Home namma chikmagalur ಆದಿವಾಸಿ ಪ್ರದೇಶದ ಹೋಂಸ್ಟೇ ನಿರ್ಮಾಣಕ್ಕೆ ಸಹಾಯಧನ
namma chikmagalurchikamagalurHomeLatest News

ಆದಿವಾಸಿ ಪ್ರದೇಶದ ಹೋಂಸ್ಟೇ ನಿರ್ಮಾಣಕ್ಕೆ ಸಹಾಯಧನ

Share
Share

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಮತ್ತು ಪ್ರಧಾನ ಮಂತ್ರಿ ಜನಜಾತೀಯ ಉನ್ನತ ಗ್ರಾಮ ಅಭಿಯಾನದ ಅಧೀನದಲ್ಲಿ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ ಯೋಜನೆಯ ಉಪಯೋಜನೆಯಾಗಿ ಆದಿವಾಸಿ ಪ್ರದೇಶಗಳಲ್ಲಿ ಹೋಂಸ್ಟೇ ಅಭಿವೃದ್ಧಿಗೆ ಸಹಾಯಧನ ನೀಡಲಾಗುತ್ತಿದೆ.

ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ನೆಮ್ಮಾರು ಗ್ರಾಮ ಪಂಚಾಯಿತಿಯ ಮಲನಾಡು ಗ್ರಾಮ, ಕೊಪ್ಪ ತಾಲ್ಲೂಕಿನ ಗುಡ್ಡೆ ತೋಟ ಗ್ರಾಮ ಪಂಚಾಯಿತಿಯ ಮೇಗೂರು ಗ್ರಾಮ, ಅಜ್ಜಂಪುರ ತಾಲ್ಲೂಕಿನ ಬೇಗೂರು ಗ್ರಾಮ ಪಂಚಾಯಿತಿಯ, ಭೂತನಕಾಡು ಗ್ರಾಮಗಳನ್ನು ಗುರುತಿಸಲಾಗಿದ್ದು, ಈ ಗ್ರಾಮಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಹೋಂಸ್ಟೇ ನಿರ್ಮಿಸಲು ರೂ.೫ ಲಕ್ಷ, ನವೀಕರಿಸಲು ರೂ. ೩ ಲಕ್ಷ ಸಹಾಯಧನ ನೀಡುವ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು,

ಬುಡಕಟ್ಟು ಸಮುದಾಯವಿರುವ ಗ್ರಾಮಗಳಲ್ಲಿ ಆತಿಥ್ಯ ಕ್ಷೇತ್ರದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಬುಡಕಟ್ಟು ಸಮುದಾಯದ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪತ್ತನ್ನು ಪ್ರವಾಸಿಗರಿಗೆ ಪರಿಚಯಿಸುವುದಾಗಿದೆ. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳ ಬುಡಕಟ್ಟು ಜನಾಂಗದವರು ಈ ಯೋಜನೆಯನ್ನು ಉಪಯೋಗಿಸಿಕೊಳ್ಳಲು ಅರ್ಹ ಆಸಕ್ತ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು ಅವಶ್ಯಕ ದಾಖಲೆಗಳಾದ ಜಾತಿ ಪ್ರಮಾಣ ಪತ್ರ (ಪರಿಶಿ? ಪಂಗಡ), ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್, ಮನೆಯ ದಾಖಲೆ, ಮನೆಯ ಪೋಟೋ, ಡಿಕ್ಲರೇಶನ್ ಫಾರ್ಮ್, ಗ್ರಾಮ ಪಂಚಾಯಿತಿಯ ಎನ್.ಒ.ಸಿ., ಪೋಲೀಸ್ ಇಲಾಖೆಯ ಎನ್.ಒ.ಸಿ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಆಗಸ್ಟ್ ೧೧ ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ (೦೮೨೬೨-೨೯೫೪೨೨, ೭೮೯೨೮೮೬೮೭೫) (ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರು)ಯನ್ನು ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subsidy for construction of homestays in tribal areas

Share

Leave a comment

Leave a Reply

Your email address will not be published. Required fields are marked *

Don't Miss

ಲಾರಿ ಡಿಕ್ಕಿಗೆ ಪಶುವೈದ್ಯಕೀಯ ಇಲಾಖೆ ಸಿಬ್ಬಂದಿ ಸಾವು

ಅಜ್ಜಂಪುರ: ಕರ್ತವ್ಯಕ್ಕೆ ತೆರಳುತ್ತಿದ್ದ ಸ್ಕೂಟಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಶುವೈದ್ಯಕೀಯ ಇಲಾಖೆಯ ಅಟೆಂಡರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಿರಿಯಾಪುರದ ಜ್ಞಾನ ದೀಪ ಶಾಲೆ...

ವಿದ್ಯುತ್ ಸ್ಪರ್ಶ: ಬೇಲಿ ಕಟಾವು ಮಾಡುತ್ತಿದ್ದ ವಾಚ್‌ಮನ್ ಸಾವು

ತರೀಕೆರೆ: ತೋಟದ ಬೇಲಿ ಕಟಾವು ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಾಚ್‌ಮನ್ ಮೃತಪಟ್ಟಿರುವ ಘಟನೆ ತರೀಕೆರೆ ಪಟ್ಟಣದ ಗಾಳಿಹಳ್ಳಿ ಕ್ರಾಸ್‌ನಲ್ಲಿ ಆ.20ರಂದು ನಡೆದಿದೆ. ಮೃತರನ್ನು ಲಿಂಗದಹಳ್ಳಿ ಕಾವಲ್ ಆರ್.ಸಿ. ಕಾಲೋನಿ...

Related Articles

ಕಾಫಿನಾಡಿನಲ್ಲಿ ಎಚ್1ಎನ್1 ಪ್ರಕರಣ ಏರಿಕೆ: 24 ಮಂದಿಗೆ ಸೋಂಕು ದೃಢ

ಚಿಕ್ಕಮಗಳೂರು:  ಕಾಫಿನಾಡಿನಲ್ಲಿ ಕಳೆದೊಂದು ವಾರದಿಂದ ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜ್ವರ, ನೆಗಡಿ, ಕೆಮ್ಮು ಹಾಗೂ...

ಉಪ ಪೊಲೀಸ್ ಠಾಣೆಗಳ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯ

ಚಿಕ್ಕಮಗಳೂರು:  ಜಿಲ್ಲೆಯ ಕೆಲವು ಕಡೆ ಉಪ ಪೊಲೀಸ್ ಠಾಣೆಗಳನ್ನು ತೆರೆಯುವಂತೆ ಕಾಂಗ್ರೆಸ್ ಮುಖಂಡ ಉಪ್ಪಳ್ಳಿ ಕೆ.ಭರತ್...

ಆಲ್ದೂರಿನಲ್ಲಿ ಟೈಲ್ಸ್ ಮೇಲೆ ಜಾರಿ ಬಿದ್ದ ರೈತ ಸಾವು

ಆಲ್ದೂರು: ಅಡುಗೆ ಮನೆಯ ನೆಲದ ಮೇಲೆ ಬಿದ್ದಿದ್ದ ನೀರನ್ನು ಗಮನಿಸದೆ ಟೈಲ್ಸ್ ಮೇಲೆ ಕಾಲಿಟ್ಟು ಜಾರಿ...

ಕಲ್ಯಾಣನಗರ 5ನೇ ಕ್ರಾಸ್‌ನಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು

ಚಿಕ್ಕಮಗಳೂರು: ಭಜನೆ ಮುಗಿಸಿಕೊಂಡು ಸ್ನೇಹಿತೆಯೊಂದಿಗೆ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಗೃಹಿಣಿಯೊಬ್ಬರ ಕುತ್ತಿಗೆಯಿಂದ ಬೈಕ್‌ನಲ್ಲಿ ಬಂದ ಇಬ್ಬರು...