು, ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಹೋಂಸ್ಟೇ ನಿರ್ಮಿಸಲು ರೂ.೫ ಲಕ್ಷ, ನವೀಕರಿಸಲು ರೂ. ೩ ಲಕ್ಷ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು,

ಬುಡಕಟ್ಟು ಸಮುದಾಯವಿರುವ ಗ್ರಾಮಗಳಲ್ಲಿ ಆತಿಥ್ಯ ಕ್ಷೇತ್ರದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸುವುದಾಗಿದೆ. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳ ಬುಡಕಟ್ಟು ಜನಾಂಗದವರು ಈ ಯೋಜನೆಯನ್ನು ಉಪಯೋಗಿಸಿಕೊಳ್ಳಲು ಅರ್ಹ ಆಸಕ್ತ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ (ಪರಿಶಿ? ಪಂಗಡ), ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಲರೇಶನ್ ಫಾರ್ಮ್, ಗ್ರಾಮ ಪಂಚಾಯಿತಿಯ ಎನ್.ಒ.ಸಿ., ಪೋಲೀಸ್ ಇಲಾಖೆಯ ಎನ್.ಒ.ಸಿ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಆಗಸ್ಟ್ ೧೧ ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ (೦೮೨೬೨-೨೯೫೪೨೨, ೭೮೯೨೮೮೬೮೭೫) (ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರು)ಯನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subsidy for construction of homestays in tribal areas

Share

Leave a comment

Leave a Reply

Your email address will not be published. Required fields are marked *

Don't Miss

ಹುಯಿಗೆರೆ ಗ್ರಾಮ ಬಳಿ ಕಾಡಾನೆ ದಾಳಿಗೆ ಕೃಷಿಕನ ಸಾವು

ಬಾಳೆಹೊನ್ನೂರು: ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡವಾನೆ ಜಾಗರ ಬಳಿ ಕೃಷಿಕ ಸಬ್ರಾಯಗೌಡ (65) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾನುವಾರ...

ವೇದಾನದಿಯಿಂದ ಕೆರೆ ತುಂಬಿಸುವ ಯೋಜನೆ ಸ್ಥಗಿತಗೊಳಿಸಬೇಕು

ಚಿಕ್ಕಮಗಳೂರು:  ವೇದಾ ನದಿಯ ಅಗ್ರಹಾರ ಬಳಿ ಇರುವ ಚೆಕ್‌ಡ್ಯಾಂನಿಂದ ಹುಲಿಕೆರೆ, ಬೆರಟಿಕೆರೆ, ನಾಗೇನಹಳ್ಳಿಯ ಕೆರೆಗಳಿಗೆ ನೀರೊದಗಿಸುವುದನ್ನು ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟವನ್ನು ನಡೆಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಎಚ್ಚರಿಸಿದೆ....

Related Articles

ಗಿರಿಗೆ ತೆರಳಲು ಪಾಸ್ ಕಡ್ಡಾಯ ನಿರ್ಧಾರ ರದ್ದುಪಡಿಸುವಂತೆ ಆಗ್ರಹ

ಚಿಕ್ಕಮಗಳೂರು:  ಗುರುದತ್ತಾತ್ರೇಯ ಸ್ವಾಮಿ ಬಾಬಾಬುಡನ್‌ಗಿರಿ ದರ್ಗಾ ವ್ಯಾಪ್ತಿಯ ಸಂಚಾರಕ್ಕೆ ಸ್ಥಳೀಯ ನಿವಾಸಿಗಳಿಗೆ ಪಾಸ್ ಕಡ್ಡಾಯ ಮಾಡಲು...

ಸೈಕಲ್‌ನಲ್ಲಿ ಧರ್ಮಸ್ಥಳ ತೆರಳಲು ನಗರಕ್ಕಾಗಮಿಸಿದ ಯುವಕರ ತಂಡ

ಚಿಕ್ಕಮಗಳೂರು: ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾ ಮಿ ಸನ್ನಿಧಾನಕ್ಕೆ ತೆರಳಲು ವಿಜಯನಗರ...

೨ ಕೋಟಿ ರೂ ವೆಚ್ಚದಲ್ಲಿ ನಗರದ ಡಾ. ಅಂಬೇಡ್ಕರ್ ಭವನ

ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಡಾ. ಅಂಬೇಡ್ಕರ್ ಭವನವನ್ನು ಸುಮಾರು ೨ ಕೋಟಿ ರೂ ವೆಚ್ಚದಲ್ಲಿ...

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರಿಗೆ ಸಮವಸ್ತ್ರ ವಿತರಣೆ

ಚಿಕ್ಕಮಗಳೂರು: ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ...